AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಅಡ್ಡಬಂದ ಕಾಡುಪ್ರಾಣಿ; ಬಿಜೆಪಿ ಶಾಸಕನ ಪುತ್ರ ಸೇರಿ 7ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ

ಒಬ್ಬ ವಿದ್ಯಾರ್ಥಿಯ ಹುಟ್ಟುಹಬ್ಬ ಆಚರಿಸಲು ಇವರೆಲ್ಲ ಹೋಗಿದ್ದರು. ಪಾರ್ಟಿ ಮುಗಿಸಿ ವಾಪಸ್​ ಬರುವಾಗ ಸೆಲ್ಸುರಾ ಹಳ್ಳಿಯ ಮಾರ್ಗದಲ್ಲಿ ಕಾಡುಪ್ರಾಣಿಯೊಂದು ಕಾರಿಗೆ ಅಡ್ಡಬಂದು ಅಪಘಾತ ನಡೆದಿದೆ.

ಕಾರಿಗೆ ಅಡ್ಡಬಂದ ಕಾಡುಪ್ರಾಣಿ; ಬಿಜೆಪಿ ಶಾಸಕನ ಪುತ್ರ ಸೇರಿ 7ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ
ಅಪಘಾತದಿಂದ ನುಜ್ಜುಗುಜ್ಜಾಗಿರುವ ಕಾರು
TV9 Web
| Edited By: |

Updated on:Jan 25, 2022 | 9:26 AM

Share

ಮಹಾರಾಷ್ಟ್ರದ ವಾರ್ಧಾದಲ್ಲಿ ಸೋಮವಾರ ರಾತ್ರಿ 11.30ರ ಹೊತ್ತಿಗೆ ನಡೆದ ಅಪಘಾತದಲ್ಲಿ ಬಿಜೆಪಿ ಶಾಸಕನ (BJP MLA) ಪುತ್ರ ಸೇರಿ ಒಟ್ಟು ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆ ನಡೆದಿದೆ.  ಇವರು ಕಾರಿನಲ್ಲಿ ಸೆಲ್ಸುರಾ ಹಳ್ಳಿಯ ಮಾರ್ಗದಲ್ಲಿ ಪ್ರಯಾಣ ಮಾಡುತ್ತಿದ್ದರು. ಇವರ ಕಾರಿಗೆ ಅಡ್ಡವಾಗಿ ಕಾಡುಪ್ರಾಣಿಯೊಂದು ಅಡ್ಡಬಂದ ಪರಿಣಾಮ ಈ ಅಪಘಾತ ನಡೆದಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಾರ್ಧಾ ಎಸ್​ಪಿ ಪ್ರಶಾಂತ್​ ಹೋಲ್ಕರ್​, ಕಾಡು ಪ್ರಾಣಿ ಅಡ್ಡ ಬಂದ ಹಿನ್ನೆಲೆಯಲ್ಲಿ ಕಾರಿನ ಡ್ರೈವರ್​ ಅದನ್ನು ತಪ್ಪಿಸಲು ಬಲವಾಗಿ ತಿರುಗಿಸಿದ. ಪರಿಣಾಮ ಕಾರು ಅಲ್ಲಿಯೇ ಇದ್ದ ಸೇತುವೆ ಕಟ್ಟೆಗೆ ಹೊಡೆದು, ಸೇತುವೆಯ ಕೆಳಗಿನ ಮೋರಿಗೆ ಬಿದ್ದಿದೆ. ಕಾರು ಸಂಪೂರ್ಣ ಜಖಂ ಆಗಿದ್ದು, ಅದರಲ್ಲಿರುವ ವಿದ್ಯಾರ್ಥಿಗಳೆಲ್ಲ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಒಬ್ಬ ವಿದ್ಯಾರ್ಥಿಯ ಹುಟ್ಟುಹಬ್ಬ ಆಚರಿಸಲು ಇವರೆಲ್ಲ ಹೋಗಿದ್ದರು. ಪಾರ್ಟಿ ಮುಗಿಸಿ ವಾಪಸ್​ ಬರುವಾಗ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. 

ಮೃತ ವೈದ್ಯಕೀಯ ವಿದ್ಯಾರ್ಥಿಗಳನ್ನು ಆವಿಷ್ಕಾರ್​, ನೀರಜ್​ ಚವನ್​, ನಿತೇಶ್​ ಸಿಂಗ್​, ವಿವೇಕ್​ ನಂದನ್​, ಪ್ರತ್ಯುಷ್​ ಸಿಂಗ್​, ಶುಭಂ ಜೈಸ್ವಾಲ್​, ಪವನ್​ ಶಕ್ತಿ ಎಂದು ಗುರುತಿಸಲಾಗಿದೆ. ಇವರಲ್ಲಿ ಆವಿಷ್ಕಾರ್​ ಬಿಜೆಪಿಯ ತಿರೋರಾ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯ್ ಭರತಲಾಲ್ ರಹಂಗ್‌ಡೇಲ್ರ ಪುತ್ರ ಎಂದು ಹೇಳಲಾಗಿದೆ. ಇವರಲ್ಲಿ 3ಮಂದಿ ಉತ್ತರ ಪ್ರದೇಶ, ಇಬ್ಬರು ಬಿಹಾರ ಮತ್ತು ಒಬ್ಬಾತ ಒಡಿಶಾದವನಾಗಿದ್ದಾನೆ.

ಇದನ್ನೂ ಓದಿ: ಸಿನಿಮಾ ಶೂಟಿಂಗ್​ನಲ್ಲಿ ನಟಿ ರಮೋಲಾ ಬ್ಯುಸಿ; ವೈರಲ್​ ಆಗುತ್ತಿದೆ ಸಾಂಗ್​ ಶೂಟ್​ ವಿಡಿಯೋ

Published On - 9:14 am, Tue, 25 January 22

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್