AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಮನೆಗಳ ಗೋಡೆ ಕುಸಿದು 7 ಮಕ್ಕಳು ಸಾವು

ಭಾರೀ ಮಳೆಗೆ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು 24 ಗಂಟೆಗಳ ಅಂತರದಲ್ಲಿ ಏಳು ಮಕ್ಕಳು ಉತ್ತರ ಪ್ರದೇಶದ ಇಟಾವಾದಲ್ಲಿ ಸಾವನ್ನಪ್ಪಿದ್ದಾರೆ. ಮಳೆಯ ಅನಾಹುತಕ್ಕೆ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ.

ಭಾರೀ ಮಳೆಗೆ ಮನೆಗಳ ಗೋಡೆ ಕುಸಿದು 7 ಮಕ್ಕಳು ಸಾವು
7 children killed as wall of houses collapses due to heavy rains
TV9 Web
| Edited By: |

Updated on: Sep 22, 2022 | 5:55 PM

Share

ಉತ್ತರಪ್ರದೇಶ: ಭಾರೀ ಮಳೆಗೆ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು 24 ಗಂಟೆಗಳ ಅಂತರದಲ್ಲಿ ಏಳು ಮಕ್ಕಳು ಉತ್ತರ ಪ್ರದೇಶದ ಇಟಾವಾದಲ್ಲಿ ಸಾವನ್ನಪ್ಪಿದ್ದಾರೆ. ಮಳೆಯ ಅನಾಹುತಕ್ಕೆ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಘಟನೆಯಲ್ಲಿ ಬುಧವಾರ ತಡರಾತ್ರಿ ಚಂದ್ರಾಪುರ ಗ್ರಾಮದಲ್ಲಿ ನಾಲ್ವರು ಮಕ್ಕಳು ನಿದ್ರೆಯಲ್ಲಿರುವಾಗ ಮನೆಯ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಸಿಂಕು (10), ಅಭಿ (8), ಸೋನು (7), ಆರತಿ (5) ಎಂದು ಗುರುತಿಸಲಾಗಿದೆ ಎಂದು ಇಟಾವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವ್ನಿಶ್ ರೈ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ನಾಲ್ಕು ವರ್ಷದ ಬಾಲಕ ರಿಶವ್ ಮತ್ತು ಆತನ 75 ವರ್ಷದ ಅಜ್ಜಿ ಶಾರದಾ ದೇವಿ ಗಂಭೀರವಾಗಿ ಗಾಯಗೊಂಡಿದ್ದು, ಡಾ.ಭೀಮರಾವ್ ಅಂಬೇಡ್ಕರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 4 ಲಕ್ಷ ರೂ ಪರಿಹಾರ ನೀಡಲಿದ್ದಾರೆ. ಎರಡನೇ ಘಟನೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಅವರ ತಾಯಿಯೂ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡನೇ ಘಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಮೂರನೇ ಗೋಡೆ ಕುಸಿತದ ಘಟನೆ ಇಟಾವಾಹ್‌ನ ಅಂಡವಾ ಕೆ ಬಾಂಗ್ಲಾನ್ ಗ್ರಾಮದಲ್ಲಿ ನಡೆದಿದೆ. ಜಬರ್ ಸಿಂಗ್ (35) ಅವರ ಮನೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದು ಜೀವಂತ ಸಮಾಧಿಯಾಗಿದ್ದರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಬುಧವಾರ, ಹವಾಮಾನ ಇಲಾಖೆಯು ಯುಪಿಯಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಶುಕ್ರವಾರವೂ ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ