AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ದೇವಸ್ಥಾನದ ಗೋಡೆ ಕುಸಿದು 6 ಜನ ಸಾವು, 14 ಮಂದಿಗೆ ಗಾಯ

ಇಂದು ಸಂಜೆ ಸಾಂಗ್ಲಿ ಜಿಲ್ಲೆಯ ದೇವಾಲಯದ ಆವರಣದಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯ ನಂತರ ಗೋಡೆ ಕುಸಿದು ಕನಿಷ್ಠ 6 ಭಕ್ತರು ಸಾವನ್ನಪ್ಪಿದ್ದಾರೆ. 12ರಿಂದ 14 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಜಾತ್ ತೆಹಸಿಲ್ ವ್ಯಾಪ್ತಿಯ ಮೋಥೆವಾಡಿ ಗ್ರಾಮದ ಮಾರ್ಗುದೇವಿ ದೇವಸ್ಥಾನದಲ್ಲಿ ನಡೆದಿದೆ. ಪ್ರತಿ ಮಂಗಳವಾರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಿದ್ದರು. ಈ ಘಟನೆಯ ಸಮಯದಲ್ಲಿ ಸುಮಾರು 350 ಜನರು ದೇಗುಲದ ಆವರಣದಲ್ಲಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ದೇವಸ್ಥಾನದ ಗೋಡೆ ಕುಸಿದು 6 ಜನ ಸಾವು, 14 ಮಂದಿಗೆ ಗಾಯ
Death
ಸುಷ್ಮಾ ಚಕ್ರೆ
|

Updated on:May 12, 2026 | 10:28 PM

Share

ಸಾಂಗ್ಲಿ, ಮೇ 12: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇಂದು ಸಂಜೆ ಬಿರುಗಾಳಿಯಿಂದಾಗಿ ದೇವಸ್ಥಾನದ ಆವರಣದ ಗೋಡೆ ಕುಸಿದು 6 ಜನರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಾಂಗ್ಲಿ ಜಿಲ್ಲೆಯ ಜಾಟ್ ತಾಲ್ಲೂಕಿನ ಮೋಟೆವಾಡಿ ಗ್ರಾಮದಲ್ಲಿರುವ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಮಾರ್ಗುಬಾಯಿ ದೇವಿ ಯಾತ್ರೆಯ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಹಲವಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಆಗಲೇ ಈ ದುರಂತ ಸಂಭವಿಸಿದೆ.

ಇದ್ದಕ್ಕಿದ್ದಂತೆ ಶುರುವಾದ ಬಿರುಗಾಳಿ ಮತ್ತು ಮಳೆಯಿಂದ ಗೋಡೆ ಕುಸಿದಿದೆ. ಆಗ ಭಕ್ತರು ದೇವಸ್ಥಾನದ ಆವರಣದಲ್ಲಿದ್ದರು. ಭಕ್ತರು ಇದ್ದ ಸ್ಥಳದಲ್ಲಿಯೇ ಗೋಡೆ ಕುಸಿದು, ಹಲವರು ಅದರಡಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ಮತ್ತು ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆಗ 6 ಜನರು ಗಾಯಗೊಂಡರು. ಅವರಲ್ಲಿ ಮೂವರು ಸ್ಥಳೀಯರು ಮತ್ತು ಉಳಿದ ಮೂವರು ಬಿಜಾಪುರ ತಾಲೂಕಿನವರು.

ಇದನ್ನೂ ಓದಿ: ಕಲ್ಲಂಗಡಿ ಹಣ್ಣಿಗೆ ಮತ್ತೊಂದು ಬಲಿ: ಛತ್ತೀಸ್‌ಗಢದಲ್ಲಿ 15 ವರ್ಷದ ಬಾಲಕ ಸಾವು; ಮೂವರು ಮಕ್ಕಳ ಸ್ಥಿತಿ ಗಂಭೀರ!

ಕನಿಷ್ಠ 14 ಜನರು ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಹೇಗೆ ಸಂಭವಿಸಿದೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಸಾಮಾನ್ಯವಾಗಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ದೇವಾಲಯದ ಆವರಣದಲ್ಲಿ ಸುಮಾರು 350 ಭಕ್ತರು ಇದ್ದರು. ಈ ವೇಳೆ ಬಲವಾದ ಗಾಳಿ ಮತ್ತು ಭಾರೀ ಮಳೆಯಾಯಿತು. ಮಳೆಯಿಂದ ಭಕ್ತರು ಗೋಡೆಯ ಬಳಿ ನಿಂತರು. ಆಗ ಗೋಡೆ ಇದ್ದಕ್ಕಿದ್ದಂತೆ ಕುಸಿದು ಹಲವಾರು ಭಕ್ತರು ಅದರಡಿ ಸಿಲುಕಿಕೊಂಡರು” ಎಂದು ಸಾಂಗ್ಲಿ ಎಸ್​ಪಿ ತುಷಾರ್ ದೋಷಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Tue, 12 May 26

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ