
ರಾಯ್ಪುರ: ಛತ್ತೀಸ್ಗಢ ರಾಜ್ಯದ ದಾಂತೇವಾಡ ಜಿಲ್ಲೆಯ ಬಾರ್ಸೂರ್-ಗಿಧಂ ಬಳಿ ರಾಮಮಂದಿರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೊ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ. ಅತಿ ವೇಗದಿಂದಾಗಿಯೇ ಕಾರು ಅಪಘಾತವಾಗಿದೆ.
ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಕಾರಣ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.