AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಿಯಲ್ಲಿ ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ; ವಿಡಿಯೋ ವೈರಲ್

ಇಂದು (ಮಂಗಳವಾರ) ಸಂಜೆ ಪುರಿಯಲ್ಲಿ ಮೂರು ದೇವರ ಮೂರ್ತಿಗಳನ್ನು ರಥದಿಂದ ಗುಂಡಿಚಾ ದೇವಸ್ಥಾನದ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದಾಗ ಬಾಲಭದ್ರ ವಿಗ್ರಹ ಮಗುಚಿದ ಪರಿಣಾಮ ಈ ಘಟನೆ ನಡೆದಿದೆ.

ಪುರಿಯಲ್ಲಿ ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ; ವಿಡಿಯೋ ವೈರಲ್
ಪುರಿಯಲ್ಲಿ ರಥಯಾತ್ರೆ ವೇಳೆ ಬಾಲಭದ್ರ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ
ಸುಷ್ಮಾ ಚಕ್ರೆ
|

Updated on:Jul 09, 2024 | 10:41 PM

Share

ಪುರಿ: ಒಡಿಶಾದ ಪುರಿಯಲ್ಲಿ ನಡೆದ ರಥಯಾತ್ರೆಯ ನಂತರ ನಡೆದ ಸಮಾರಂಭದಲ್ಲಿ ಭಗವಾನ್ ಬಾಲಭದ್ರ ದೇವರ ವಿಗ್ರಹವು ಉರುಳಿ ಬಿದ್ದು 7 ಭಕ್ತರು ಗಾಯಗೊಂಡಿದ್ದಾರೆ. ಇಂದು ಸಂಜೆ ಮೂರು ಮೂರ್ತಿಗಳನ್ನು ರಥದಿಂದ ಗುಂಡಿಚಾ ದೇವಸ್ಥಾನದ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.

ಒಡಹುಟ್ಟಿದ ದೇವತೆಗಳಾದ ಜಗನ್ನಾಥ, ಬಾಲಭದ್ರ ಮತ್ತು ದೇವಿ ಸುಭದ್ರರ ರಥಗಳು ಸೋಮವಾರ ಗುಂಡಿಚಾ ದೇವಸ್ಥಾನವನ್ನು ತಲುಪಿದವು, ಇದರೊಂದಿಗೆ ಒಡಿಶಾದ ಪುರಿಯಲ್ಲಿ ರಥಯಾತ್ರೆಯ ಮೊದಲ ಹಂತದ ಆಚರಣೆಗಳು ಮುಕ್ತಾಯಗೊಂಡವು.

ಇದನ್ನೂ ಓದಿ: Viral Video: ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್

ಇತರ ಧಾರ್ಮಿಕ ವಿಧಿ- ವಿಧಾನಗಳು ಮುಗಿದ ನಂತರ, ಮೂರ್ತಿಗಳ ‘ಪಹಂಡಿ’ ಪ್ರಾರಂಭವಾಯಿತು. ಅಲ್ಲಿ ಮೂರು ವಿಗ್ರಹಗಳನ್ನು ಸೇವಕರು ಮೂರ್ತಿಗಳನ್ನು ನಿಧಾನವಾಗಿ ರಥದ ಮೂಲಕ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದರು. ತಾಳಧ್ವಜ ಎಂಬ ರಥದಿಂದ ಬಾಲಭದ್ರ ದೇವರ ವಿಗ್ರಹವನ್ನು ತೆಗೆದುಕೊಳ್ಳುವಾಗ ರಥದ ಚರಮಲದಲ್ಲಿ ವಿಗ್ರಹವು ಜಾರಿಬಿದ್ದು, ಸೇವಕರ ಮೇಲೆ ಬಿದ್ದಿತು.

ತಕ್ಷಣ ರಕ್ಷಣಾ ಸಿಬ್ಬಂದಿ ಮತ್ತು ಇತರ ಸೇವಕರು ಸ್ಥಳಕ್ಕೆ ಧಾವಿಸಿ ವಿಗ್ರಹವನ್ನು ಎತ್ತಿದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. 2 ದಿನಗಳ ಕಾಲ ನಡೆದ ಈ ರಥಯಾತ್ರೆಯಲ್ಲಿ ಜನದಟ್ಟಣೆಯಿಂದಾಗಿ ಭಾನುವಾರ ಮತ್ತು ಸೋಮವಾರ ಕ್ರಮವಾಗಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: Viral Video: ಹಾಸ್ಟೆಲ್​​ನಲ್ಲಿ ನೀಡಿದ ಚಟ್ನಿಯಲ್ಲಿ ಈಜಾಡಿದ ಇಲಿ; ಶಾಕಿಂಗ್ ವಿಡಿಯೋ ವೈರಲ್

ಸಾವಿರಾರು ಜನರು ರಥಗಳನ್ನು ಎಳೆದರೆ, ಈ ಮೆರವಣಿಗೆಯನ್ನು ವೀಕ್ಷಿಸಲು ಲಕ್ಷಾಂತರ ಭಕ್ತರು ರಸ್ತೆಬದಿಯಲ್ಲಿ ಜಮಾಯಿಸಿದರು. ಭಾನುವಾರದಿಂದ ರಥಯಾತ್ರೆ ಆರಂಭವಾಗಿತ್ತು. ಮೂರು ಭವ್ಯವಾದ ರಥಗಳು ಗ್ರ್ಯಾಂಡ್ ರಸ್ತೆಯಲ್ಲಿರುವ ಗುಂಡಿಚಾ ದೇವಸ್ಥಾನದ ಹೊರಗೆ ಉಳಿಯುತ್ತವೆ. ಮಂಗಳವಾರ ಶಾಸ್ತ್ರೋಕ್ತವಾಗಿ ದೇಗುಲದೊಳಗೆ ದೇವರನ್ನು ಕೊಂಡೊಯ್ಯಲಾಯಿತು. ಈ ದೇವಾಲಯದಲ್ಲಿ ದೇವತೆಗಳು ಒಂದು ವಾರ ಇರುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:40 pm, Tue, 9 July 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ