AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಮನೆಗಳ ಗೋಡೆ ಕುಸಿದು 7 ಮಕ್ಕಳು ಸಾವು

ಭಾರೀ ಮಳೆಗೆ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು 24 ಗಂಟೆಗಳ ಅಂತರದಲ್ಲಿ ಏಳು ಮಕ್ಕಳು ಉತ್ತರ ಪ್ರದೇಶದ ಇಟಾವಾದಲ್ಲಿ ಸಾವನ್ನಪ್ಪಿದ್ದಾರೆ. ಮಳೆಯ ಅನಾಹುತಕ್ಕೆ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ.

ಭಾರೀ ಮಳೆಗೆ ಮನೆಗಳ ಗೋಡೆ ಕುಸಿದು 7 ಮಕ್ಕಳು ಸಾವು
7 children killed as wall of houses collapses due to heavy rains
TV9 Web
| Edited By: |

Updated on: Sep 22, 2022 | 5:55 PM

Share

ಉತ್ತರಪ್ರದೇಶ: ಭಾರೀ ಮಳೆಗೆ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು 24 ಗಂಟೆಗಳ ಅಂತರದಲ್ಲಿ ಏಳು ಮಕ್ಕಳು ಉತ್ತರ ಪ್ರದೇಶದ ಇಟಾವಾದಲ್ಲಿ ಸಾವನ್ನಪ್ಪಿದ್ದಾರೆ. ಮಳೆಯ ಅನಾಹುತಕ್ಕೆ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಘಟನೆಯಲ್ಲಿ ಬುಧವಾರ ತಡರಾತ್ರಿ ಚಂದ್ರಾಪುರ ಗ್ರಾಮದಲ್ಲಿ ನಾಲ್ವರು ಮಕ್ಕಳು ನಿದ್ರೆಯಲ್ಲಿರುವಾಗ ಮನೆಯ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಸಿಂಕು (10), ಅಭಿ (8), ಸೋನು (7), ಆರತಿ (5) ಎಂದು ಗುರುತಿಸಲಾಗಿದೆ ಎಂದು ಇಟಾವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವ್ನಿಶ್ ರೈ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ನಾಲ್ಕು ವರ್ಷದ ಬಾಲಕ ರಿಶವ್ ಮತ್ತು ಆತನ 75 ವರ್ಷದ ಅಜ್ಜಿ ಶಾರದಾ ದೇವಿ ಗಂಭೀರವಾಗಿ ಗಾಯಗೊಂಡಿದ್ದು, ಡಾ.ಭೀಮರಾವ್ ಅಂಬೇಡ್ಕರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 4 ಲಕ್ಷ ರೂ ಪರಿಹಾರ ನೀಡಲಿದ್ದಾರೆ. ಎರಡನೇ ಘಟನೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಅವರ ತಾಯಿಯೂ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡನೇ ಘಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಮೂರನೇ ಗೋಡೆ ಕುಸಿತದ ಘಟನೆ ಇಟಾವಾಹ್‌ನ ಅಂಡವಾ ಕೆ ಬಾಂಗ್ಲಾನ್ ಗ್ರಾಮದಲ್ಲಿ ನಡೆದಿದೆ. ಜಬರ್ ಸಿಂಗ್ (35) ಅವರ ಮನೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದು ಜೀವಂತ ಸಮಾಧಿಯಾಗಿದ್ದರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಬುಧವಾರ, ಹವಾಮಾನ ಇಲಾಖೆಯು ಯುಪಿಯಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಶುಕ್ರವಾರವೂ ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು