AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಮನೆಗಳ ಗೋಡೆ ಕುಸಿದು 7 ಮಕ್ಕಳು ಸಾವು

ಭಾರೀ ಮಳೆಗೆ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು 24 ಗಂಟೆಗಳ ಅಂತರದಲ್ಲಿ ಏಳು ಮಕ್ಕಳು ಉತ್ತರ ಪ್ರದೇಶದ ಇಟಾವಾದಲ್ಲಿ ಸಾವನ್ನಪ್ಪಿದ್ದಾರೆ. ಮಳೆಯ ಅನಾಹುತಕ್ಕೆ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ.

ಭಾರೀ ಮಳೆಗೆ ಮನೆಗಳ ಗೋಡೆ ಕುಸಿದು 7 ಮಕ್ಕಳು ಸಾವು
7 children killed as wall of houses collapses due to heavy rains
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 22, 2022 | 5:55 PM

Share

ಉತ್ತರಪ್ರದೇಶ: ಭಾರೀ ಮಳೆಗೆ ಚಂದ್ರಪುರ ಮತ್ತು ಘಾಟಿಯಾ ಅಜ್ಮತ್ ಅಲಿ ಪ್ರದೇಶಗಳಲ್ಲಿ ಮನೆಗಳ ಗೋಡೆಗಳು ಕುಸಿದು 24 ಗಂಟೆಗಳ ಅಂತರದಲ್ಲಿ ಏಳು ಮಕ್ಕಳು ಉತ್ತರ ಪ್ರದೇಶದ ಇಟಾವಾದಲ್ಲಿ ಸಾವನ್ನಪ್ಪಿದ್ದಾರೆ. ಮಳೆಯ ಅನಾಹುತಕ್ಕೆ ಜಿಲ್ಲೆಯಾದ್ಯಂತ ಇದುವರೆಗೆ 10 ಮಂದಿ ಸಾವನ್ನಪ್ಪಿದ್ದಾರೆ. ಮೊದಲ ಘಟನೆಯಲ್ಲಿ ಬುಧವಾರ ತಡರಾತ್ರಿ ಚಂದ್ರಾಪುರ ಗ್ರಾಮದಲ್ಲಿ ನಾಲ್ವರು ಮಕ್ಕಳು ನಿದ್ರೆಯಲ್ಲಿರುವಾಗ ಮನೆಯ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಸಿಂಕು (10), ಅಭಿ (8), ಸೋನು (7), ಆರತಿ (5) ಎಂದು ಗುರುತಿಸಲಾಗಿದೆ ಎಂದು ಇಟಾವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವ್ನಿಶ್ ರೈ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ನಾಲ್ಕು ವರ್ಷದ ಬಾಲಕ ರಿಶವ್ ಮತ್ತು ಆತನ 75 ವರ್ಷದ ಅಜ್ಜಿ ಶಾರದಾ ದೇವಿ ಗಂಭೀರವಾಗಿ ಗಾಯಗೊಂಡಿದ್ದು, ಡಾ.ಭೀಮರಾವ್ ಅಂಬೇಡ್ಕರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 4 ಲಕ್ಷ ರೂ ಪರಿಹಾರ ನೀಡಲಿದ್ದಾರೆ. ಎರಡನೇ ಘಟನೆಯಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಅವರ ತಾಯಿಯೂ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡನೇ ಘಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಮೂರನೇ ಗೋಡೆ ಕುಸಿತದ ಘಟನೆ ಇಟಾವಾಹ್‌ನ ಅಂಡವಾ ಕೆ ಬಾಂಗ್ಲಾನ್ ಗ್ರಾಮದಲ್ಲಿ ನಡೆದಿದೆ. ಜಬರ್ ಸಿಂಗ್ (35) ಅವರ ಮನೆಯು ಭಾರೀ ಮಳೆಯಿಂದಾಗಿ ಕುಸಿದುಬಿದ್ದು ಜೀವಂತ ಸಮಾಧಿಯಾಗಿದ್ದರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಬುಧವಾರ, ಹವಾಮಾನ ಇಲಾಖೆಯು ಯುಪಿಯಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಶುಕ್ರವಾರವೂ ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?