AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

61 ಲಕ್ಷ ಭಾರತೀಯ ಫೇಸ್​ಬುಕ್ ಬಳಕೆದಾರರ ಮಾಹಿತಿ ಲೀಕ್

ಬಳಕೆದಾರರ ಹೆಸರು, ಲಿಂಗ, ವೃತ್ತಿ, ಮದುವೆ ಆಗಿದೆಯೇ ಇಲ್ಲವೇ ಎಂಬ ವಿವರ, ಕೆಲಸ ಮಾಡುವ ಸ್ಥಳ ಮತ್ತು ಇನ್ನಿತರ ಮಾಹಿತಿಗಳು ಸೋರಿಕೆ ಆಗಿವೆ ಎಂಬ ಆರೋಪ ಫೇಸ್​ಬುಕ್ ಮೇಲೆ ಕೇಳಿಬಂದಿದೆ.

61 ಲಕ್ಷ ಭಾರತೀಯ ಫೇಸ್​ಬುಕ್ ಬಳಕೆದಾರರ ಮಾಹಿತಿ ಲೀಕ್
ಪ್ರಾತಿನಿಧಿಕ ಚಿತ್ರ
guruganesh bhat
|

Updated on:Apr 04, 2021 | 2:34 PM

Share

ದೆಹಲಿ: ಅತಿ ದೊಡ್ಡ ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ಫೇಸ್​ಬುಕ್​ ಬಳಕೆದಾರಲ್ಲಿ ಭಯ ಹುಟ್ಟಿಸುವ ಸುದ್ದಿಯೊಂದು ಹೊರಬಿದ್ದಿದೆ. 100 ದೇಶಗಳ 53.3 ಕೋಟಿ ಫೇಸ್​ಬುಕ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆಯಾಗಿದೆ ಎಂದು ಸೈಬರ್ ಭದ್ರತೆಗೆ ಸಂಬಂಧಿಸಿದ ಹಡ್ಸನ್ ರಾಕ್ ಕಂಪನಿ ಆರೋಪಿಸಿದೆ. ಈ ಪೈಕಿ 61 ಲಕ್ಷ ಭಾರತೀಯ ಫೇಸ್​ಬುಕ್ ಬಳಕೆದಾರರ ಮಾಹಿತಿಯೂ ಇದೆ ಎನ್ನಲಾಗುತ್ತಿದೆ. ಬಳಕೆದಾರರ ಹೆಸರು, ಲಿಂಗ, ವೃತ್ತಿ, ಮದುವೆ ಆಗಿದೆಯೇ ಇಲ್ಲವೇ ಎಂಬ ವಿವರ, ಕೆಲಸ ಮಾಡುವ ಸ್ಥಳ ಮತ್ತು ಇನ್ನಿತರ ಮಾಹಿತಿಗಳು ಸೋರಿಕೆ ಆಗಿವೆ ಎಂಬ ಆರೋಪ ಫೇಸ್​ಬುಕ್ ಮೇಲೆ ಕೇಳಿಬಂದಿದೆ. ಅತ್ಯಂತ ಕೆಳಮಟ್ಟದ ಹ್ಯಾಕಿಂಗ್ ವೇದಿಕೆಗಳಲ್ಲಿ ಬೃಹತ್ ಸಂಖ್ಯೆಯ ಫೇಸ್​ಬುಕ್ ಬಳಕೆದಾರರ ಖಾಸಗಿ ಮಾಹಿತಿಗಳು ದೊರೆಯುತ್ತಿವೆ ಎಂದು ಹೇಳಲಾಗಿದೆ.

ಈ ಮುನ್ನವೂ ಫೇಸ್​ಬುಕ್ ಮೇಲೆ ಇಂತಹುದೇ ಆರೋಪ ಕೇಳಿಬಂದಿತ್ತು. 2019ರಲ್ಲಿ ಟೆಲಿಗ್ರಾಂ ಆ್ಯಪ್​ ಮೂಲಕ 20 ಡಾಲರ್​ಗೆ ಫೇಸ್​ಬುಕ್ ಬಳಕೆದಾರರ ಮಾಹಿತಿ ಸೋರಿಕೆ ಮಾಡಲಾಗಿತ್ತು ಎಂದು ಹೇಳಲಾಗಿತ್ತು. ನಂತರ 2020ರ ಜೂನ್ ಮತ್ತು 2021ರ ಜನವರಿಯಲ್ಲೂ ಮಾಹಿತಿ ಸೋರಿಕೆಯಾಗಿದೆ ಎಂದು ದೊಡ್ಡ ಸುದ್ದಿಯಾಗಿತ್ತು.

ಈ ಬಾರಿ ಸೋರಿಕೆಯಾದ ಮಾಹಿತಿಯಲ್ಲಿ ಭಾರತೀಯ ಫೇಸ್​ಬುಕ್ ಬಳಕೆದಾರರ ಮಾಹಿತಿಯೂ ಸೇರಿದೆ ಎಂಬುದು ಕಳವಳದ ಸಂಗತಿಯಾಗಿದೆ.  61 ಲಕ್ಷ ಭಾರತೀಯ ಫೇಸ್​ಬುಕ್ ಬಳಕೆದಾರರ ಮಾಹಿತಿ ಸೋರಿಕೆಯಾಗಿದೆ ಎನ್ನಲಾಗುತ್ತಿದೆ. ಜತೆಗೆ ಅಫ್ಘಾನಿಸ್ತಾನದ 5.5 ಲಕ್ಷ, ಬಾಂಗ್ಲಾದೇಶದ 38 ಲಕ್ಷ, ಬ್ರೆಜಿಲ್​ನ 80 ಲಕ್ಷ, ಆಸ್ಟ್ರೇಲಿಯಾದ 12 ಲಕ್ಷ ಫೇಸ್​ಬುಕ್ ಬಳಕೆದಾರರ ಮಾಹಿತಿ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಭಾರತೀಯರ ಪಾಲಿಗೆ ಗಾಬರಿ ಹುಟ್ಟಿಸುವ ವಿಚಾರ ಏನೆಂದರೆ, ಒಂದು ವಾರದ ಹಿಂದಷ್ಟೇ ಗುರುಗ್ರಾಮ ಮೂಲದ ಪೇಮೆಂಟ್ ಆ್ಯಪ್ ಮೊಬಿಕ್ವಿಕ್​ನ 10 ಕೋಟಿ ಬಳಕೆದಾರರ ಮಾಹಿತಿ ಸೋರಿಕೆಯಾಗಿದೆ ಎಂಬ ವಿಷಯ ಹೊರಬಿದ್ದಿತ್ತು.

ಇತ್ತೀಚಿಗಷ್ಟೇ ನಡೆದಿತ್ತು ಆಸ್ಟ್ರೇಲಿಯಾ ಸರ್ಕಾರ- ಫೇಸ್​ಬುಕ್ ನಡುವೆ ಕಲಹ ಅತಿದೊಡ್ಡ ಸಾಮಾಜಿಕ ಜಾಲತಾಣವೆನಿಸಿಕೊಂಡಿರುವ ಫೇಸ್​ಬುಕ್​ ಫೆ.23ರಂದು ತಾಂತ್ರಿಕ ಸಂಸ್ಥೆಗಳು ಸುದ್ದಿ ಬಿತ್ತರಿಸಲು ಹಣ ತೆರುವ ಕುರಿತು ಆಸ್ಟ್ರೇಲಿಯಾದ ಸರ್ಕಾರದೊಂದಿಗೆ ತಾನೊಂದು ಪರಿಷ್ಕೃತ ಕರಾರು ಮಾಡಿಕೊಂಡಿದ್ದು ಆ ದೇಶದಲ್ಲಿ ತನ್ನ ಸೇವೆಯನ್ನು ಪುನರ್​ಸ್ಥಾಪಿಸಲು ನಿರ್ಧರಿಸಿರುವುದಾಗಿ ಹೇಳಿದೆ. ಪತ್ರಿಕೋದ್ಯಮ ಕಂಟೆಂಟ್​ ನೀಡಲು ಸುದ್ದಿಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣ ಕಂಪನಿಗಳು ಹಣ ಪಾವತಿಸಬೇಕೆಂಬ ವಿಷಯವು ಕಳೆದ ವಾರ ಚರ್ಚೆಗೆ ಬಂದಿತ್ತು. ಪ್ರಮಾದವಶಾತ್, ಕೊವಿಡ್-19ಕ್ಕೆ ಸಂಬಂಧಿಸಿದ ಎಚ್ಚರಿಕೆಗಳೂ ಸೇರಿದಂತೆ ಸರ್ಕಾರದ ಕೆಲವು ಸುದ್ದಿ ಮತ್ತು ಪ್ರಕಟಣೆಗಳು ನಿರ್ಬಂಧಕ್ಕೊಳಗಾಗಿ ಕೋಲಾಹಲ ಉಂಟಾಗಿತ್ತು.

ಆಸ್ಟ್ರೇಲಿಯಾ ಸರ್ಕಾರದ ಮೈಲಿಗಲ್ಲು ಎನಿಸಿರುವ, ‘ದಿ ಕೋಡ್’ ಅಂತಲೂ ಕರೆಸಿಕೊಳ್ಳುವ ಮಾಧ್ಯಮ ಚೌಕಾಶಿ ಕಾನೂನುಗಳು, ಆ ದೇಶದ ಸಂಸತ್ತಿನಲ್ಲಿ ಇನ್ನೂ ಪಾಸಾಗಬೇಕಿದೆ.

ಆಸ್ಟ್ರೇಲಿಯಾ ಸರ್ಕಾರದ ಕೋಶಾಧಿಕಾರಿಯಾಗಿರುವ ಜೊಷ್ ಫ್ರೈಡೆನ್​ಬರ್ಗ್ ಫೇಸ್​ಬುಕ್ ಸಂಸ್ಥಾಪಕ ಮಾರ್ಕ್ ಜುಕರ್​ಬರ್ಗ್ ಅವರೊಂದಿಗೆ ಸುದೀರ್ಘವಾದ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತಾಡುತ್ತಾ, ‘ಫೇಸ್​ಬುಕ್ ಸಂಸ್ಥೆಯು ಆಸ್ಟ್ರೇಲಿಯಾದೊಂದಿಗೆ ಪುನಃ ಬಾಂಧವ್ಯ ಬೆಳೆಸಿದೆ. ಫೇಸ್​ಬುಕ್​ ಪ್ಲಾಟ್​ಫಾರ್ಮ್​ನಲ್ಲಿ ಆಸ್ಟ್ರೇಲಿಯಾದ ಸುದ್ದಿಗಳನ್ನು ಪುನರ್​ಸ್ಥಾಪಿಸಲಾಗುವುದು. ಹಾಗೆಯೇ, ಫೇಸ್​ಬುಕ್​ ಅಸ್ಟ್ರೇಲಿಯಾದ ಸುದ್ದಿಸಂಸ್ಥೆಗಳೊಂದಿಗೆ ಸೌಹಾರ್ದಯುತ ವಿಚಾರ-ವಿಮರ್ಶೆಗಳನ್ನು ನಡೆಸಲು ಮತ್ತು ಸುದ್ದಿ ವಿಷಯಗಳಿಗೆ ಹಣ ಪಾವತಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕರಾರುಗಳನ್ನು ಮಾಡಿಕೊಳ್ಳಲು ಬದ್ಧವಾಗಿದೆ’ ಎಂದು ಹೇಳಿದ್ದರು.

ಇದನ್ನೂ ಓದಿ: Women’s Day 2021: ಮಹಿಳೆಯರೇ ಸುರಕ್ಷಿತವಾಗಿರಲಿ ನಿಮ್ಮ ಫೇಸ್​ಬುಕ್, ಇನ್​ಸ್ಟಾಗ್ರಾಂ ಖಾತೆ

ಪೈರಸಿ ಮಾಡುತ್ತಿದ್ದ ಅತಿ ದೊಡ್ಡ ಜಾಲ ಅರೆಸ್ಟ್; ಇವರ ತಂತ್ರಜ್ಞಾನ ನೋಡಿ ಪೊಲೀಸರೇ ಕಂಗಾಲು

Published On - 2:31 pm, Sun, 4 April 21

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು