AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ಚಂದ್ರ ಭೋಸ್​ ಆಪದಾ ಪ್ರಬಂಧನ್ ಪುರಸ್ಕಾರ 2024: ಉತ್ತರ ಪ್ರದೇಶದ ’60 ಪ್ಯಾರಾಚೂಟ್​ ಫೀಲ್ಡ್​‘ ಆಸ್ಪತ್ರೆ ಆಯ್ಕೆ

ವಿಪತ್ತು ನಿರ್ವಹಣೆಯಲ್ಲಿನ ಅತ್ಯುತ್ತಮ ಕಾರ್ಯಕ್ಕಾಗಿ ಕೇಂದ್ರ ಸರ್ಕಾರವು ಉತ್ತರ ಪ್ರದೇಶ ಮೂಲದ 60 ಪ್ಯಾರಾಚೂಟ್​ ಫೀಲ್ಡ್​ ಆಸ್ಪತ್ರೆಯನ್ನು ಸುಭಾಷ್​ಚಂದ್ರ ಬೋಸ್​ ಆಪದಾ ಪ್ರಬಂಧನ್ ಪುರಸ್ಕಾರ 2024ಕ್ಕಾಗಿ ಆಯ್ಕೆ ಮಾಡಿದೆ. ಸಾಂಸ್ಥಿಕ ವಿಭಾಗದಲ್ಲಿ ಈ ವರ್ಷ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿರುವ 60 ಪ್ಯಾರಾಚೂಟ್​ ಫೀಲ್ಡ್​ ಆಸ್ಪತ್ರೆಯನ್ನು 1942ರಲ್ಲಿ ಸ್ಥಾಪಿಸಲಾಯಿತು. ಇದು ಭಾರತೀಯ ಸಶಸ್ತ್ರ ಪಡೆಗಳ ಏಕೈಕ ವಾಯುಗಾಮಿ ವೈದ್ಯಕೀಯ ಸಂಸ್ಥೆಯಾಗಿದ್ದು, ವಿವಿಧ ಜಾಗತಿಕ ಬಿಕ್ಕಟ್ಟುಗಳಲ್ಲಿ ತನ್ನ ಅಸಾಧಾರಣ ಸೇವೆಯಿಂದ ಪ್ರಖ್ಯಾತವಾಗಿದೆ.

ಸುಭಾಷ್​ಚಂದ್ರ ಭೋಸ್​ ಆಪದಾ ಪ್ರಬಂಧನ್ ಪುರಸ್ಕಾರ 2024: ಉತ್ತರ ಪ್ರದೇಶದ ’60 ಪ್ಯಾರಾಚೂಟ್​ ಫೀಲ್ಡ್​‘ ಆಸ್ಪತ್ರೆ ಆಯ್ಕೆ
ಆಸ್ಪತ್ರೆ
ನಯನಾ ರಾಜೀವ್
|

Updated on:Jan 23, 2024 | 12:19 PM

Share

ವಿಪತ್ತು ನಿರ್ವಹಣೆಯಲ್ಲಿನ ಅತ್ಯುತ್ತಮ ಕಾರ್ಯಕ್ಕಾಗಿ ಕೇಂದ್ರ ಸರ್ಕಾರವು ಉತ್ತರ ಪ್ರದೇಶ ಮೂಲದ 60 ಪ್ಯಾರಾಚೂಟ್​ ಫೀಲ್ಡ್​ ಆಸ್ಪತ್ರೆಯನ್ನು ಸುಭಾಷ್​ಚಂದ್ರ ಬೋಸ್​ ಆಪದಾ ಪ್ರಬಂಧನ್ ಪುರಸ್ಕಾರ 2024(Subhash Chandra Bose Aapda Prabandhan Puraskar-2024)ಕ್ಕಾಗಿ ಆಯ್ಕೆ ಮಾಡಿದೆ. ಸಾಂಸ್ಥಿಕ ವಿಭಾಗದಲ್ಲಿ ಈ ವರ್ಷ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿರುವ 60 ಪ್ಯಾರಾಚೂಟ್​ ಫೀಲ್ಡ್​ ಆಸ್ಪತ್ರೆಯನ್ನು 1942ರಲ್ಲಿ ಸ್ಥಾಪಿಸಲಾಯಿತು. ಇದು ಭಾರತೀಯ ಸಶಸ್ತ್ರ ಪಡೆಗಳ ಏಕೈಕ ವಾಯುಗಾಮಿ ವೈದ್ಯಕೀಯ ಸಂಸ್ಥೆಯಾಗಿದ್ದು, ವಿವಿಧ ಜಾಗತಿಕ ಬಿಕ್ಕಟ್ಟುಗಳಲ್ಲಿ ತನ್ನ ಅಸಾಧಾರಣ ಸೇವೆಯಿಂದ ಪ್ರಖ್ಯಾತವಾಗಿದೆ.

ಗೃಹ ವ್ಯವಹಾರಗಳ ಸಚಿವಾಲಯವು ಈ ಪ್ರಕಟಣೆ ಹೊರಡಿಸಿದ್ದು, ಆಸ್ಪತ್ರೆಯ ಪ್ರಾಥಮಿಕ ಧ್ಯೇಯವು ಶಾಂತಿ ಮತ್ತು ಯುದ್ಧದ ಸಮಯದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯವಾಗಿ ನೈಸರ್ಗಿಕ ವಿಕೋಪದ ಸಮಯದಲ್ಲಿ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಕಾರ್ಯಾಚರಣೆಗಳನ್ನು ಒಳಗೊಂಡಿದೆ.

ಇದು ಉತ್ತರಾಖಂಡ ಪ್ರವಾಹ(2013), ನೇಪಾಳ ಭೂಕಂಪ ಕಾರ್ಯಾಚರಣೆ ಮೈತ್ರಿ(2015) ಇಂಡೋನೇಷ್ಯಾದ ಸುನಾಮಿ ಕಾರ್ಯಾಚರಣೆಯ ಸಮುದ್ರ ಮೈತ್ರಿ(2018)ರ ಭಾಗವಾಗಿ ವೈದ್ಯಕೀಯ ನೆರವು ನೀಡಿತ್ತು.

ವಿಪತ್ತು ನಿರ್ವಹಣಾ ಕ್ಷೇತ್ರದಲ್ಲಿ ಭಾರತದ ಜನರು ಹಾಗೂ ಸಂಸ್ಥೆಗಳು ಸಲ್ಲಿಸಿದ ಅಮೂಲ್ಯ ಕೊಡುಗೆ ಹಾಗೂ ನಿಸ್ವಾರ್ಥ ಸೇವೆಯನ್ನು ಗುರುತಿಸಲು ಮತ್ತು ಗೌರವಿಸಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಸರ್ಕಾರವು ಸುಭಾಷ್​ಚಂದ್ರ ಬೋಸ್​ ಆಪದಾ ಪ್ರಬಂಧನ್ ಪುರಸ್ಕಾರವನ್ನು ಸ್ಥಾಪಿಸಿತ್ತು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23 ರಂದು ಪ್ರತಿ ವರ್ಷ ಪ್ರಶಸ್ತಿಯನ್ನು ಘೋಷಿಸಲಾಗುತ್ತದೆ.

ಮತ್ತಷ್ಟು ಓದಿ: ಇಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನ : ಈ ದಿನ ಪರಾಕ್ರಮ ದಿನವನ್ನಾಗಿ ಆಚರಿಸುವುದರ ಹಿಂದಿನ ಮಹತ್ವವೇನು?

ಸಂಸ್ಥೆಯಾಗಿದ್ದರೆ 51 ಲಕ್ಷ ರೂ. ವೈಯಕ್ತಿಕವಾಗಿ ಕೆಲಸ ಮಾಡಿದ್ದರೆ ಅವರಿಗೆ 5 ಲಕ್ಷ ರೂ ನೀಡಲಾಗುತ್ತದೆ. ಈ ಪ್ರಶಸ್ತಿಗಾಗಿ 2023ರ ಜುಲೈ 1 ರಂದು ಆನ್​ಲೈನ್ ನಾಮನಿರ್ದೇಶನಗಳನ್ನು ಕೋರಲಾಗಿತ್ತು. ಸಂಸ್ಥೆಯು ಪ್ರತಿಯಾಗಿ 245 ನಾಮನಿರ್ದೇಶನಗಳನ್ನು ಸ್ವೀಕರಿಸಿದೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಒರಿಸ್ಸಾದ ಕಟಕ್‌ನಲ್ಲಿ ಬಂಗಾಳಿ ಕುಟುಂಬದಲ್ಲಿ 23 ಜನವರಿ 1897 ರಂದು ಜನಿಸಿದರು. ಭಾರತವನ್ನು ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತಗೊಳಿಸುವಲ್ಲಿ ಅವರ ಕೊಡುಗೆ ಅಪಾರ. ಜೈ ಹಿಂದ್-ಜೈ ಭಾರತ್’ ಮತ್ತು ‘ದಿಲ್ಲಿ ಚಲೋ’ ಎಂಬ ಘೋಷಣೆಗಳೊಂದಿಗೆ ದೇಶದ ಯುವಕರಲ್ಲಿ ದೇಶಭಕ್ತಿಯ ಕಿಚ್ಚು ಹೊತ್ತಿಸಿದರು.

ಆರಂಭದಲ್ಲಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿಯವರೊಂದಿಗೆ ಇದ್ದರು, ಆದರೆ ನಂತರ ಅವರು ಬೇರ್ಪಟ್ಟರು ಮತ್ತು ಬ್ರಿಟಿಷರ ವಿರುದ್ಧ ಹೋರಾಡಲು ಯೋಜಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿಯನ್ನು ಜನವರಿ 23 ರಂದು ಆಚರಿಸಲಾಗುತ್ತದೆ. ಈ ದಿನವನ್ನು ಪರಾಕ್ರಮ್ ದಿವಸ್ ಎಂದೂ ಕರೆಯಲಾಗುತ್ತದೆ .

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:18 pm, Tue, 23 January 24

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ