AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು

ಅಲಿಘರ್ ರೈಲ್ವೆ ನಿಲ್ದಾಣದಲ್ಲಿ 7 ವರ್ಷದ ಪುಟ್ಟ ಬಾಲಕಿ ತನ್ನ ತಾಯಿಯ ಪಾಲಿಗೆ ಜೀವದಾತೆಯಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ತನ್ನ ತಾಯಿಯ ಜೀವವನ್ನು ಆಕೆ ಉಳಿಸಿದ್ದಾಳೆ. ಇಡೀ ಪ್ಲಾಟ್‌ಫಾರ್ಮ್ ಪ್ರಯಾಣಿಕರಿಂದ ತುಂಬಿತ್ತು, ರೈಲು ನಿಲ್ದಾಣಕ್ಕೆ ಬರುತ್ತಿತ್ತು. ಆಗ ಇದ್ದಕ್ಕಿದ್ದಂತೆ ಒಬ್ಬಳು ಮಹಿಳೆ ರೈಲು ಹಳಿಗಳ ಮೇಲೆ ಓಡಿಹೋದಳು. ಏನಾಯಿತೆಂದು ಎಲ್ಲರಿಗೂ ಅರ್ಥವಾಗುವಷ್ಟರಲ್ಲಿ ಆಕೆ ಕೆಳಗೆ ಹಾರಿ ಆಗಿತ್ತು. ಆದರೆ, ಕೂಡಲೆ ಆ ಮಹಿಳೆಯ 7 ವರ್ಷದ ಮಗಳು ಜೋರಾಗಿ ಕಿರುಚಿ ತನ್ನ ತಾಯಿಯ ಜೀವ ಉಳಿಸಿದ್ದಾಳೆ.

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು
Aligarh Mother And Daughter With Police
ಸುಷ್ಮಾ ಚಕ್ರೆ
|

Updated on:Mar 17, 2026 | 9:18 PM

Share

ನವದೆಹಲಿ, ಮಾರ್ಚ್ 17: ಅಲಿಘರ್ ರೈಲು ನಿಲ್ದಾಣದಲ್ಲಿ (Railway Station) ಯಾರೂ ಊಹಿಸದ ಘಟನೆಯೊಂದು ನಡೆದಿದೆ. ರೈಲು ಇನ್ನೇನು ಸ್ಟೇಷನ್​ಗೆ ತಲುಪಬೇಕು ಎನ್ನುವಷ್ಟರಲ್ಲಿ ತನ್ನ ಮಗಳ ಜೊತೆ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ರೈಲು ಹಳಿ ಮೇಲೆ ಹಾರಿದ್ದಳು. ಆತ್ಮಹತ್ಯೆಗೆ ಯತ್ನಿಸಿದ ಆಕೆಯ ಹಿಂದೆಯೇ ಓಡಿದ 7 ವರ್ಷದ ಮಗಳು ‘ಅಮ್ಮಾ ಬೇಡಮ್ಮಾ’ ಎನ್ನುತ್ತಾ ಕೂಗತೊಡಗಿದ್ದಾಳೆ. ಆಕೆಯ ಕಿರುಚಾಟ ಕೇಳಿದ ನಂತರ ಇತರ ಪ್ರಯಾಣಿಕರು ಮತ್ತು ಜಿಆರ್‌ಪಿ ಸಿಬ್ಬಂದಿ ಓಡಿ ಬಂದು ಆ ಮಹಿಳೆಯನ್ನು ಕಾಪಾಡಿದ್ದಾರೆ.

ಮನೆಯಲ್ಲಿನ ಕೌಟುಂಬಿಕ ಹಿಂಸಾಚಾರದಿಂದ ನೊಂದಿದ್ದ ಮಹಿಳೆ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಳು. ರೈಲು ಸಮೀಪಿಸುತ್ತಿರುವುದನ್ನು ನೋಡಿದ ಆಕೆ ಹಳಿಗಳ ಕಡೆಗೆ ಹೋದಳು. ಅಷ್ಟರಲ್ಲೇ ಅವರ 7 ವರ್ಷದ ಮಗಳು ಟ್ವಿಂಕಲ್ ಓಡಿ ಬಂದು ಆಕೆಯನ್ನು ಹಿಡಿದುಕೊಂಡಳು. ಆ ಬಾಲಕಿ ಜೋರಾಗಿ ಕೂಗುತ್ತಿದ್ದಳು “ಅಮ್ಮ, ಬೇಡಮ್ಮಾ, ಸಾಯೋದು ಬೇಡಮ್ಮ” ಎಂದು ಅಳುತ್ತಿದ್ದಳು. ಅಮ್ಮನನ್ನು ಹಳಿಯಿಂದ ಹಿಂದಕ್ಕೆ ಎಳೆಯಲು ಪ್ರಯತ್ನಿಸುತ್ತಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆಕೆಯ ಕೂಗು ಕೇಳಿ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಸ್ಥಳಕ್ಕೆ ಧಾವಿಸಿದರು. ಆ ಮಹಿಳೆಯನ್ನು ರಕ್ಷಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Tue, 17 March 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ