AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು

ಅಲಿಘರ್ ರೈಲ್ವೆ ನಿಲ್ದಾಣದಲ್ಲಿ 7 ವರ್ಷದ ಪುಟ್ಟ ಬಾಲಕಿ ತನ್ನ ತಾಯಿಯ ಪಾಲಿಗೆ ಜೀವದಾತೆಯಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ತನ್ನ ತಾಯಿಯ ಜೀವವನ್ನು ಆಕೆ ಉಳಿಸಿದ್ದಾಳೆ. ಇಡೀ ಪ್ಲಾಟ್‌ಫಾರ್ಮ್ ಪ್ರಯಾಣಿಕರಿಂದ ತುಂಬಿತ್ತು, ರೈಲು ನಿಲ್ದಾಣಕ್ಕೆ ಬರುತ್ತಿತ್ತು. ಆಗ ಇದ್ದಕ್ಕಿದ್ದಂತೆ ಒಬ್ಬಳು ಮಹಿಳೆ ರೈಲು ಹಳಿಗಳ ಮೇಲೆ ಓಡಿಹೋದಳು. ಏನಾಯಿತೆಂದು ಎಲ್ಲರಿಗೂ ಅರ್ಥವಾಗುವಷ್ಟರಲ್ಲಿ ಆಕೆ ಕೆಳಗೆ ಹಾರಿ ಆಗಿತ್ತು. ಆದರೆ, ಕೂಡಲೆ ಆ ಮಹಿಳೆಯ 7 ವರ್ಷದ ಮಗಳು ಜೋರಾಗಿ ಕಿರುಚಿ ತನ್ನ ತಾಯಿಯ ಜೀವ ಉಳಿಸಿದ್ದಾಳೆ.

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು
Aligarh Mother And Daughter With Police
ಸುಷ್ಮಾ ಚಕ್ರೆ
|

Updated on:Mar 17, 2026 | 9:18 PM

Share

ನವದೆಹಲಿ, ಮಾರ್ಚ್ 17: ಅಲಿಘರ್ ರೈಲು ನಿಲ್ದಾಣದಲ್ಲಿ (Railway Station) ಯಾರೂ ಊಹಿಸದ ಘಟನೆಯೊಂದು ನಡೆದಿದೆ. ರೈಲು ಇನ್ನೇನು ಸ್ಟೇಷನ್​ಗೆ ತಲುಪಬೇಕು ಎನ್ನುವಷ್ಟರಲ್ಲಿ ತನ್ನ ಮಗಳ ಜೊತೆ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ರೈಲು ಹಳಿ ಮೇಲೆ ಹಾರಿದ್ದಳು. ಆತ್ಮಹತ್ಯೆಗೆ ಯತ್ನಿಸಿದ ಆಕೆಯ ಹಿಂದೆಯೇ ಓಡಿದ 7 ವರ್ಷದ ಮಗಳು ‘ಅಮ್ಮಾ ಬೇಡಮ್ಮಾ’ ಎನ್ನುತ್ತಾ ಕೂಗತೊಡಗಿದ್ದಾಳೆ. ಆಕೆಯ ಕಿರುಚಾಟ ಕೇಳಿದ ನಂತರ ಇತರ ಪ್ರಯಾಣಿಕರು ಮತ್ತು ಜಿಆರ್‌ಪಿ ಸಿಬ್ಬಂದಿ ಓಡಿ ಬಂದು ಆ ಮಹಿಳೆಯನ್ನು ಕಾಪಾಡಿದ್ದಾರೆ.

ಮನೆಯಲ್ಲಿನ ಕೌಟುಂಬಿಕ ಹಿಂಸಾಚಾರದಿಂದ ನೊಂದಿದ್ದ ಮಹಿಳೆ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಳು. ರೈಲು ಸಮೀಪಿಸುತ್ತಿರುವುದನ್ನು ನೋಡಿದ ಆಕೆ ಹಳಿಗಳ ಕಡೆಗೆ ಹೋದಳು. ಅಷ್ಟರಲ್ಲೇ ಅವರ 7 ವರ್ಷದ ಮಗಳು ಟ್ವಿಂಕಲ್ ಓಡಿ ಬಂದು ಆಕೆಯನ್ನು ಹಿಡಿದುಕೊಂಡಳು. ಆ ಬಾಲಕಿ ಜೋರಾಗಿ ಕೂಗುತ್ತಿದ್ದಳು “ಅಮ್ಮ, ಬೇಡಮ್ಮಾ, ಸಾಯೋದು ಬೇಡಮ್ಮ” ಎಂದು ಅಳುತ್ತಿದ್ದಳು. ಅಮ್ಮನನ್ನು ಹಳಿಯಿಂದ ಹಿಂದಕ್ಕೆ ಎಳೆಯಲು ಪ್ರಯತ್ನಿಸುತ್ತಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆಕೆಯ ಕೂಗು ಕೇಳಿ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಸ್ಥಳಕ್ಕೆ ಧಾವಿಸಿದರು. ಆ ಮಹಿಳೆಯನ್ನು ರಕ್ಷಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Tue, 17 March 26

Follow Us
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​