AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ 7,000 ವಿಶೇಷ ರೈಲು, ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ದೇಶದ ರೈಲು ಪ್ರಯಾಣಿಕರಿಗೆ ದೀಪಾವಳಿಗೆ ವಿಶೇಷ ರೈಲು ವ್ಯವಸ್ಥೆಯನ್ನು ಮಾಡಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಮೂಲಕ ದೇಶದ ರೈಲು ಪ್ರಯಾಣಿಕರಿಗೆ ಬಂಪರ್​​​ ಕೊಡುಗೆ ನೀಡಿದ್ದಾರೆ.

ದೀಪಾವಳಿಗೆ 7,000 ವಿಶೇಷ ರೈಲು, ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ
ರೈಲ್ವೆ (ಸಾಂದರ್ಭಿಕ ಚಿತ್ರ)
ಅಕ್ಷಯ್​ ಪಲ್ಲಮಜಲು​​
|

Updated on: Oct 25, 2024 | 12:23 PM

Share

ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಬಂಪರ್​​​​​ ದೀಪಾವಳಿ ಆಫರ್​​ ನೀಡಿದೆ. ಪ್ರತಿದಿನ ಎರಡು ಲಕ್ಷ ಹೆಚ್ಚುವರಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೇ ಈ ವರ್ಷ ದೀಪಾವಳಿ ಮತ್ತು ಛತ್ ಪೂಜೆಗೆ 7,000 ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ರೈಲ್ವೇ ಅಧಿಕಾರಿಗಳ ಪ್ರಕಾರ, ಕಳೆದ ವರ್ಷ ದೀಪಾವಳಿ ಮತ್ತು ಛಾತ್ ಪೂಜೆ ಸಂದರ್ಭದಲ್ಲಿ 4,500 ವಿಶೇಷ ರೈಲುಗಳನ್ನು ಓಡಿಸಲಾಗಿತ್ತು. ಈ ಬಾರಿಯೂ ಪ್ರಯಾಣಿಕರು ಹೆಚ್ಚಾಗುವ ನಿಟ್ಟಿನಲ್ಲಿ 7 ಸಾವಿರ ರೈಲುಗಳನ್ನು ಓಡಿಸಲು ಮುಂದಾಗಿದೆ.

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರು ಹೆಚ್ಚು ರೈಲಿನಲ್ಲಿ ಓಡಾಡುತ್ತಾರೆ. ಈಗಾಗಲೇ ಉತ್ತರ ರೈಲ್ವೆ (NR) ಗಣನೀಯ ಸಂಖ್ಯೆಯ ರೈಲುಗಳನ್ನು ನಿರ್ವಹಿಸುತ್ತದೆ. ಉತ್ತರ ರೈಲ್ವೆ ಇಲಾಖೆಯ ಇತ್ತೀಚಿನ ಪತ್ರಿಕಾ ಹೇಳಿಕೆ ಪ್ರಕಾರ, ಜನರು ತಮ್ಮ ಗಮ್ಯಸ್ಥಾನಗಳನ್ನು ತಲುಪಲು ಸಹಾಯ ಮಾಡಲು ಸುಮಾರು 3,050 ವಿಶೇಷ ರೈಲುಗಳ ಉಪಯೋಗವನ್ನು ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

2023ರಲ್ಲಿ, ಭಾರತೀಯ ರೈಲ್ವೇ ವಿಶೇಷ ರೈಲು ಉತ್ಸವವನ್ನು ನಡೆಸಿತ್ತು. ಈ ಬಾರಿ ಇದಕ್ಕೆ ಅನುಗುಣವಾಗಿ ಉತ್ತರ ರೈಲ್ವೆ 1,082 ವಿಶೇಷ ರೈಲು ಓಡಿಸುವ ಮೂಲಕ ದೇಶದಲ್ಲಿ ಒಟ್ಟು 3,050 ರೈಲ್ವೆಗಳು ಓಡಾಟ ನಡೆಸಿದೆ. ಇದೀಗ ಇದು ಇದು ಶೇಕಡಾ 181 ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ದೀಪಾವಳಿ ಸ್ಪೆಷಲ್, ಕರ್ನಾಟಕದ ಹಲವು ನಿಲ್ದಾಣಗಳಿಗೆ ವಿಶೇಷ ರೈಲು; ಇಲ್ಲಿದೆ ವಿವರ

ವಿಶೇಷ ರೈಲುಗಳ ಹೊರತಾಗಿ, ಪ್ರಯಾಣಕ್ಕಾಗಿ ಹೆಚ್ಚಿನ ಸಾಮರ್ಥ್ಯವನ್ನು ಹೊಂದಲು ರೈಲುಗಳಲ್ಲಿ ಹೆಚ್ಚುವರಿ ಕೋಚ್‌ಗಳನ್ನು ಹೆಚ್ಚಿಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ