AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ 7,000 ವಿಶೇಷ ರೈಲು, ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ದೇಶದ ರೈಲು ಪ್ರಯಾಣಿಕರಿಗೆ ದೀಪಾವಳಿಗೆ ವಿಶೇಷ ರೈಲು ವ್ಯವಸ್ಥೆಯನ್ನು ಮಾಡಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಮೂಲಕ ದೇಶದ ರೈಲು ಪ್ರಯಾಣಿಕರಿಗೆ ಬಂಪರ್​​​ ಕೊಡುಗೆ ನೀಡಿದ್ದಾರೆ.

ದೀಪಾವಳಿಗೆ 7,000 ವಿಶೇಷ ರೈಲು, ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ
ರೈಲ್ವೆ (ಸಾಂದರ್ಭಿಕ ಚಿತ್ರ)
Follow us
ಅಕ್ಷಯ್​ ಪಲ್ಲಮಜಲು​​
|

Updated on: Oct 25, 2024 | 12:23 PM

ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಬಂಪರ್​​​​​ ದೀಪಾವಳಿ ಆಫರ್​​ ನೀಡಿದೆ. ಪ್ರತಿದಿನ ಎರಡು ಲಕ್ಷ ಹೆಚ್ಚುವರಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೇ ಈ ವರ್ಷ ದೀಪಾವಳಿ ಮತ್ತು ಛತ್ ಪೂಜೆಗೆ 7,000 ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ರೈಲ್ವೇ ಅಧಿಕಾರಿಗಳ ಪ್ರಕಾರ, ಕಳೆದ ವರ್ಷ ದೀಪಾವಳಿ ಮತ್ತು ಛಾತ್ ಪೂಜೆ ಸಂದರ್ಭದಲ್ಲಿ 4,500 ವಿಶೇಷ ರೈಲುಗಳನ್ನು ಓಡಿಸಲಾಗಿತ್ತು. ಈ ಬಾರಿಯೂ ಪ್ರಯಾಣಿಕರು ಹೆಚ್ಚಾಗುವ ನಿಟ್ಟಿನಲ್ಲಿ 7 ಸಾವಿರ ರೈಲುಗಳನ್ನು ಓಡಿಸಲು ಮುಂದಾಗಿದೆ.

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರು ಹೆಚ್ಚು ರೈಲಿನಲ್ಲಿ ಓಡಾಡುತ್ತಾರೆ. ಈಗಾಗಲೇ ಉತ್ತರ ರೈಲ್ವೆ (NR) ಗಣನೀಯ ಸಂಖ್ಯೆಯ ರೈಲುಗಳನ್ನು ನಿರ್ವಹಿಸುತ್ತದೆ. ಉತ್ತರ ರೈಲ್ವೆ ಇಲಾಖೆಯ ಇತ್ತೀಚಿನ ಪತ್ರಿಕಾ ಹೇಳಿಕೆ ಪ್ರಕಾರ, ಜನರು ತಮ್ಮ ಗಮ್ಯಸ್ಥಾನಗಳನ್ನು ತಲುಪಲು ಸಹಾಯ ಮಾಡಲು ಸುಮಾರು 3,050 ವಿಶೇಷ ರೈಲುಗಳ ಉಪಯೋಗವನ್ನು ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

2023ರಲ್ಲಿ, ಭಾರತೀಯ ರೈಲ್ವೇ ವಿಶೇಷ ರೈಲು ಉತ್ಸವವನ್ನು ನಡೆಸಿತ್ತು. ಈ ಬಾರಿ ಇದಕ್ಕೆ ಅನುಗುಣವಾಗಿ ಉತ್ತರ ರೈಲ್ವೆ 1,082 ವಿಶೇಷ ರೈಲು ಓಡಿಸುವ ಮೂಲಕ ದೇಶದಲ್ಲಿ ಒಟ್ಟು 3,050 ರೈಲ್ವೆಗಳು ಓಡಾಟ ನಡೆಸಿದೆ. ಇದೀಗ ಇದು ಇದು ಶೇಕಡಾ 181 ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ದೀಪಾವಳಿ ಸ್ಪೆಷಲ್, ಕರ್ನಾಟಕದ ಹಲವು ನಿಲ್ದಾಣಗಳಿಗೆ ವಿಶೇಷ ರೈಲು; ಇಲ್ಲಿದೆ ವಿವರ

ವಿಶೇಷ ರೈಲುಗಳ ಹೊರತಾಗಿ, ಪ್ರಯಾಣಕ್ಕಾಗಿ ಹೆಚ್ಚಿನ ಸಾಮರ್ಥ್ಯವನ್ನು ಹೊಂದಲು ರೈಲುಗಳಲ್ಲಿ ಹೆಚ್ಚುವರಿ ಕೋಚ್‌ಗಳನ್ನು ಹೆಚ್ಚಿಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ