AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಕತ್ತು ಸೀಳಿದ ಗಾಳಿಪಟ ದಾರ, 7 ವರ್ಷದ ಬಾಲಕ ಸಾವು

ಬೈಕ್​ನಲ್ಲಿ ತೆರಳುತ್ತಿದ್ದಾಗ ಗಾಳಿಪಟದ ದಾರ ಕತ್ತು ಸೀಳಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ನಗರದಲ್ಲಿ ನಡೆದಿದೆ. ಬಾಲಕ ತಂದೆಯೊಂದಿಗೆ ಮೋಟಾರ್​ಸೈಕಲ್​ನಲ್ಲಿ ಹೋಗುತ್ತಿದ್ದಾಗ ಗಾಳಿಪಟದ ಹರಿತವಾದ ದಾರ ಬಾಲಕನ ಗಂಟಲು ಸೀಳಿದೆ.

ಮಧ್ಯಪ್ರದೇಶ: ಕತ್ತು ಸೀಳಿದ ಗಾಳಿಪಟ ದಾರ, 7 ವರ್ಷದ ಬಾಲಕ ಸಾವು
ಗಾಳಿಪಟ ದಾರ
Follow us
ನಯನಾ ರಾಜೀವ್
|

Updated on: Jan 15, 2024 | 11:28 AM

ಬೈಕ್​ನಲ್ಲಿ ತೆರಳುತ್ತಿದ್ದಾಗ ಗಾಳಿಪಟ(Kite)ದ ದಾರ ಕತ್ತು ಸೀಳಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ನಗರದಲ್ಲಿ ನಡೆದಿದೆ. ಬಾಲಕ ತಂದೆಯೊಂದಿಗೆ ಮೋಟಾರ್​ಸೈಕಲ್​ನಲ್ಲಿ ಹೋಗುತ್ತಿದ್ದಾಗ ಗಾಳಿಪಟದ ಹರಿತವಾದ ದಾರ ಬಾಲಕನ ಗಂಟಲು ಸೀಳಿದೆ.

ತನಿಖೆ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಹತ್ವಾರಾ ಚೌಕ್‌ನಲ್ಲಿ ವಿನೋದ್ ಚೌಹಾಣ್ ಎಂಬಾತ ತನ್ನ ಏಳು ವರ್ಷದ ಮಗನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಚೌಹಾಣ್ ತಮ್ಮ ಗಾಯಗೊಂಡ ಮಗನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿಂದ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಲಾಯಿತು, ಅಲ್ಲಿ ವೈದ್ಯರು ಬಾಲಕ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ. ಹರಿತವಾದ ಗಾಳಿಪಟದ ದಾರದಿಂದ ಗಂಟಲು ಸೀಳಿದ ಏಳು ವರ್ಷದ ಬಾಲಕನನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು ಎಂದು ಡಾ ಅಮಿತ್ ಸಿಸೋಡಿಯಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: Gadag News: ನಾಲ್ಕೈದು‌ ಜನರ ಜೀವಕ್ಕೆ ಕುತ್ತು ತಂದ ನಿಷೇಧಿತ ಗಾಳಿಪಟ ಮಾಂಜಾ ದಾರ

ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಗಾಳಿಪಟಗಳನ್ನು ಹಾರಿಸಲು ಮಾಂಜಾ ದಾರವನ್ನು ಬಳಸಲಾಗುತ್ತದೆ. ಚೈನೀಸ್ ದಾರ ಅಥವಾ ಚೂಪಾದ ದಾರ ಬಳಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ (ಸಿಎಸ್‌ಪಿ) ರವೀಂದ್ರ ವಾಸ್ಕೆಲ್ ಹೇಳಿದ್ದಾರೆ.

ಧಾರ್‌ನ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ರೋಶನಿ ಪಾಟಿದಾರ್ ಮಾತನಾಡಿ, ಆಡಳಿತವು ಕಳೆದ ಹತ್ತು ದಿನಗಳಲ್ಲಿ ಚೀನಾದ ಮಾಂಜಾ (ಸ್ಟ್ರಿಂಗ್) ವಿರುದ್ಧ ಅಭಿಯಾನವನ್ನು ನಡೆಸಿದೆ ಎಂದು ಹೇಳಿದರು. ಇದೊಂದು ದುಃಖಕರ ಘಟನೆ. ನಾವು ತಂಡಗಳನ್ನು ರಚಿಸಿದ್ದೇವೆ ಮತ್ತು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ