AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಣ್ಣೀರು ತರಲು ಚಿತಾಗಾರಕ್ಕೆ ಹೋದ 7 ವರ್ಷದ ಬಾಲಕಿ; ಮುಂದಾಗಿದ್ದೆಲ್ಲ ಊಹಿಸಲಾರದಷ್ಟು ಭೀಕರ

ಅಷ್ಟೇ ಅಲ್ಲ, ತಾಯಿ ಪೊಲೀಸ್​ ಕಂಟ್ರೋಲ್​ ರೂಂಗೆ ಫೋನ್ ಮಾಡುತ್ತೇನೆಂದು ಹೋದಾಗ ಆ ಚಿತಾಗಾರದ ವಿಧಿ-ವಿಧಾನಗಳನ್ನು ನೆರವೇರಿಸುವ ವ್ಯಕ್ತಿ ಆಕೆಯನ್ನು ತಡೆದಿದ್ದಾನೆ.

ತಣ್ಣೀರು ತರಲು ಚಿತಾಗಾರಕ್ಕೆ ಹೋದ 7 ವರ್ಷದ ಬಾಲಕಿ; ಮುಂದಾಗಿದ್ದೆಲ್ಲ ಊಹಿಸಲಾರದಷ್ಟು ಭೀಕರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 03, 2021 | 11:21 AM

Share

ನಿಗೂಢವಾಗಿ ಮೃತಪಟ್ಟ 7 ವರ್ಷದ ಬಾಲಕಿಯ ಅಂತ್ಯಸಂಸ್ಕಾರವನ್ನೂ ಅಷ್ಟೇ ಗುಟ್ಟಾಗಿ ಮಾಡಿ ಮುಗಿಸಿದ ವಿಚಿತ್ರ ಘಟನೆ ರಾಷ್ಟ್ರರಾಜಧಾನಿಯಲ್ಲಿ ನಡೆದಿದೆ. ಬಾಲಕಿಯ ಅಂತ್ಯಸಂಸ್ಕಾರವನ್ನು ಮಾಡಲು ಆಕೆಯ ಪಾಲಕರು ಒಪ್ಪದೆ ಇದ್ದರೂ, ಬಲವಂತವಾಗಿ ಮಾಡಲಾಗಿದೆ. ಇದೀಗ ಪಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಮಗಳ ಮೇಲೆ ಅತ್ಯಾಚಾರ ಮಾಡಿ, ಹತ್ಯೆ ಮಾಡಲಾಗಿದೆ. ನಂತರ ನಾವು ಪೋಸ್ಟ್​ಮಾರ್ಟಂಗೆ ಒತ್ತಾಯ ಮಾಡಿದರೂ, ಲೆಕ್ಕಕ್ಕೆ ತೆಗೆದುಕೊಳ್ಳದೆ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಅಷ್ಟಕ್ಕೂ ಅಂತ್ಯಸಂಸ್ಕಾರ ಮಾಡಿದ್ಯಾರು? ಬಾಲಕಿ ತನ್ನ ಪಾಲಕರೊಂದಿಗೆ ಓಲ್ಡ್ ನಂಗಲ್​ ಬಳಿಯ ಏರಿಯಾವೊಂದರಲ್ಲಿ ವಾಸವಾಗಿದ್ದಳು. ಅಲ್ಲೇ ಸಮೀಪ ಇರುವ ಚಿತಾಗಾರದಲ್ಲಿ ನೀರನ್ನು ತಂಪಾಗಿಡುವ ಕೂಲರ್​ ಇದೆ. ಈಕೆಗೆ ಅದೇನೋ ತಣ್ಣನೆಯ ನೀರು ಕುಡಿಯುವ ಆಸೆಯಾಯಿತು. ಸಂಜೆ ಸುಮಾರು 5.30ರಹೊತ್ತಿಗೆ ತನ್ನ ಅಮ್ಮನಿಗೆ ತಿಳಿಸಿ, ಹತ್ತಿರದ ಚಿತಾಗಾರಕ್ಕೆ ಹೋದಳು. ಆದರೆ ಆಕೆ ಅಲ್ಲಿಯೇ ಸಾವನ್ನಪ್ಪಿದ್ದಾಳೆ. ಎಷ್ಟೊತ್ತಾದರೂ ಬರಲಿಲ್ಲವಲ್ಲ ಎಂದು ತಾಯಿ ಸುಮಾರು 6ಗಂಟೆ ಹೊತ್ತಿಗೆ ಹುಡುಕಿಕೊಂಡು ಹೋದಾಗ ಸತ್ಯ ಗೊತ್ತಾಗಿದೆ. ಆ ಚಿತಾಗಾರ ಉಸ್ತುವಾರಿ, ಬಾಲಕಿಯ ಶವವನ್ನು ತಾಯಿಗೆ ತೋರಿಸಿದ್ದಾನೆ. ಇನ್ನು ಆಕೆ ನೀರು ತೆಗೆದುಕೊಳ್ಳಲು ಹೋದಾಗ ಶಾಕ್​ ಹೊಡೆದು ಮೃತಪಟ್ಟಿದ್ದಾಳೆ ಎಂದೂ ಹೇಳಿದ್ದಾನೆ. ಅದಕ್ಕೆ ಸರಿಯಾಗಿ ಬಾಲಕಿಯ ಎಡ ಮಣಿಕಟ್ಟು, ಮೊಣಕೈ ಮೇಲೆಲ್ಲ ಸುಟ್ಟಗಾಯದ ಗುರುತುಗಳೂ ಇವೆ. ಇನ್ನು ಬಾಲಕಿಯ ತುಟಿ ನೀಲಿಗಟ್ಟಿತ್ತು. ಈ ಬಗ್ಗೆ ತಾಯಿ ಪೊಲೀಸರ ಎದುರು ವಿವರಿಸಿದ್ದಾರೆ.

ಅಷ್ಟೇ ಅಲ್ಲ, ತಾಯಿ ಪೊಲೀಸ್​ ಕಂಟ್ರೋಲ್​ ರೂಂಗೆ ಫೋನ್ ಮಾಡುತ್ತೇನೆಂದು ಹೋದಾಗ ಆ ಚಿತಾಗಾರದ ವಿಧಿ-ವಿಧಾನಗಳನ್ನು ನೆರವೇರಿಸುವ ವ್ಯಕ್ತಿ ಆಕೆಯನ್ನು ತಡೆದಿದ್ದಾನೆ. ಪೊಲೀಸರಿಗೆ ಕರೆ ಮಾಡಿದರೆ ಅವರು ಪೋಸ್ಟ್ ಮಾರ್ಟಮ್​ ಮಾಡುತ್ತಾರೆ. ಆಗ ಅಂಗಾಂಗಗಳನ್ನು ಕದಿಯುತ್ತಾರೆ ಎಂದೆಲ್ಲ ಹೇಳಿ, ತನ್ನ ಸಹಚರರೊಂದಿಗೆ ಸೇರಿ ಬಲವಂತವಾಗಿ ಬಾಲಕಿಯ ಶವಸಂಸ್ಕಾರ ಮಾಡಿದ್ದಾನೆ. ಆದರೆ ನಂತರ ಬಾಲಕಿಯ ತಂದೆ-ತಾಯಿ ಪೊಲೀಸರಿಗೆ ಎಲ್ಲವನ್ನೂ ವಿವರಿಸಿದ್ದಾರೆ. ತಮ್ಮ ಮಗಳ ಮೇಲೆ ರೇಪ್​ ಮಾಡಿ, ಹತ್ಯೆ ಮಾಡಲಾಗಿದೆ ಎಂದು ಅವರು ಆರೋಪ ಮಾಡಿದ ಹಿನ್ನೆಲೆಯಲ್ಲಿ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಚಿತಾಗಾರ ಸುತ್ತಲಿನ ಹಳ್ಳಿಗಳ ಸುಮಾರು 200 ಜನರು ಪ್ರತಿಭಟನೆ ನಡೆಸುತ್ತಿದ್ದು, ಬಾಲಕಿಯ ಸಾವಿಗೆ ನ್ಯಾಯ ಒದಗಿಸಿ ಎಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: Ola Electric Scooter: ಸ್ವಾತಂತ್ರ್ಯ ದಿನಕ್ಕೆ ಮುನ್ನ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ; ಕಂಪೆನಿ ಸಿಇಒ ಹೇಳಿದ್ದೇನು?

ವಾಟ್ಸಪ್ ಸ್ಟೇಟಸ್​ಗೆ ಅಶ್ಲೀಲ ವಿಡಿಯೋ ಹಾಕಿಕೊಂಡಿದ್ದ ಯುವಕ ಅರೆಸ್ಟ್, ಹಿಂದು ಸಂಘಟನೆ ಕಾರ್ಯಕರ್ತರಿಂದ ಪ್ರಾರ್ಥನಾ ಮಂದಿರಕ್ಕೆ ಮುತ್ತಿಗೆ

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?