AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಸಾವಿರಕ್ಕೂ ಅಧಿಕ ಪ್ರಯಾಣಿಕರಿದ್ದ ಮುಂಬೈ-ಗೋವಾ ಐಷಾರಾಮಿ ಹಡಗಿನಲ್ಲಿ 66 ಮಂದಿಗೆ ಕೊರೊನಾ ಸೋಂಕು; ಇಡೀ ಹಡಗು ಐಸೋಲೇಟ್​ !

ಗೋವಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಬೇರೆಬೇರೆ ದೇಶಗಳಿಂದ ಬರುವ ಸುಮಾರು 4000 ದಷ್ಟು ಪ್ರಯಾಣಿಕರನ್ನು ಪ್ರತಿದಿನ ಕೊವಿಡ್​ 19 ತಪಾಸಣೆಗೆ ಒಳಪಡಿಸಲಾಗುತ್ತಿದೆ.

2 ಸಾವಿರಕ್ಕೂ ಅಧಿಕ ಪ್ರಯಾಣಿಕರಿದ್ದ ಮುಂಬೈ-ಗೋವಾ ಐಷಾರಾಮಿ ಹಡಗಿನಲ್ಲಿ 66 ಮಂದಿಗೆ ಕೊರೊನಾ ಸೋಂಕು; ಇಡೀ ಹಡಗು ಐಸೋಲೇಟ್​ !
ಮುಂಬೈ-ಗೋವಾ ಹಡಗು
TV9 Web
| Edited By: |

Updated on:Jan 03, 2022 | 5:56 PM

Share

2000 ಕ್ಕೂ ಅಧಿಕ ಪ್ರಯಾಣಿಕರು ಇದ್ದ ಮುಂಬೈ-ಗೋವಾ ಐಷಾರಾಮಿ ಕ್ರೂಸ್​ ಹಡಗಿ(Mumbai-Goa cruise ship)ನಲ್ಲಿ ಒಬ್ಬ ಪ್ರಯಾಣಿಕರಲ್ಲಿ ಕೊರೊನಾ ಸೋಂಕು (Corona Virus) ದೃಢಪಟ್ಟಿತ್ತು. ಅದಾದ ಬೆನ್ನಲ್ಲೇ ಉಳಿದ ಪ್ರಯಾಣಿಕರನ್ನೂ ಸಹ ಅಲ್ಲಿಯೇ ಐಸೋಲೇಟ್ ಮಾಡಿ, ಎಲ್ಲರಿಗೂ ಆರ್​ಟಿ-ಪಿಸಿಆರ್​ ಟೆಸ್ಟ್(RT-PCR Test) ಮಾಡಲಾಗುತ್ತಿದೆ. ಅದರ ವರದಿಯೂ ಬರುತ್ತಿದ್ದು, ಸದ್ಯ ಈ ಕಾರ್ಡೆಲಿಯಾ ಕ್ರೂಸಸ್​ ಐಷಾರಾಮಿ ಹಡಗಿನಲ್ಲಿ 66 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಬ್ಬರಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡ ನಂತರ, ಯಾರಿಗೂ ಹಡಗಿನಿಂದ ಹೊರ ಹೋಗಲು ಬಿಟ್ಟಿರಲಿಲ್ಲ. ವೈದ್ಯಕೀಯ ತಂಡ ಅಲ್ಲಿಯೇ ಇದ್ದುಕೊಂಡು ಎಲ್ಲರಿಗೂ ಆರ್​ಟಿ-ಪಿಸಿಆರ್​ ಟೆಸ್ಟ್ ಮಾಡುತ್ತಿದೆ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್​ ರಾಣೆ ತಿಳಿಸಿದ್ದಾರೆ.

ಹಡಗಿನಲ್ಲಿ ಇದ್ದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ, ಈ ಐಷಾರಾಮಿ ಹಡಗನ್ನು ಗೋವಾದಲ್ಲಿ ನಿಲ್ಲಿಸಲು ಮುಂಬೈ ಪೋರ್ಟ್​ ಟ್ರಸ್ಟ್​ ನಿರಾಕರಿಸಿದೆ. ಹಾಗಾಗಿ ಇದೀಗ ಹಡಗು ಮೊರ್ಮುಗೋವ್​ ಪೋರ್ಟ್​ ಕ್ರೂಸ್​ ಟರ್ಮಿನಲ್​ನಲ್ಲಿ ನಿಂತಿದೆ.  ಪ್ರತಿಯೊಬ್ಬರಿಗೂ ಕೊವಿಡ್​ 19 ಟೆಸ್ಟ್​ ಮುಗಿದು, ರಿಪೋರ್ಟ್​ ಬಂದ ಬಳಿಕವಷ್ಟೇ ಅಲ್ಲಿಂದ ತೆರಳಲು ಅವಕಾಶ ಮಾಡಿಕೊಡಲಾಗುವುದು. ನಾವು ವೈದ್ಯಕೀಯ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಯೊಂದರ ಜತೆ ಟೈ-ಅಪ್ ಮಾಡಿಕೊಂಡಿದ್ದೇವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.  ಹಾಗೇ, ಟ್ವೀಟ್ ಮಾಡಿ ಒಟ್ಟು 66 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದನ್ನು ತಿಳಿಸಿದ್ದಾರೆ. ಪ್ರಯಾಣಿಕರನ್ನು ಹಡಗಿನಿಂದ ಯಾವಾಗ ಕಳಿಸಬೇಕು ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಹಡಗಿನಲ್ಲಿ ಇದ್ದವರೆಲ್ಲ ಎರಡೂ ಡೋಸ್​ ಕೊರೊನಾ ಲಸಿಕೆ ಪಡೆದವರೇ ಆಗಿದ್ದಾರೆ. ಹಾಗಿದ್ದಾಗ್ಯೂ ಕೆಲವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.  ಇನ್ನು ಗೋವಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಬೇರೆಬೇರೆ ದೇಶಗಳಿಂದ ಬರುವ ಸುಮಾರು 4000 ದಷ್ಟು ಪ್ರಯಾಣಿಕರನ್ನು ಪ್ರತಿದಿನ ಕೊವಿಡ್​ 19 ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪ್ರತಿದಿನವೂ, ಪ್ರತಿ ವಿಮಾನದಲ್ಲೂ ಒಬ್ಬರಲ್ಲ ಒಬ್ಬರು ಕೊವಿಡ್​ 19 ಸೋಂಕಿತರು ಇರುತ್ತಿದ್ದಾರೆ. ಹೀಗಾಗಿ ನಿಯಂತ್ರಣಕ್ಕೆ ಸಂಬಂಧಪಟ್ಟ ಶಿಷ್ಟಾಚಾರ ಪಾಲನೆ ಅತ್ಯಗತ್ಯ ಎಂದು ಹೇಳಿದ್ದಾರೆ.  ಹಾಗೇ, ಒಮಿಕ್ರಾನ್​ ಟೆಸ್ಟ್​ ಮಾಡುವುದಕ್ಕೋಸ್ಕರ ಗೋವಾ ಇನ್ನು 15 ದಿನಗಳಲ್ಲಿ ಜಿನೋಮ್​ ಸಿಕ್ವೆನ್ಸಿಂಗ್​ ಯಂತ್ರವನ್ನು ಸಿದ್ಧಗೊಳಿಸಲಿದೆ. ಇದರಿಂದ ಒಮಿಕ್ರಾನ್​ ಟೆಸ್ಟ್​ ವಿಳಂಬವಾಗುವುದನ್ನು ತಪ್ಪಿಸಬಹುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

Published On - 5:55 pm, Mon, 3 January 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?