AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಟ್ರ್ಯಾಕ್ಟರ್​ ಹಾಗೂ ಕಾರು ನಡುವೆ ಡಿಕ್ಕಿ, ಮೂವರು ಮಕ್ಕಳು ಸೇರಿ 7 ಮಂದಿ ಸಾವು

ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಚೌತಮ್ ಬ್ಲಾಕ್ ಪ್ರದೇಶದಲ್ಲಿ ಮದುವೆ ಮುಗಿಸಿ ಸಂಬಂಧಿಕರು ಕಾರಿನಲ್ಲಿ ಹಿಂದಿರುಗುತ್ತಿದ್ದರು. ಅಪಘಾತವು ಎನ್​ಎಚ್​-31ನಲ್ಲಿ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಬಿಹಾರ: ಟ್ರ್ಯಾಕ್ಟರ್​ ಹಾಗೂ ಕಾರು ನಡುವೆ ಡಿಕ್ಕಿ, ಮೂವರು ಮಕ್ಕಳು ಸೇರಿ 7 ಮಂದಿ ಸಾವು
ಅಪಘಾತ
Follow us
ನಯನಾ ರಾಜೀವ್
|

Updated on: Mar 18, 2024 | 8:02 AM

ಬಿಹಾರದ ಖಗಾರಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸವನ್ನಪ್ಪಿದ್ದಾರೆ. ಮದುವೆ ಮನೆಯಿಂದ ಹಿಂದಿರುಗುತ್ತಿದ್ದ ವೇಳೆ ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ. ಮೂವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಚೌತಮ್ ಬ್ಲಾಕ್ ಪ್ರದೇಶದಲ್ಲಿ ಮದುವೆ ಮುಗಿಸಿ ಸಂಬಂಧಿಕರು ಕಾರಿನಲ್ಲಿ ಹಿಂದಿರುಗುತ್ತಿದ್ದರು. ಅಪಘಾತವು ಎನ್​ಎಚ್​-31ನಲ್ಲಿ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಅಪಘಾತದ ಬಗ್ಗೆ ತಕ್ಷಣ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಹೊರ ತೆಗೆದಿದ್ದಾರೆ. ಪಸ್ರಾಹ ಪೊಲೀಸ್​ ಠಾಣೆ ವ್ಯಾಪ್ತಿಯ ವಿದ್ಯಾರತ್ನ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ.

ಮತ್ತಷ್ಟು ಓದಿ: ಬೆಳಗಾವಿಯಲ್ಲಿ ಹೆಚ್ಚಾದ ಅಪಘಾತ ಪ್ರಕರಣಗಳು; ಕೇವಲ ಮೂರು ದಿನದಲ್ಲಿ 25 ಸಾವು

ಮಾರ್ಚ್​ 13ರಂದು ನಡೆದ ಮತ್ತೊಂದು ಘಟನೆ ಮಜಾಫರ್​ಪರದಲ್ಲಿ ಕಾರು ಹಾಗೂ ಟ್ರಕ್​ಗೆ ಡಿಕ್ಕಿ, ಐವರು ಸಾವು ಬಿಹಾರದ ಮುಜಾಫರ್​ಪುರ ಜಿಲ್ಲೆಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದರು. ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮದುವೆ ಮುಗಿಸಿ ಬರುವಾಗ ಘಟನೆ ನಡೆದಿದೆ. ಮೃತರೆಲ್ಲರೂ ಸೀತಾರ್ಹಿ ನಿವಾಸಿಯಾಗಿದ್ದಾರೆ. ಬೊಲೆರೋ ಕಾರು ಎನ್​ಎಚ್​77ರಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಬೊಲೆರೋದಲ್ಲಿ 11 ಮಂದಿ ಇದ್ದರು.

ಗೋವಾದಲ್ಲಿ ಟ್ರಕ್​ ಕಂದಕಕ್ಕೆ ಉರುಳಿ ಓರ್ವ ಸಾವು, 13 ಮಂದಿಗೆ ಗಾಯ ಟ್ರಕ್​ವೊಂದು ಕಂದಕಕ್ಕೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಗೋವಾದಲ್ಲಿ ನಡೆದಿದೆ. ತಕ್ಷಣವೇ ಸಿಎಂ ಪ್ರಮೋದ್ ಸಾವಂತ್ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾದರು. ಆಯುರ್ವೇದ ವೈದ್ಯರಾಗಿರುವ ಸಾವಂತ್ ಅವರು ಸಂತ್ರಸ್ತರ ನಾಡಿಮಿಡಿತವನ್ನು ಪರಿಶೀಲಿಸಿದರು, ಫಲ್ ದೇಸಾಯಿ ಅವರು ಕಂದಕಕ್ಕೆ ಇಳಿದು ಅಪಘಾತಕ್ಕೀಡಾದ ವಾಹನದಿಂದ ಗಾಯಅಳುಗಳನ್ನು ಹೊರತೆಗೆಯಲು ಸಹಾಯ ಮಾಡಿದರು.

ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಟ್ರಕ್​ ತಿರುಗಿ ಕಂದಕಕ್ಕೆ ಬಿದ್ದಿತ್ತು. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಮಕ್ಕಳು ಸೇರಿದಂತೆ 13 ಮಂದಿ ಪುರುಷರು ಮತ್ತು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಎಂ ಸಾವಂತ್ ಮತ್ತು ಸಚಿವ ಫಲ್ ದೇಸಾಯಿ ಅವರು ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಮತ್ತು ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ