AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಭೀಕರ ಅಪಘಾತ; ಅಂತ್ಯಕ್ರಿಯೆ ಮುಗಿಸಿ ವಾಪಸ್​​ ಬರುತ್ತಿದ್ದ ಆರು ಮಂದಿ ಸಾವು

ಟ್ರಕ್​ ಹಾಗೂ ಎಸ್​ಯುವಿ ಡಿಕ್ಕಿಯ ರಭಸಕ್ಕೆ ಎಸ್​ಯುವಿ  ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದಂತೆ ಗಾಯಗೊಂಡ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಬಿಹಾರದಲ್ಲಿ ಭೀಕರ ಅಪಘಾತ; ಅಂತ್ಯಕ್ರಿಯೆ ಮುಗಿಸಿ ವಾಪಸ್​​ ಬರುತ್ತಿದ್ದ ಆರು ಮಂದಿ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 16, 2021 | 9:51 AM

Share

ಬಿಹಾರದ ಜಮುಯಿ ಎಂಬಲ್ಲಿ ಟ್ರಕ್​​ ಮತ್ತು ಎಸ್​ಯುವಿ ವಾಹನದ ನಡುವೆ  ಭೀಕರ ಅಪಘಾತ ನಡೆದಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಹಾಗೇ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಲ್ಸಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ,  ಪಿಪ್ರಾ ಎಂಬ ಹಳ್ಳಿಯ ಸಮೀಪ ಸಿಕಂದ್ರಾ-ಶೇಖ್​​ಪುರ ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದದ್ದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮೃತಪಟ್ಟವರಲ್ಲಿ 5 ಮಂದಿ ಜಮುಯಿಯ ಖೈರಾ ಬ್ಲಾಕ್​​ನ ನೌದಿಹಾದವರು. ಮತ್ತೊಬ್ಬರು ಸ್ಥಳೀಯರಲ್ಲ. ಇವರೆಲ್ಲ ಜಮುಯಿ ಖೈರಾದಿಂದ ಪಾಟ್ನಾಕ್ಕೆ ಒಂದು ಅಂತ್ಯಕ್ರಿಯೆಗಾಗಿ ತೆರಳಿದ್ದರು. ಅಲ್ಲಿಂದ ವಾಪಸ್​ ಬರುವಾಗ ಅಪಘಾತ ಉಂಟಾಗಿದೆ.  

ಟ್ರಕ್​ ಹಾಗೂ ಎಸ್​ಯುವಿ ಡಿಕ್ಕಿಯ ರಭಸಕ್ಕೆ ಎಸ್​ಯುವಿ  ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದಂತೆ ಗಾಯಗೊಂಡ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಭೀಕರ ಅಪಘಾತವಾಗುತ್ತಿದ್ದಂತೆ ಒಂದೇ ಬಾರಿಗೆ ಅನೇಕರು ಸ್ಥಳದಲ್ಲಿ ಸೇರಿದ ಪರಿಣಾಮ ಕೆಲ ಕಾಲ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಮೃತರ ಮತ್ತು ಗಾಯಗೊಂಡವರ ಕುಟುಂಬಕ್ಕೆ ವಿಷಯ ತಿಳಿಸಲಾಗಿದ್ದು, ಅವರೂ ಕೂಡ ಇಲ್ಲಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: Viral Video: ತನ್ನ ಎದುರಿಗಿದ್ದ ಮೊಸಳೆಗೆ ಚಪ್ಪಲಿ ತೋರಿಸಿ ಹೆದರಿಸಿದ ಮಹಿಳೆ! ಹೇಗಂತೀರಾ? ವಿಡಿಯೊ ನೋಡಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ