AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಫ್ಲಾಟ್​ ಒಂದರಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಅಂಟಿಸಿ ಚಿನ್ನಾಭರಣ ಲೂಟಿ, ವೃದ್ಧೆ ಸ್ಥಳದಲ್ಲೇ ಸಾವು

ಕಳ್ಳರು ಮುಂಬೈನ ಫ್ಲಾಟ್​ ಒಂದಕ್ಕೆ ನುಗ್ಗಿ, ಚಿನ್ನಾಭರಣ ಲೂಟಿ ಮಾಡಿ, ಕೊನೆಗೆ ವೃದ್ಧ ದಂಪತಿಯ ಕೈಕಾಲು ಕಟ್ಟಿ ಬಾಯಿಗೆ ಟೇಪ್​ ಅಂಟಿಸಿದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಕ್ಷಿಣ ಮುಂಬೈನ ಟಾರ್ಡಿಯೊದಲ್ಲಿರುವ ಫ್ಲಾಟ್​, ಯೂಸುಫ್ ಮಂಜಿಲ್ ಕಟ್ಟಡದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಂಪತಿ ಬೆಳಗ್ಗೆ 6 ಗಂಟೆಯ ಸುಮಾರಿಗೆ ತಮ್ಮ ಫ್ಲಾಟ್‌ನಿಂದ ಬೆಳಗಿನ ವಾಕಿಂಗ್‌ಗೆ ಕಾಲಿಟ್ಟಾಗ, ಮೂವರು ದರೋಡೆಕೋರರು ಒಳಗೆ ನುಗ್ಗಿದ್ದಾರೆ.

ಮುಂಬೈನ ಫ್ಲಾಟ್​ ಒಂದರಲ್ಲಿ ವೃದ್ಧ ದಂಪತಿಯ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಅಂಟಿಸಿ  ಚಿನ್ನಾಭರಣ ಲೂಟಿ, ವೃದ್ಧೆ ಸ್ಥಳದಲ್ಲೇ ಸಾವು
ಪೊಲೀಸ್
Follow us
ನಯನಾ ರಾಜೀವ್
|

Updated on: Aug 14, 2023 | 8:32 AM

ಕಳ್ಳರು ಮುಂಬೈನ ಫ್ಲಾಟ್​ ಒಂದಕ್ಕೆ ನುಗ್ಗಿ, ಚಿನ್ನಾಭರಣ ಲೂಟಿ ಮಾಡಿ, ಕೊನೆಗೆ ವೃದ್ಧ ದಂಪತಿಯ ಕೈಕಾಲು ಕಟ್ಟಿ ಬಾಯಿಗೆ ಟೇಪ್​ ಅಂಟಿಸಿದ ಪರಿಣಾಮ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಕ್ಷಿಣ ಮುಂಬೈನ ಟಾರ್ಡಿಯೊದಲ್ಲಿರುವ ಫ್ಲಾಟ್​, ಯೂಸುಫ್ ಮಂಜಿಲ್ ಕಟ್ಟಡದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಂಪತಿ ಬೆಳಗ್ಗೆ 6 ಗಂಟೆಯ ಸುಮಾರಿಗೆ ತಮ್ಮ ಫ್ಲಾಟ್‌ನಿಂದ ಬೆಳಗಿನ ವಾಕಿಂಗ್‌ಗೆ ಕಾಲಿಟ್ಟಾಗ, ಮೂವರು ದರೋಡೆಕೋರರು ಒಳಗೆ ನುಗ್ಗಿದ್ದಾರೆ.

ಬಾಯಿಗೆ  ಟೇಪ್ ಹಾಕಿ, ಚಿನ್ನಾಭರಣ ದೋಚಿದ್ದಾರೆ, ಇಬ್ಬರ ಬಾಯಿಗೂ ಟೇಪ್ ಅಂಟಿಸಿ, ಕೈಕಾಲುಗಳನ್ನು ಕಟ್ಟಲಾಗಿತ್ತು, ಚಿನ್ನಾಭರಣ, ವಾಚ್, ನಗದು ಸೇರಿದಂತೆ ಎಲ್ಲವನ್ನೂ ಹೊತ್ತೊಯ್ದಿದ್ದರು. ಆರೋಪಿಗಳು ಸ್ಥಳದಿಂದ ಓಡಿ ಹೋದ ಬಳಿಕ ವೃದ್ಧ ಪತಿ ಹೇಗೋ ಬಾಗಿಲು ಬಳಿ ಹೋಗಿ ಎಮರ್ಜೆನ್ಸಿ ಅಲಾರಂ ಒತ್ತಿದ್ದಾರೆ.

ಹೌಸಿಂಗ್ ಸೊಸೈಟಿಯ ಯಾರೋ ಒಬ್ಬರು ಅವರ ಸಹಾಯಕ್ಕೆ ಧಾವಿಸಿದರು. ಆದರೆ, ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಮತ್ತಷ್ಟು ಓದಿ:ಆನೇಕಲ್: ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್‌ಗಳ ಅಡಿಯಲ್ಲಿ 302 (ಕೊಲೆ), 394 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು ಇತರವುಗಳನ್ನು ಒಳಗೊಂಡಂತೆ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ