2 ಸಾವಿರಕ್ಕೂ ಅಧಿಕ ಪ್ರಯಾಣಿಕರಿದ್ದ ಮುಂಬೈ-ಗೋವಾ ಐಷಾರಾಮಿ ಹಡಗಿನಲ್ಲಿ 66 ಮಂದಿಗೆ ಕೊರೊನಾ ಸೋಂಕು; ಇಡೀ ಹಡಗು ಐಸೋಲೇಟ್​ !

ಗೋವಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಬೇರೆಬೇರೆ ದೇಶಗಳಿಂದ ಬರುವ ಸುಮಾರು 4000 ದಷ್ಟು ಪ್ರಯಾಣಿಕರನ್ನು ಪ್ರತಿದಿನ ಕೊವಿಡ್​ 19 ತಪಾಸಣೆಗೆ ಒಳಪಡಿಸಲಾಗುತ್ತಿದೆ.

2 ಸಾವಿರಕ್ಕೂ ಅಧಿಕ ಪ್ರಯಾಣಿಕರಿದ್ದ ಮುಂಬೈ-ಗೋವಾ ಐಷಾರಾಮಿ ಹಡಗಿನಲ್ಲಿ 66 ಮಂದಿಗೆ ಕೊರೊನಾ ಸೋಂಕು; ಇಡೀ ಹಡಗು ಐಸೋಲೇಟ್​ !
ಮುಂಬೈ-ಗೋವಾ ಹಡಗು
Follow us
| Updated By: Lakshmi Hegde

Updated on:Jan 03, 2022 | 5:56 PM

2000 ಕ್ಕೂ ಅಧಿಕ ಪ್ರಯಾಣಿಕರು ಇದ್ದ ಮುಂಬೈ-ಗೋವಾ ಐಷಾರಾಮಿ ಕ್ರೂಸ್​ ಹಡಗಿ(Mumbai-Goa cruise ship)ನಲ್ಲಿ ಒಬ್ಬ ಪ್ರಯಾಣಿಕರಲ್ಲಿ ಕೊರೊನಾ ಸೋಂಕು (Corona Virus) ದೃಢಪಟ್ಟಿತ್ತು. ಅದಾದ ಬೆನ್ನಲ್ಲೇ ಉಳಿದ ಪ್ರಯಾಣಿಕರನ್ನೂ ಸಹ ಅಲ್ಲಿಯೇ ಐಸೋಲೇಟ್ ಮಾಡಿ, ಎಲ್ಲರಿಗೂ ಆರ್​ಟಿ-ಪಿಸಿಆರ್​ ಟೆಸ್ಟ್(RT-PCR Test) ಮಾಡಲಾಗುತ್ತಿದೆ. ಅದರ ವರದಿಯೂ ಬರುತ್ತಿದ್ದು, ಸದ್ಯ ಈ ಕಾರ್ಡೆಲಿಯಾ ಕ್ರೂಸಸ್​ ಐಷಾರಾಮಿ ಹಡಗಿನಲ್ಲಿ 66 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಬ್ಬರಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡ ನಂತರ, ಯಾರಿಗೂ ಹಡಗಿನಿಂದ ಹೊರ ಹೋಗಲು ಬಿಟ್ಟಿರಲಿಲ್ಲ. ವೈದ್ಯಕೀಯ ತಂಡ ಅಲ್ಲಿಯೇ ಇದ್ದುಕೊಂಡು ಎಲ್ಲರಿಗೂ ಆರ್​ಟಿ-ಪಿಸಿಆರ್​ ಟೆಸ್ಟ್ ಮಾಡುತ್ತಿದೆ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್​ ರಾಣೆ ತಿಳಿಸಿದ್ದಾರೆ.

ಹಡಗಿನಲ್ಲಿ ಇದ್ದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ, ಈ ಐಷಾರಾಮಿ ಹಡಗನ್ನು ಗೋವಾದಲ್ಲಿ ನಿಲ್ಲಿಸಲು ಮುಂಬೈ ಪೋರ್ಟ್​ ಟ್ರಸ್ಟ್​ ನಿರಾಕರಿಸಿದೆ. ಹಾಗಾಗಿ ಇದೀಗ ಹಡಗು ಮೊರ್ಮುಗೋವ್​ ಪೋರ್ಟ್​ ಕ್ರೂಸ್​ ಟರ್ಮಿನಲ್​ನಲ್ಲಿ ನಿಂತಿದೆ.  ಪ್ರತಿಯೊಬ್ಬರಿಗೂ ಕೊವಿಡ್​ 19 ಟೆಸ್ಟ್​ ಮುಗಿದು, ರಿಪೋರ್ಟ್​ ಬಂದ ಬಳಿಕವಷ್ಟೇ ಅಲ್ಲಿಂದ ತೆರಳಲು ಅವಕಾಶ ಮಾಡಿಕೊಡಲಾಗುವುದು. ನಾವು ವೈದ್ಯಕೀಯ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಯೊಂದರ ಜತೆ ಟೈ-ಅಪ್ ಮಾಡಿಕೊಂಡಿದ್ದೇವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.  ಹಾಗೇ, ಟ್ವೀಟ್ ಮಾಡಿ ಒಟ್ಟು 66 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದನ್ನು ತಿಳಿಸಿದ್ದಾರೆ. ಪ್ರಯಾಣಿಕರನ್ನು ಹಡಗಿನಿಂದ ಯಾವಾಗ ಕಳಿಸಬೇಕು ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಹಡಗಿನಲ್ಲಿ ಇದ್ದವರೆಲ್ಲ ಎರಡೂ ಡೋಸ್​ ಕೊರೊನಾ ಲಸಿಕೆ ಪಡೆದವರೇ ಆಗಿದ್ದಾರೆ. ಹಾಗಿದ್ದಾಗ್ಯೂ ಕೆಲವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.  ಇನ್ನು ಗೋವಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಬೇರೆಬೇರೆ ದೇಶಗಳಿಂದ ಬರುವ ಸುಮಾರು 4000 ದಷ್ಟು ಪ್ರಯಾಣಿಕರನ್ನು ಪ್ರತಿದಿನ ಕೊವಿಡ್​ 19 ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪ್ರತಿದಿನವೂ, ಪ್ರತಿ ವಿಮಾನದಲ್ಲೂ ಒಬ್ಬರಲ್ಲ ಒಬ್ಬರು ಕೊವಿಡ್​ 19 ಸೋಂಕಿತರು ಇರುತ್ತಿದ್ದಾರೆ. ಹೀಗಾಗಿ ನಿಯಂತ್ರಣಕ್ಕೆ ಸಂಬಂಧಪಟ್ಟ ಶಿಷ್ಟಾಚಾರ ಪಾಲನೆ ಅತ್ಯಗತ್ಯ ಎಂದು ಹೇಳಿದ್ದಾರೆ.  ಹಾಗೇ, ಒಮಿಕ್ರಾನ್​ ಟೆಸ್ಟ್​ ಮಾಡುವುದಕ್ಕೋಸ್ಕರ ಗೋವಾ ಇನ್ನು 15 ದಿನಗಳಲ್ಲಿ ಜಿನೋಮ್​ ಸಿಕ್ವೆನ್ಸಿಂಗ್​ ಯಂತ್ರವನ್ನು ಸಿದ್ಧಗೊಳಿಸಲಿದೆ. ಇದರಿಂದ ಒಮಿಕ್ರಾನ್​ ಟೆಸ್ಟ್​ ವಿಳಂಬವಾಗುವುದನ್ನು ತಪ್ಪಿಸಬಹುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

Published On - 5:55 pm, Mon, 3 January 22

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್