AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ನಿರ್ಲಕ್ಷ್ಯದಿಂದ 7 ವರ್ಷದ ಬಾಲಕಿ 18 ಗಂಟೆಗಳ ಕಾಲ ತರಗತಿಯಲ್ಲಿ ಲಾಕ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಲೆಯೊಂದರಲ್ಲಿ 7 ವರ್ಷದ ಬಾಲಕಿಯೊಬ್ಬಳು ಸಿಬ್ಬಂದಿ ನಿರ್ಲಕ್ಷ್ಯದಿಂದ  18 ಗಂಟೆಗಳ ಕಾಲ ಶಾಲಾ ಕೊಠಡಿಯಲ್ಲಿ ಕಳೆದಿರುವ ಘಟನೆಯೊಂದು ನಡೆದಿದೆ. ಬಾಲಕಿಯೊಬ್ಬಳನೇ ಬೀಗ ಹಾಕಿ ಹೋಗಿದ್ದಾರೆ.

ಸಿಬ್ಬಂದಿ ನಿರ್ಲಕ್ಷ್ಯದಿಂದ 7 ವರ್ಷದ ಬಾಲಕಿ 18 ಗಂಟೆಗಳ ಕಾಲ ತರಗತಿಯಲ್ಲಿ ಲಾಕ್
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 22, 2022 | 5:13 PM

Share

ಉತ್ತರಪ್ರದೇಶ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಲೆಯೊಂದರಲ್ಲಿ 7 ವರ್ಷದ ಬಾಲಕಿಯೊಬ್ಬಳು ಸಿಬ್ಬಂದಿ ನಿರ್ಲಕ್ಷ್ಯದಿಂದ  18 ಗಂಟೆಗಳ ಕಾಲ ಶಾಲಾ ಕೊಠಡಿಯಲ್ಲಿ ಕಳೆದಿರುವ ಘಟನೆಯೊಂದು ನಡೆದಿದೆ. ಬಾಲಕಿಯೊಬ್ಬಳನೇ ಬೀಗ ಹಾಕಿ ಹೋಗಿದ್ದಾರೆ. ಶಾಲೆಯಲ್ಲಿ ಯಾರು ಇದ್ದಾರೆ, ಇಲ್ಲ ಎಂದು ನೋಡದೇ ಸಿಬ್ಬಂದಿಗಳು ಬಾಲಕಿಯನ್ನು ಬಿಟ್ಟು ಹೋಗಿದ್ದಾರೆ ತರಗತಿಯಲ್ಲಿ ಮಕ್ಕಳು ಎಲ್ಲರೂ ಹೋಗಿದರ ಎಂದು ಪರಿಶೀಲಸದೆ ಇರುವುದು ಶಾಲಾ ಸಿಬ್ಬಂದಿಗಳ ವೈಪಲ್ಯ ಎಂದು ಜನರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಬೆಳಗ್ಗೆ ಶಾಲೆ ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ.

ಗುನ್ನೌರ್ ತಾಹಸಿಲ್‌ನ ಧನರಿ ಪಟ್ಟಿಯಲ್ಲಿರುವ ಪ್ರಾಥಮಿಕ ಶಾಲೆಯ 1ನೇ ತರಗತಿ ವಿದ್ಯಾರ್ಥಿ ಮಂಗಳವಾರ ಶಾಲಾ ಅವಧಿಯ ನಂತರ ಶಾಲೆಯಲ್ಲಿಯೇ ಹಿಂದುಳಿದಿದ್ದಾನೆ ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಪೋಪ್ ಸಿಂಗ್ ತಿಳಿಸಿದ್ದಾರೆ. ಇಂದು ಬೆಳಗ್ಗೆ ಶಾಲೆ ತೆರೆದಾಗ ಈ ಬಾಲಕಿ ಶಾಲೆ ಒಳಗೆ ಇರುವುದು ಪತ್ತೆಯಾಗಿದೆ, ಬಾಲಕಿ ಆರೋಗ್ಯವಾಗಿದ್ದಾಳೆ ಎಂದು ಬಿಇಒ ತಿಳಿಸಿದರು.

ಮಂಗಳವಾರ ಶಾಲೆ ಮುಗಿಸಿ ಮನೆಗೆ ಬಾರದೆ ಇದ್ದಾಗ ಬಾಲಕಿಯ ಅಜ್ಜಿ ಶಾಲೆಗೆ ಬಂದಿದ್ದು, ಅಲ್ಲಿ ಮಕ್ಕಳಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾಗ ಆಕೆಯ ಚಿಕ್ಕಪ್ಪ ತಿಳಿಸಿದ್ದಾರೆ. ಮನೆಯವರು ಅರಣ್ಯ ಪ್ರದೇಶದಲ್ಲಿ ಹುಡುಕಾಡಿದರೂ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಬುಧವಾರ ಬೆಳಗ್ಗೆ 8 ಗಂಟೆಗೆ ಶಾಲೆ ತೆರೆದಾಗ ಬಾಲಕಿ ರಾತ್ರಿಯಿಡೀ ಶಾಲಾ ಕೊಠಡಿಯಲ್ಲಿ ಇರುವುದು ಬೆಳಕಿಗೆ ಬಂದಿದೆ.

ಶಾಲಾ ಅವಧಿ ಮುಗಿದರೂ ಶಿಕ್ಷಕರು ಹಾಗೂ ಇತರೆ ಸಿಬ್ಬಂದಿ ಕೊಠಡಿಗಳನ್ನು ಪರಿಶೀಲಿಸಿಲ್ಲ ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಸಿಂಗ್ ತಿಳಿಸಿದ್ದಾರೆ. ಇದು ನಿರ್ಲಕ್ಷ್ಯದ ಪ್ರಕರಣವಾಗಿದ್ದು, ಎಲ್ಲ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್