AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಮನೆಗಳ ಗೋಡೆ ಕುಸಿದು 7 ಮಕ್ಕಳು ಸಾವು

ಭಾರೀ ಮಳೆಗೆ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು 24 ಗಂಟೆಗಳ ಅಂತರದಲ್ಲಿ ಏಳು ಮಕ್ಕಳು ಉತ್ತರ ಪ್ರದೇಶದ ಇಟಾವಾದಲ್ಲಿ ಸಾವನ್ನಪ್ಪಿದ್ದಾರೆ. ಮಳೆಯ ಅನಾಹುತಕ್ಕೆ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ.

ಭಾರೀ ಮಳೆಗೆ ಮನೆಗಳ ಗೋಡೆ ಕುಸಿದು 7 ಮಕ್ಕಳು ಸಾವು
7 children killed as wall of houses collapses due to heavy rains
TV9 Web
| Edited By: |

Updated on: Sep 22, 2022 | 5:55 PM

Share

ಉತ್ತರಪ್ರದೇಶ: ಭಾರೀ ಮಳೆಗೆ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು 24 ಗಂಟೆಗಳ ಅಂತರದಲ್ಲಿ ಏಳು ಮಕ್ಕಳು ಉತ್ತರ ಪ್ರದೇಶದ ಇಟಾವಾದಲ್ಲಿ ಸಾವನ್ನಪ್ಪಿದ್ದಾರೆ. ಮಳೆಯ ಅನಾಹುತಕ್ಕೆ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಘಟನೆಯಲ್ಲಿ ಬುಧವಾರ ತಡರಾತ್ರಿ ಚಂದ್ರಾಪುರ ಗ್ರಾಮದಲ್ಲಿ ನಾಲ್ವರು ಮಕ್ಕಳು ನಿದ್ರೆಯಲ್ಲಿರುವಾಗ ಮನೆಯ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಸಿಂಕು (10), ಅಭಿ (8), ಸೋನು (7), ಆರತಿ (5) ಎಂದು ಗುರುತಿಸಲಾಗಿದೆ ಎಂದು ಇಟಾವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವ್ನಿಶ್ ರೈ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ನಾಲ್ಕು ವರ್ಷದ ಬಾಲಕ ರಿಶವ್ ಮತ್ತು ಆತನ 75 ವರ್ಷದ ಅಜ್ಜಿ ಶಾರದಾ ದೇವಿ ಗಂಭೀರವಾಗಿ ಗಾಯಗೊಂಡಿದ್ದು, ಡಾ.ಭೀಮರಾವ್ ಅಂಬೇಡ್ಕರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 4 ಲಕ್ಷ ರೂ ಪರಿಹಾರ ನೀಡಲಿದ್ದಾರೆ. ಎರಡನೇ ಘಟನೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಅವರ ತಾಯಿಯೂ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡನೇ ಘಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಮೂರನೇ ಗೋಡೆ ಕುಸಿತದ ಘಟನೆ ಇಟಾವಾಹ್‌ನ ಅಂಡವಾ ಕೆ ಬಾಂಗ್ಲಾನ್ ಗ್ರಾಮದಲ್ಲಿ ನಡೆದಿದೆ. ಜಬರ್ ಸಿಂಗ್ (35) ಅವರ ಮನೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದು ಜೀವಂತ ಸಮಾಧಿಯಾಗಿದ್ದರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಬುಧವಾರ, ಹವಾಮಾನ ಇಲಾಖೆಯು ಯುಪಿಯಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಶುಕ್ರವಾರವೂ ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

Follow Us
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ