AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಭೀಕರ ಅಪಘಾತ; ಅಂತ್ಯಕ್ರಿಯೆ ಮುಗಿಸಿ ವಾಪಸ್​​ ಬರುತ್ತಿದ್ದ ಆರು ಮಂದಿ ಸಾವು

ಟ್ರಕ್​ ಹಾಗೂ ಎಸ್​ಯುವಿ ಡಿಕ್ಕಿಯ ರಭಸಕ್ಕೆ ಎಸ್​ಯುವಿ  ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದಂತೆ ಗಾಯಗೊಂಡ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಬಿಹಾರದಲ್ಲಿ ಭೀಕರ ಅಪಘಾತ; ಅಂತ್ಯಕ್ರಿಯೆ ಮುಗಿಸಿ ವಾಪಸ್​​ ಬರುತ್ತಿದ್ದ ಆರು ಮಂದಿ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 16, 2021 | 9:51 AM

Share

ಬಿಹಾರದ ಜಮುಯಿ ಎಂಬಲ್ಲಿ ಟ್ರಕ್​​ ಮತ್ತು ಎಸ್​ಯುವಿ ವಾಹನದ ನಡುವೆ  ಭೀಕರ ಅಪಘಾತ ನಡೆದಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಹಾಗೇ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಲ್ಸಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ,  ಪಿಪ್ರಾ ಎಂಬ ಹಳ್ಳಿಯ ಸಮೀಪ ಸಿಕಂದ್ರಾ-ಶೇಖ್​​ಪುರ ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದದ್ದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮೃತಪಟ್ಟವರಲ್ಲಿ 5 ಮಂದಿ ಜಮುಯಿಯ ಖೈರಾ ಬ್ಲಾಕ್​​ನ ನೌದಿಹಾದವರು. ಮತ್ತೊಬ್ಬರು ಸ್ಥಳೀಯರಲ್ಲ. ಇವರೆಲ್ಲ ಜಮುಯಿ ಖೈರಾದಿಂದ ಪಾಟ್ನಾಕ್ಕೆ ಒಂದು ಅಂತ್ಯಕ್ರಿಯೆಗಾಗಿ ತೆರಳಿದ್ದರು. ಅಲ್ಲಿಂದ ವಾಪಸ್​ ಬರುವಾಗ ಅಪಘಾತ ಉಂಟಾಗಿದೆ.  

ಟ್ರಕ್​ ಹಾಗೂ ಎಸ್​ಯುವಿ ಡಿಕ್ಕಿಯ ರಭಸಕ್ಕೆ ಎಸ್​ಯುವಿ  ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದಂತೆ ಗಾಯಗೊಂಡ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಭೀಕರ ಅಪಘಾತವಾಗುತ್ತಿದ್ದಂತೆ ಒಂದೇ ಬಾರಿಗೆ ಅನೇಕರು ಸ್ಥಳದಲ್ಲಿ ಸೇರಿದ ಪರಿಣಾಮ ಕೆಲ ಕಾಲ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಮೃತರ ಮತ್ತು ಗಾಯಗೊಂಡವರ ಕುಟುಂಬಕ್ಕೆ ವಿಷಯ ತಿಳಿಸಲಾಗಿದ್ದು, ಅವರೂ ಕೂಡ ಇಲ್ಲಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: Viral Video: ತನ್ನ ಎದುರಿಗಿದ್ದ ಮೊಸಳೆಗೆ ಚಪ್ಪಲಿ ತೋರಿಸಿ ಹೆದರಿಸಿದ ಮಹಿಳೆ! ಹೇಗಂತೀರಾ? ವಿಡಿಯೊ ನೋಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?