AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಟ್ರ್ಯಾಕ್ಟರ್​ ಹಾಗೂ ಕಾರು ನಡುವೆ ಡಿಕ್ಕಿ, ಮೂವರು ಮಕ್ಕಳು ಸೇರಿ 7 ಮಂದಿ ಸಾವು

ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಚೌತಮ್ ಬ್ಲಾಕ್ ಪ್ರದೇಶದಲ್ಲಿ ಮದುವೆ ಮುಗಿಸಿ ಸಂಬಂಧಿಕರು ಕಾರಿನಲ್ಲಿ ಹಿಂದಿರುಗುತ್ತಿದ್ದರು. ಅಪಘಾತವು ಎನ್​ಎಚ್​-31ನಲ್ಲಿ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಬಿಹಾರ: ಟ್ರ್ಯಾಕ್ಟರ್​ ಹಾಗೂ ಕಾರು ನಡುವೆ ಡಿಕ್ಕಿ, ಮೂವರು ಮಕ್ಕಳು ಸೇರಿ 7 ಮಂದಿ ಸಾವು
ಅಪಘಾತ
ನಯನಾ ರಾಜೀವ್
|

Updated on: Mar 18, 2024 | 8:02 AM

Share

ಬಿಹಾರದ ಖಗಾರಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸವನ್ನಪ್ಪಿದ್ದಾರೆ. ಮದುವೆ ಮನೆಯಿಂದ ಹಿಂದಿರುಗುತ್ತಿದ್ದ ವೇಳೆ ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ. ಮೂವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಚೌತಮ್ ಬ್ಲಾಕ್ ಪ್ರದೇಶದಲ್ಲಿ ಮದುವೆ ಮುಗಿಸಿ ಸಂಬಂಧಿಕರು ಕಾರಿನಲ್ಲಿ ಹಿಂದಿರುಗುತ್ತಿದ್ದರು. ಅಪಘಾತವು ಎನ್​ಎಚ್​-31ನಲ್ಲಿ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಅಪಘಾತದ ಬಗ್ಗೆ ತಕ್ಷಣ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಹೊರ ತೆಗೆದಿದ್ದಾರೆ. ಪಸ್ರಾಹ ಪೊಲೀಸ್​ ಠಾಣೆ ವ್ಯಾಪ್ತಿಯ ವಿದ್ಯಾರತ್ನ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ.

ಮತ್ತಷ್ಟು ಓದಿ: ಬೆಳಗಾವಿಯಲ್ಲಿ ಹೆಚ್ಚಾದ ಅಪಘಾತ ಪ್ರಕರಣಗಳು; ಕೇವಲ ಮೂರು ದಿನದಲ್ಲಿ 25 ಸಾವು

ಮಾರ್ಚ್​ 13ರಂದು ನಡೆದ ಮತ್ತೊಂದು ಘಟನೆ ಮಜಾಫರ್​ಪರದಲ್ಲಿ ಕಾರು ಹಾಗೂ ಟ್ರಕ್​ಗೆ ಡಿಕ್ಕಿ, ಐವರು ಸಾವು ಬಿಹಾರದ ಮುಜಾಫರ್​ಪುರ ಜಿಲ್ಲೆಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದರು. ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮದುವೆ ಮುಗಿಸಿ ಬರುವಾಗ ಘಟನೆ ನಡೆದಿದೆ. ಮೃತರೆಲ್ಲರೂ ಸೀತಾರ್ಹಿ ನಿವಾಸಿಯಾಗಿದ್ದಾರೆ. ಬೊಲೆರೋ ಕಾರು ಎನ್​ಎಚ್​77ರಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಬೊಲೆರೋದಲ್ಲಿ 11 ಮಂದಿ ಇದ್ದರು.

ಗೋವಾದಲ್ಲಿ ಟ್ರಕ್​ ಕಂದಕಕ್ಕೆ ಉರುಳಿ ಓರ್ವ ಸಾವು, 13 ಮಂದಿಗೆ ಗಾಯ ಟ್ರಕ್​ವೊಂದು ಕಂದಕಕ್ಕೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಗೋವಾದಲ್ಲಿ ನಡೆದಿದೆ. ತಕ್ಷಣವೇ ಸಿಎಂ ಪ್ರಮೋದ್ ಸಾವಂತ್ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾದರು. ಆಯುರ್ವೇದ ವೈದ್ಯರಾಗಿರುವ ಸಾವಂತ್ ಅವರು ಸಂತ್ರಸ್ತರ ನಾಡಿಮಿಡಿತವನ್ನು ಪರಿಶೀಲಿಸಿದರು, ಫಲ್ ದೇಸಾಯಿ ಅವರು ಕಂದಕಕ್ಕೆ ಇಳಿದು ಅಪಘಾತಕ್ಕೀಡಾದ ವಾಹನದಿಂದ ಗಾಯಅಳುಗಳನ್ನು ಹೊರತೆಗೆಯಲು ಸಹಾಯ ಮಾಡಿದರು.

ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಟ್ರಕ್​ ತಿರುಗಿ ಕಂದಕಕ್ಕೆ ಬಿದ್ದಿತ್ತು. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಮಕ್ಕಳು ಸೇರಿದಂತೆ 13 ಮಂದಿ ಪುರುಷರು ಮತ್ತು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಎಂ ಸಾವಂತ್ ಮತ್ತು ಸಚಿವ ಫಲ್ ದೇಸಾಯಿ ಅವರು ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಮತ್ತು ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ