AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಪಡೆಯ ಮಡಿಲಿಗೆ ಸೇರಲಿದೆ 6 ಹೊಸ ನೇತ್ರಾ-I ಕಣ್ಗಾವಲು ವಿಮಾನ

Netra-I: ಸೇನೆಯಲ್ಲಿ ಮೇಕ್​​​​​ ಇನ್​​ ಇಂಡಿಯಾ ಯೋಜನೆ ಮೂಲಕವೇ ಹೊಸ ಹೊಸ ಸೇನಾ ತಂತ್ರಜ್ಞಾನಗಳನ್ನು ಬಳಸುತ್ತಿದೆ. ಇದೀಗ ಇದಕ್ಕೆ ಸಾಕ್ಷಿ ಎಂಬಂತೆ ಭಾರತೀಯ ವಾಯುಸೇನೆಯು 6 ಸ್ವದೇಶಿ ನೇತ್ರಾ-I ಕಣ್ಗಾವಲು ವಿಮಾನಗಳನ್ನು ಖರೀದಿಸಲು ಸಿದ್ಧವಾಗಿದೆ.

ವಾಯುಪಡೆಯ ಮಡಿಲಿಗೆ ಸೇರಲಿದೆ 6 ಹೊಸ ನೇತ್ರಾ-I ಕಣ್ಗಾವಲು ವಿಮಾನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 22, 2023 | 11:23 AM

Share

ದೆಹಲಿ, ಸೆ.22: ಭಾರತದ ಆರ್ಥಿಕವಾಗಿ, ಸಾಮಾಜಿಕವಾಗಿ ಜಗತ್ತಿನ ಮುಂದೆ ಎತ್ತರಕ್ಕೆ ಬೆಳೆಯುತ್ತಿದೆ. ಇದೀಗ ತಂತ್ರಜ್ಞಾನದಲ್ಲೂ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಿದೆ. ಇನ್ನು ಸೇನೆಯಲ್ಲಿ ಮೇಕ್​​​​​ ಇನ್​​ ಇಂಡಿಯಾ ಯೋಜನೆ ಮೂಲಕವೇ ಹೊಸ ಹೊಸ ಸೇನಾ ತಂತ್ರಜ್ಞಾನಗಳನ್ನು ಬಳಸುತ್ತಿದೆ. ಇದೀಗ ಇದಕ್ಕೆ ಸಾಕ್ಷಿ ಎಂಬಂತೆ ಭಾರತೀಯ ವಾಯುಸೇನೆಯು 6 ಸ್ವದೇಶಿ ನೇತ್ರಾ-I (Netra-I) ಕಣ್ಗಾವಲು ವಿಮಾನಗಳನ್ನು ಖರೀದಿಸಲು ಸಿದ್ಧವಾಗಿದೆ. Netra-I, ಏರ್‌ಬೋರ್ನ್ ಅರ್ಲಿ ವಾರ್ನಿಂಗ್ ಮತ್ತು ಕಂಟ್ರೋಲ್ ಏರ್‌ಕ್ರಾಫ್ಟ್ ಪ್ರೋಗ್ರಾಂ ಬ್ರೆಜಿಲಿಯನ್ ಎಂಬ್ರೇರ್ ವಿಮಾನವನ್ನು ಆಧರಿಸಿದೆ ಎಂದು ಸೇನೆ ಹೇಳಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಭಿವೃದ್ಧಿಪಡಿಸಿದ ಎರಡು ನೇತ್ರಾ-I ವಿಮಾನಗಳನ್ನು ಈಗಾಗಲೇ ಭಾರತೀಯ ವಾಯುಪಡೆ ಹೊಂದಿದೆ. ಇನ್ನು 6 ಹೊಸ ನೇತ್ರಾ-I ವಿಮಾನಗಳನ್ನು ತನ್ನ ಮಡಿಲಿಗೆ ಸೇರಿಸಿಕೊಳ್ಳಲಿದೆ. ಯೋಜನೆ ಪ್ರಕಾರ ಈ ವಿಮಾನವನ್ನು DRDO ಅಭಿವೃದ್ಧಿಪಡಿಸಲಿದೆ. ಈ ಯೋಜನೆಗಾಗಿ ವಾಯುಪಡೆಗೆ 8,000 ಕೋಟಿ ರೂಪಾಯಿಗಳ ಯೋಜನೆ ಒದಗಿಸಲಾಗಿದೆ.

ಇದನ್ನೂ ಓದಿ:ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡ ಹೆರಾನ್ ಮಾರ್ಕ್​ 2 ಡ್ರೋನ್​ನ ವೈಶಿಷ್ಟ್ಯವೇನು? 

ಇನ್ನು ಎಂಬ್ರೇರ್ ಇಆರ್‌ಜೆ-145 ವಿಮಾನವನ್ನು ಮಾರ್ಪಡಿಸಿ ಈ ಕಣ್ಗಾವಲು ವಿಮಾನಗಳನ್ನು ತಯಾರಿಸಲಾಗುವುದು. ಡಿಆರ್‌ಡಿಒ ಈ ಹಿಂದೆ 330 ವಿಮಾನಗಳಲ್ಲಿ ಆರು ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆಗಳಿಗೆ (AWACS) ನಿಯೋಜಿಸಿತ್ತು. ಇದರ ತಯಾರಿಗಾಗಿ ಬೆಂಗಳೂರಿನ ವಾಯು ನೆಲೆಯಲ್ಲಿ ಸೌಲಭ್ಯವನ್ನು ಮಾಡಲಾಗಿದೆ. ನೇತ್ರಾ-2 ಯೋಜನೆಗಾಗಿ A-321 ವಿಮಾನವನ್ನು ಮಾರ್ಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ವರದಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?