AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ದೇವಸ್ಥಾನದ ಗೋಡೆ ಕುಸಿದು 6 ಜನ ಸಾವು, 14 ಮಂದಿಗೆ ಗಾಯ

ಇಂದು ಸಂಜೆ ಸಾಂಗ್ಲಿ ಜಿಲ್ಲೆಯ ದೇವಾಲಯದ ಆವರಣದಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯ ನಂತರ ಗೋಡೆ ಕುಸಿದು ಕನಿಷ್ಠ 6 ಭಕ್ತರು ಸಾವನ್ನಪ್ಪಿದ್ದಾರೆ. 12ರಿಂದ 14 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಜಾತ್ ತೆಹಸಿಲ್ ವ್ಯಾಪ್ತಿಯ ಮೋಥೆವಾಡಿ ಗ್ರಾಮದ ಮಾರ್ಗುದೇವಿ ದೇವಸ್ಥಾನದಲ್ಲಿ ನಡೆದಿದೆ. ಪ್ರತಿ ಮಂಗಳವಾರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಿದ್ದರು. ಈ ಘಟನೆಯ ಸಮಯದಲ್ಲಿ ಸುಮಾರು 350 ಜನರು ದೇಗುಲದ ಆವರಣದಲ್ಲಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ದೇವಸ್ಥಾನದ ಗೋಡೆ ಕುಸಿದು 6 ಜನ ಸಾವು, 14 ಮಂದಿಗೆ ಗಾಯ
Death
ಸುಷ್ಮಾ ಚಕ್ರೆ
|

Updated on:May 12, 2026 | 10:28 PM

Share

ಸಾಂಗ್ಲಿ, ಮೇ 12: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇಂದು ಸಂಜೆ ಬಿರುಗಾಳಿಯಿಂದಾಗಿ ದೇವಸ್ಥಾನದ ಆವರಣದ ಗೋಡೆ ಕುಸಿದು 6 ಜನರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಾಂಗ್ಲಿ ಜಿಲ್ಲೆಯ ಜಾಟ್ ತಾಲ್ಲೂಕಿನ ಮೋಟೆವಾಡಿ ಗ್ರಾಮದಲ್ಲಿರುವ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಮಾರ್ಗುಬಾಯಿ ದೇವಿ ಯಾತ್ರೆಯ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಹಲವಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಆಗಲೇ ಈ ದುರಂತ ಸಂಭವಿಸಿದೆ.

ಇದ್ದಕ್ಕಿದ್ದಂತೆ ಶುರುವಾದ ಬಿರುಗಾಳಿ ಮತ್ತು ಮಳೆಯಿಂದ ಗೋಡೆ ಕುಸಿದಿದೆ. ಆಗ ಭಕ್ತರು ದೇವಸ್ಥಾನದ ಆವರಣದಲ್ಲಿದ್ದರು. ಭಕ್ತರು ಇದ್ದ ಸ್ಥಳದಲ್ಲಿಯೇ ಗೋಡೆ ಕುಸಿದು, ಹಲವರು ಅದರಡಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ಮತ್ತು ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದರು. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆಗ 6 ಜನರು ಗಾಯಗೊಂಡರು. ಅವರಲ್ಲಿ ಮೂವರು ಸ್ಥಳೀಯರು ಮತ್ತು ಉಳಿದ ಮೂವರು ಬಿಜಾಪುರ ತಾಲೂಕಿನವರು.

ಇದನ್ನೂ ಓದಿ: ಕಲ್ಲಂಗಡಿ ಹಣ್ಣಿಗೆ ಮತ್ತೊಂದು ಬಲಿ: ಛತ್ತೀಸ್‌ಗಢದಲ್ಲಿ 15 ವರ್ಷದ ಬಾಲಕ ಸಾವು; ಮೂವರು ಮಕ್ಕಳ ಸ್ಥಿತಿ ಗಂಭೀರ!

ಕನಿಷ್ಠ 14 ಜನರು ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಹೇಗೆ ಸಂಭವಿಸಿದೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಸಾಮಾನ್ಯವಾಗಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ದೇವಾಲಯದ ಆವರಣದಲ್ಲಿ ಸುಮಾರು 350 ಭಕ್ತರು ಇದ್ದರು. ಈ ವೇಳೆ ಬಲವಾದ ಗಾಳಿ ಮತ್ತು ಭಾರೀ ಮಳೆಯಾಯಿತು. ಮಳೆಯಿಂದ ಭಕ್ತರು ಗೋಡೆಯ ಬಳಿ ನಿಂತರು. ಆಗ ಗೋಡೆ ಇದ್ದಕ್ಕಿದ್ದಂತೆ ಕುಸಿದು ಹಲವಾರು ಭಕ್ತರು ಅದರಡಿ ಸಿಲುಕಿಕೊಂಡರು” ಎಂದು ಸಾಂಗ್ಲಿ ಎಸ್​ಪಿ ತುಷಾರ್ ದೋಷಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Tue, 12 May 26

Follow Us