AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧನ ಸಜೀವದಹನ

ಶಹಜಹಾನ್‌ಪುರದ ಅಲಿಯಾಪುರ ಗ್ರಾಮದಲ್ಲಿ ಗುಡಿಸಲಿನಲ್ಲಿ ಬೆಂಕಿ ಕಾಣಿಸಿಕೊಂಡು 60 ವರ್ಷದ ರಾಂಪಾಲ್ ಶ್ರೀವಾಸ್ತವ ಜೀವಂತ ದಹನವಾಗಿದ್ದಾರೆ. ಜ್ವಾಲೆಗಳು ಏರುತ್ತಿರುವುದನ್ನು ನೋಡಿದ ಜನರು ಹೇಗೋ ಬೆಂಕಿಯನ್ನು ನಿಯಂತ್ರಿಸಿದರು. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿ ಸಾಕ್ಷ್ಯಗಳನ್ನು ಸಂಗ್ರಹಿಸಿತು. ಕ್ಷಯರೋಗದಿಂದ ದುರ್ಬಲರಾಗಿದ್ದರಿಂದ ರಾಂಪಾಲ್ ಅವರಿಗೆ ಎದ್ದೇಳಲು ಸಾಧ್ಯವಾಗದೆ ಅವರು ಜೀವಂತವಾಗಿ ಸುಟ್ಟುಹೋಗಿದ್ದಾರೆ.

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧನ ಸಜೀವದಹನ
Shahajanpur Fire Accident
ಸುಷ್ಮಾ ಚಕ್ರೆ
|

Updated on: Nov 29, 2025 | 3:46 PM

Share

ಶಹಜಹಾನ್‌ಪುರ, ನವೆಂಬರ್ 29: ಉತ್ತರ ಪ್ರದೇಶದ (Uttar Pradesh) ಶಹಜಾನ್​​ಪುರದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ಅದರಲ್ಲಿ ಮಲಗಿದ್ದ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂತ್ ಪ್ರದೇಶದ ಅಲಿಯಾಪುರ ಗ್ರಾಮದಲ್ಲಿ ದೀರ್ಘಕಾಲದಿಂದ ಅಸ್ವಸ್ಥರಾಗಿದ್ದ ರಾಂಪಾಲ್ ಶ್ರೀವಾಸ್ತವ ಅವರು ಶುಕ್ರವಾರ ರಾತ್ರಿ ಊಟ ಮಾಡಿದ ನಂತರ ತಮ್ಮ ಮನೆಯ ಹೊರಗೆ ನಿರ್ಮಿಸಲಾದ ಗುಡಿಸಲಿನಲ್ಲಿ ಮಲಗಿದ್ದರು. ಈ ವೇಳೆ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ.

ಪೊಲೀಸ್ ಅಧಿಕಾರಿಯ ಪ್ರಕಾರ, ರಾತ್ರಿಯ ಸಮಯದಲ್ಲಿ ಆ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿತು. ಕುಟುಂಬದ ಸದಸ್ಯರು ಈ ವೇಳೆ ಮನೆಯೊಳಗೆ ಮಲಗಿದ್ದರು. ಆದರೆ, ಆ ವೃದ್ಧ ಮನೆಯ ಹೊರಗೆ ಇರುವ ಸಣ್ಣ ಗುಡಿಸಲಿನಲ್ಲಿ ಮಲಗಲು ಹೋಗಿದ್ದರು. ಸಾಮಾನ್ಯವಾಗಿ ಅವರು ಅಲ್ಲೇ ಮಲಗಿದ್ದರು. ಆಗ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಶಬ್ದ ಕೇಳಿ ಮನೆಯವರು ಹೊರಗೆ ಬಂದರು. ಆದರೆ ಬೆಂಕಿ ತೀವ್ರವಾಗಿ ಹರಡಿದ್ದರಿಂದ ಅವರಿಗೆ ಆ ವ್ಯಕ್ತಿಯನ್ನು ಕಾಪಾಡಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಗೇ ಚಟ್ಟ ಕಟ್ಟಿದ ಪತ್ನಿ: ಕೊಲೆ ಪ್ಲ್ಯಾನ್​​ ಕೇಳಿದ್ರೆ ಶಾಕ್​​ ಆಗ್ತೀರ!

ಬೆಂಕಿಯನ್ನು ನಂದಿಸುವ ಅವರ ಎಲ್ಲಾ ಪ್ರಯತ್ನಗಳು ವಿಫಲವಾದವು. ಇದರಿಂದಾಗಿ ಶ್ರೀವಾಸ್ತವ ಅವರು ಗುಡಿಸಲಿನೊಳಗೆ ಜೀವಂತವಾಗಿ ಸುಟ್ಟುಹೋದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಸುಟ್ಟ ಶವವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಬೆಂಕಿಯ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ:ಕುಡಿದ ಮತ್ತಿನಲ್ಲಿ ಪ್ರೇಯಸಿಯನ್ನು ಕೊಂದು, ಆಕೆಯ ಶವವನ್ನು ಕಾರಲ್ಲೇ ಬಿಟ್ಟು ಮಲಗಿದ ಆಸಾಮಿ!

ಅನಾರೋಗ್ಯದ ಕಾರಣದಿಂದ ರಾಂಪಾಲ್ ಶ್ರೀವಾಸ್ತವ ಅವರು ಹಲವಾರು ತಿಂಗಳುಗಳಿಂದ ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ. ಇದರಿಂದಾಗಿ ಅವರು ತುಂಬಾ ದುರ್ಬಲರಾಗಿದ್ದರು. ಕ್ಷಯರೋಗದಿಂದಾಗಿ ಅವರು ಮನೆಯ ಹೊರಗೆ ಗುಡಿಸಲಿನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು