AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿಗೆ ಅಡ್ಡಬಂದ ಕಾಡುಪ್ರಾಣಿ; ಬಿಜೆಪಿ ಶಾಸಕನ ಪುತ್ರ ಸೇರಿ 7ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ

ಒಬ್ಬ ವಿದ್ಯಾರ್ಥಿಯ ಹುಟ್ಟುಹಬ್ಬ ಆಚರಿಸಲು ಇವರೆಲ್ಲ ಹೋಗಿದ್ದರು. ಪಾರ್ಟಿ ಮುಗಿಸಿ ವಾಪಸ್​ ಬರುವಾಗ ಸೆಲ್ಸುರಾ ಹಳ್ಳಿಯ ಮಾರ್ಗದಲ್ಲಿ ಕಾಡುಪ್ರಾಣಿಯೊಂದು ಕಾರಿಗೆ ಅಡ್ಡಬಂದು ಅಪಘಾತ ನಡೆದಿದೆ.

ಕಾರಿಗೆ ಅಡ್ಡಬಂದ ಕಾಡುಪ್ರಾಣಿ; ಬಿಜೆಪಿ ಶಾಸಕನ ಪುತ್ರ ಸೇರಿ 7ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ
ಅಪಘಾತದಿಂದ ನುಜ್ಜುಗುಜ್ಜಾಗಿರುವ ಕಾರು
TV9 Web
| Edited By: |

Updated on:Jan 25, 2022 | 9:26 AM

Share

ಮಹಾರಾಷ್ಟ್ರದ ವಾರ್ಧಾದಲ್ಲಿ ಸೋಮವಾರ ರಾತ್ರಿ 11.30ರ ಹೊತ್ತಿಗೆ ನಡೆದ ಅಪಘಾತದಲ್ಲಿ ಬಿಜೆಪಿ ಶಾಸಕನ (BJP MLA) ಪುತ್ರ ಸೇರಿ ಒಟ್ಟು ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆ ನಡೆದಿದೆ.  ಇವರು ಕಾರಿನಲ್ಲಿ ಸೆಲ್ಸುರಾ ಹಳ್ಳಿಯ ಮಾರ್ಗದಲ್ಲಿ ಪ್ರಯಾಣ ಮಾಡುತ್ತಿದ್ದರು. ಇವರ ಕಾರಿಗೆ ಅಡ್ಡವಾಗಿ ಕಾಡುಪ್ರಾಣಿಯೊಂದು ಅಡ್ಡಬಂದ ಪರಿಣಾಮ ಈ ಅಪಘಾತ ನಡೆದಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಾರ್ಧಾ ಎಸ್​ಪಿ ಪ್ರಶಾಂತ್​ ಹೋಲ್ಕರ್​, ಕಾಡು ಪ್ರಾಣಿ ಅಡ್ಡ ಬಂದ ಹಿನ್ನೆಲೆಯಲ್ಲಿ ಕಾರಿನ ಡ್ರೈವರ್​ ಅದನ್ನು ತಪ್ಪಿಸಲು ಬಲವಾಗಿ ತಿರುಗಿಸಿದ. ಪರಿಣಾಮ ಕಾರು ಅಲ್ಲಿಯೇ ಇದ್ದ ಸೇತುವೆ ಕಟ್ಟೆಗೆ ಹೊಡೆದು, ಸೇತುವೆಯ ಕೆಳಗಿನ ಮೋರಿಗೆ ಬಿದ್ದಿದೆ. ಕಾರು ಸಂಪೂರ್ಣ ಜಖಂ ಆಗಿದ್ದು, ಅದರಲ್ಲಿರುವ ವಿದ್ಯಾರ್ಥಿಗಳೆಲ್ಲ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಒಬ್ಬ ವಿದ್ಯಾರ್ಥಿಯ ಹುಟ್ಟುಹಬ್ಬ ಆಚರಿಸಲು ಇವರೆಲ್ಲ ಹೋಗಿದ್ದರು. ಪಾರ್ಟಿ ಮುಗಿಸಿ ವಾಪಸ್​ ಬರುವಾಗ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. 

ಮೃತ ವೈದ್ಯಕೀಯ ವಿದ್ಯಾರ್ಥಿಗಳನ್ನು ಆವಿಷ್ಕಾರ್​, ನೀರಜ್​ ಚವನ್​, ನಿತೇಶ್​ ಸಿಂಗ್​, ವಿವೇಕ್​ ನಂದನ್​, ಪ್ರತ್ಯುಷ್​ ಸಿಂಗ್​, ಶುಭಂ ಜೈಸ್ವಾಲ್​, ಪವನ್​ ಶಕ್ತಿ ಎಂದು ಗುರುತಿಸಲಾಗಿದೆ. ಇವರಲ್ಲಿ ಆವಿಷ್ಕಾರ್​ ಬಿಜೆಪಿಯ ತಿರೋರಾ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯ್ ಭರತಲಾಲ್ ರಹಂಗ್‌ಡೇಲ್ರ ಪುತ್ರ ಎಂದು ಹೇಳಲಾಗಿದೆ. ಇವರಲ್ಲಿ 3ಮಂದಿ ಉತ್ತರ ಪ್ರದೇಶ, ಇಬ್ಬರು ಬಿಹಾರ ಮತ್ತು ಒಬ್ಬಾತ ಒಡಿಶಾದವನಾಗಿದ್ದಾನೆ.

ಇದನ್ನೂ ಓದಿ: ಸಿನಿಮಾ ಶೂಟಿಂಗ್​ನಲ್ಲಿ ನಟಿ ರಮೋಲಾ ಬ್ಯುಸಿ; ವೈರಲ್​ ಆಗುತ್ತಿದೆ ಸಾಂಗ್​ ಶೂಟ್​ ವಿಡಿಯೋ

Published On - 9:14 am, Tue, 25 January 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!