AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸಾವು, 20 ಮಂದಿಗೆ ಗಾಯ; ಪ್ರಧಾನಿ ಮೋದಿ ಸಂತಾಪ

ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದಿಂದ ಹಿಂದಿರುಗುತ್ತಿದ್ದರು. ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜಸ್ಥಾನದ ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸಾವು, 20 ಮಂದಿಗೆ ಗಾಯ; ಪ್ರಧಾನಿ ಮೋದಿ ಸಂತಾಪ
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 20, 2022 | 12:38 PM

Share

ಜೈಪುರ: ರಾಜಸ್ಥಾನದ (Rajasthan) ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) 6 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಮತ್ತು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ.

ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದಿಂದ ಹಿಂದಿರುಗುತ್ತಿದ್ದರು. ಅಲ್ಲಿ ಜಾನಪದ ದೇವರಾದ ಬಾಬಾ ರಾಮ್‌ದೇವ್ ದೇವಾಲಯವಿದೆ. ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Accident: ದೆಹಲಿ-ಮೀರತ್ ಎಕ್ಸ್​​ಪ್ರೆಸ್​ವೇಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ರಾಜಸ್ಥಾನದ ಪಾಲಿಯಲ್ಲಿ ನಡೆದ ಅಪಘಾತ ದುಃಖ ತಂದಿದೆ. ಈ ದುಃಖದ ಸಮಯದಲ್ಲಿ ನಾನು ದುಃಖಿತ ಕುಟುಂಬಗಳೊಂದಿಗೆ ನಿಲ್ಲುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Sat, 20 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?