AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ದೆಹಲಿಗೂ ಹೋಗಬಲ್ಲೆ: ಕಂಗನಾ ಲೇವಡಿಗೆ 73ರ ಹರೆಯದ ಹೋರಾಟಗಾರ್ತಿಯ ತಿರುಗೇಟು

'₹100 ಕೊಟ್ಟರೆ ಇವರು ಪ್ರತಿಭಟನೆಗೆ ಬರ್ತಾರೆ ಎಂದು ನಟಿಯೊಬ್ಬರು ನನ್ನ ಬಗ್ಗೆ ಬರೆದಿದದ್ದರಂತೆ. ಆಕೆ ನನ್ನ ಮನೆಗೆ ಬಂದು ನೋಡಿಲ್ಲ. ನಾನು ಏನು ಮಾಡುತ್ತಿದ್ದೇನೆ ಎಂಬುದು ಆಕೆಗೆ ಗೊತ್ತಿಲ್ಲ’.

ನಾನು ದೆಹಲಿಗೂ ಹೋಗಬಲ್ಲೆ: ಕಂಗನಾ ಲೇವಡಿಗೆ 73ರ ಹರೆಯದ ಹೋರಾಟಗಾರ್ತಿಯ ತಿರುಗೇಟು
ನಟಿ ಕಂಗನಾ ರನೌತ್ ಮತ್ತು ರೈತ ಮಹಿಳೆ ಮೊಹಿಂದರ್ ಕೌರ್
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 02, 2020 | 12:08 PM

Share

ಲುಧಿಯಾನ: ‘ಶಾಹೀನ್‌ಬಾಗ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಜ್ಜಿ ಈಗ ರೈತರ ಪ್ರತಿಭಟನೆಯಲ್ಲಿಯೂ ಇದ್ದಾರೆ. ₹100 ಕೊಟ್ಟರೆ ಇವರು ಪ್ರತಿಭಟನೆಗೆ ಬರುತ್ತಾರೆ’

– ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಅಜ್ಜಿಯೊಬ್ಬರ ಫೋಟೊ ಶೇರ್ ಮಾಡಿ ನಟಿ ಕಂಗನಾ ರನೌತ್ ಈ ರೀತಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್‌ನಲ್ಲಿ ಹೇಳಿರುವುದು ಸುಳ್ಳು ಎಂದು ನೆಟ್ಟಿಗರು ತರಾಟೆ ತೆಗೆದುಕೊಂಡ ನಂತರ ಕಂಗನಾ ಆ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಅಂದಹಾಗೆ ಕಂಗನಾ ಅವರ ಟ್ವೀಟ್ ಮೂಲಕ ಸುದ್ದಿಯಾದ ಆ ಹಿರಿಯ ಮಹಿಳೆಯ ಹೆಸರು ಮೊಹಿಂದರ್ ಕೌರ್. ವಯಸ್ಸು 73. ಬಟಿಂಡಾದ ಬಹಾದವುರ್‌ಗಡ್ ಜಾಂದಿಯನ್ ಗ್ರಾಮದ ನಿವಾಸಿ ಮೊಹಿಂದರ್ ಕೌರ್ ಅವರಿಗೆ 13 ಎಕರೆ ಜಮೀನು ಇದೆ. ಪತಿ ಅಸ್ತಮಾ ರೋಗ ಪೀಡಿತರಾದ ನಂತರ ಆ ಜಮೀನಿನ ಜವಾಬ್ದಾರಿ ವಹಿಸಿರುವವರು ಮೊಹಿಂದರ್.

‘₹100 ಕೊಟ್ಟರೆ ಇವರು ಪ್ರತಿಭಟನೆಗೆ ಬರ್ತಾರೆ ಎಂದು ನಟಿಯೊಬ್ಬರು ನನ್ನ ಬಗ್ಗೆ ಬರೆದಿದದ್ದರಂತೆ. ಆಕೆ ನನ್ನ ಮನೆಗೆ ಬಂದು ನೋಡಿಲ್ಲ. ನಾನು ಏನು ಮಾಡುತ್ತಿದ್ದೇನೆ ಎಂಬುದು ಆಕೆಗೆ ಗೊತ್ತಿಲ್ಲ. ಆದರೆ ನಾನು ₹100 ಲಭ್ಯ ಎಂದು ಆಕೆ ಹೇಳುತ್ತಿದ್ದಾಳೆ. ನನಗೆ ಮೂವರು ಹೆಣ್ಣು ಮಕ್ಕಳು. ಮೂವರಿಗೂ ಮದುವೆಯಾಗಿದೆ. ನನ್ನ ಮಗ, ಸೊಸೆ ಮತ್ತು ಅವರ ಮಕ್ಕಳು ನನ್ನ ಜತೆ ವಾಸಿಸುತ್ತಿದ್ದಾರೆ. ನಾನು ಬತ್ತ ಬೆಳೆಯುತ್ತೇನೆ. ಈಗಲೂ ಹತ್ತಿಗಿಡದಿಂದ ಹತ್ತಿ ಕೊಯ್ಯುತ್ತೇನೆ. ನಮ್ಮ ಕುಟುಂಬಕ್ಕೆ ಅಗತ್ಯವಿರುವ ತರಕಾರಿಗಳನ್ನು ನಾವೆೇ ಬೆಳೆಸುತ್ತೇವೆ. ಈಗ ಕೃಷಿ ಮಾಡುವುದು ತುಂಬಾ ಕಷ್ಟ. ಹಾಗಾಗಿಯೇ ನಾನು ರೈತರ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿರುವುದು. ನಾನೂ ರೈತ ಮಹಿಳೆ. ಪೆಟ್ರೋಲ್ ಬಂಕ್‌ಗಳ ಮುಂದೆಯೂ ನಾವು ಧರಣಿ ಸತ್ಯಾಗ್ರಹ ಮಾಡುತ್ತೇವೆ’ ಅಂತಾರೆ ಈ ಅಜ್ಜಿ.

ಢಬ್‌ವಲಿ ಗಡಿಭಾಗದಲ್ಲಿ ನಡೆದ ಧರಣಿ ಸತ್ಯಾಗ್ರಹದಲ್ಲಿಯೂ ಭಾಗಿಯಾಗಲು ಮೊಹಿಂದರ್ ಬಂದಿದ್ದರು. ಆದರೆ ಮೆರವಣಿಗೆ ನಡೆಸಬೇಕಾಗಿ ಬಂದಿದ್ದರಿಂದ ಆಕೆಯನ್ನು ವಾಪಸ್ ಕಳುಹಿಸಿದೆವು. ನಾನು ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ ಎಂದು ಆಕೆ ಹಟ ಹಿಡಿದಿದ್ದರು ಎಂದು ಭಾರತೀಯ ಕಿಸಾನ್ ಸಂಘಟನೆಯ ಬ್ಲಾಕ್ ಅಧ್ಯಕ್ಷ ಧರಂಪಾಲ್ ಹೇಳುತ್ತಾರೆ.

ಈಗಲೂ ನಾನು ದೆಹಲಿಗೆ ಹೋಗಬಲ್ಲೆ, ನನ್ನಲ್ಲಿ ಆ ಹುರುಪು ಇದೆ. ರೈತರ ಹೋರಾಟಗಳಲ್ಲಿ ಭಾಗವಹಿಸಲು ನಾನು ಉತ್ಸುಕಳಾಗಿದ್ದೇನೆ ಅಂತಾರೆ ಮೊಹಿಂದರ್ ಕೌರ್.

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ