AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಫ್ಲಾಟ್​ ಒಂದರಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಅಂಟಿಸಿ ಚಿನ್ನಾಭರಣ ಲೂಟಿ, ವೃದ್ಧೆ ಸ್ಥಳದಲ್ಲೇ ಸಾವು

ಕಳ್ಳರು ಮುಂಬೈನ ಫ್ಲಾಟ್​ ಒಂದಕ್ಕೆ ನುಗ್ಗಿ, ಚಿನ್ನಾಭರಣ ಲೂಟಿ ಮಾಡಿ, ಕೊನೆಗೆ ವೃದ್ಧ ದಂಪತಿಯ ಕೈಕಾಲು ಕಟ್ಟಿ ಬಾಯಿಗೆ ಟೇಪ್​ ಅಂಟಿಸಿದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಕ್ಷಿಣ ಮುಂಬೈನ ಟಾರ್ಡಿಯೊದಲ್ಲಿರುವ ಫ್ಲಾಟ್​, ಯೂಸುಫ್ ಮಂಜಿಲ್ ಕಟ್ಟಡದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಂಪತಿ ಬೆಳಗ್ಗೆ 6 ಗಂಟೆಯ ಸುಮಾರಿಗೆ ತಮ್ಮ ಫ್ಲಾಟ್‌ನಿಂದ ಬೆಳಗಿನ ವಾಕಿಂಗ್‌ಗೆ ಕಾಲಿಟ್ಟಾಗ, ಮೂವರು ದರೋಡೆಕೋರರು ಒಳಗೆ ನುಗ್ಗಿದ್ದಾರೆ.

ಮುಂಬೈನ ಫ್ಲಾಟ್​ ಒಂದರಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಅಂಟಿಸಿ  ಚಿನ್ನಾಭರಣ ಲೂಟಿ, ವೃದ್ಧೆ ಸ್ಥಳದಲ್ಲೇ ಸಾವು
ಪೊಲೀಸ್
ನಯನಾ ರಾಜೀವ್
|

Updated on: Aug 14, 2023 | 8:32 AM

Share

ಕಳ್ಳರು ಮುಂಬೈನ ಫ್ಲಾಟ್​ ಒಂದಕ್ಕೆ ನುಗ್ಗಿ, ಚಿನ್ನಾಭರಣ ಲೂಟಿ ಮಾಡಿ, ಕೊನೆಗೆ ವೃದ್ಧ ದಂಪತಿಯ ಕೈಕಾಲು ಕಟ್ಟಿ ಬಾಯಿಗೆ ಟೇಪ್​ ಅಂಟಿಸಿದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಕ್ಷಿಣ ಮುಂಬೈನ ಟಾರ್ಡಿಯೊದಲ್ಲಿರುವ ಫ್ಲಾಟ್​, ಯೂಸುಫ್ ಮಂಜಿಲ್ ಕಟ್ಟಡದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಂಪತಿ ಬೆಳಗ್ಗೆ 6 ಗಂಟೆಯ ಸುಮಾರಿಗೆ ತಮ್ಮ ಫ್ಲಾಟ್‌ನಿಂದ ಬೆಳಗಿನ ವಾಕಿಂಗ್‌ಗೆ ಕಾಲಿಟ್ಟಾಗ, ಮೂವರು ದರೋಡೆಕೋರರು ಒಳಗೆ ನುಗ್ಗಿದ್ದಾರೆ.

ಬಾಯಿಗೆ  ಟೇಪ್ ಹಾಕಿ, ಚಿನ್ನಾಭರಣ ದೋಚಿದ್ದಾರೆ, ಇಬ್ಬರ ಬಾಯಿಗೂ ಟೇಪ್ ಅಂಟಿಸಿ, ಕೈಕಾಲುಗಳನ್ನು ಕಟ್ಟಲಾಗಿತ್ತು, ಚಿನ್ನಾಭರಣ, ವಾಚ್, ನಗದು ಸೇರಿದಂತೆ ಎಲ್ಲವನ್ನೂ ಹೊತ್ತೊಯ್ದಿದ್ದರು. ಆರೋಪಿಗಳು ಸ್ಥಳದಿಂದ ಓಡಿ ಹೋದ ಬಳಿಕ ವೃದ್ಧ ಪತಿ ಹೇಗೋ ಬಾಗಿಲು ಬಳಿ ಹೋಗಿ ಎಮರ್ಜೆನ್ಸಿ ಅಲಾರಂ ಒತ್ತಿದ್ದಾರೆ.

ಹೌಸಿಂಗ್ ಸೊಸೈಟಿಯ ಯಾರೋ ಒಬ್ಬರು ಅವರ ಸಹಾಯಕ್ಕೆ ಧಾವಿಸಿದರು. ಆದರೆ, ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಮತ್ತಷ್ಟು ಓದಿ:ಆನೇಕಲ್: ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್‌ಗಳ ಅಡಿಯಲ್ಲಿ 302 (ಕೊಲೆ), 394 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು ಇತರವುಗಳನ್ನು ಒಳಗೊಂಡಂತೆ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್