AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Piped Natural Gas ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಶೇ.75ರಷ್ಟು ಕುಟುಂಬಗಳಿಗೆ ಪೈಪ್ ಮೂಲಕ ಗ್ಯಾಸ್ ಪೂರೈಕೆ: ನರೇಂದ್ರ ಮೋದಿ

ಪಾಣಿಪತ್‌ನ ಜೈವಿಕ ಇಂಧನ ಸ್ಥಾವರವು ಉರಿಯದೆ ಹೂಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ, ಭೂಮಿ ತಾಯಿಯು ಕೃಷಿ ತ್ಯಾಜ್ಯ ಸುಡುವುದರಿಂದ ಅನುಭವಿಸಿದ ನೋವನ್ನು ಇದು ನಿವಾರಿಸುತ್ತದೆ.

Piped Natural Gas ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಶೇ.75ರಷ್ಟು ಕುಟುಂಬಗಳಿಗೆ ಪೈಪ್ ಮೂಲಕ ಗ್ಯಾಸ್ ಪೂರೈಕೆ: ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 10, 2022 | 9:59 PM

Share

ಪಾಣಿಪತ್ ರಿಫೈನರಿಯಲ್ಲಿ ಇಂಡಿಯನ್ ಆಯಿಲ್ 2ಜಿ ಎಥೆನಾಲ್ ಘಟಕವನ್ನು(Indian Oil 2G ethanol plant) ಬುಧವಾರ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಶೇ.75ರಷ್ಟು ಕುಟುಂಬಗಳಿಗೆ ಪೈಪ್ ಮೂಲಕ ಗ್ಯಾಸ್ ಪೂರೈಕೆಯಾಗಲಿದೆ ಎಂದು ಹೇಳಿದ್ದಾರೆ. ಇಂಡಿಯನ್ ಆಯಿಲ್ 2ಜಿ ಎಥೆನಾಲ್ ಸ್ಥಾವರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಕೃಷಿ ತ್ಯಾಜ್ಯಗಳ ಸಾಗಣೆಗೆ ಸೌಲಭ್ಯಗಳನ್ನು ಮಾಡಲಾಗುತ್ತಿದೆ, ಹೊಸ ಜೈವಿಕ ಇಂಧನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಇದು ಉದ್ಯೋಗವನ್ನು ನೀಡುತ್ತದೆ ಮತ್ತು ಹೊಸ ಅವಕಾಶಗಳನ್ನು ಹುಟ್ಟುಹಾಕುತ್ತದೆ” ಎಂದಿದ್ದಾರೆ. ಇದರಿಂದ ಗ್ರಾಮಸ್ಥರು ಮತ್ತು ರೈತರಿಗೆ ಅನುಕೂಲವಾಗಲಿದೆ. ಇದು ದೇಶದಲ್ಲಿ ಮಾಲಿನ್ಯದ ಸವಾಲುಗಳನ್ನು ಕಡಿಮೆ ಮಾಡುತ್ತದೆ. ಪ್ರಕೃತಿಯನ್ನು ರಕ್ಷಿಸಲು ಜೈವಿಕ ಇಂಧನ ಮಹತ್ವದ್ದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಕೃತಿಯನ್ನು ಆರಾಧಿಸುವ ನಮ್ಮ ದೇಶದಲ್ಲಿ, ಪ್ರಕೃತಿಯನ್ನು ರಕ್ಷಿಸಲು ಜೈವಿಕ ಇಂಧನವು ಮಹತ್ವದ್ದಾಗಿದೆ. ನಮ್ಮ ರೈತರು ಇದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. ನಮಗೆ ಜೈವಿಕ ಇಂಧನ ಎಂದರೆ ಪರಿಸರವನ್ನು ಉಳಿಸುವ ಹಸಿರು ಇಂಧನ ಎಂದು ಪ್ರಧಾನಿ ಹೇಳಿದರು.

ಪಾಣಿಪತ್‌ನ ಜೈವಿಕ ಇಂಧನ ಸ್ಥಾವರವು ಉರಿಯದೆ ಹೂಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ, ಭೂಮಿ ತಾಯಿಯು ಕೃಷಿ ತ್ಯಾಜ್ಯ ಸುಡುವುದರಿಂದ ಅನುಭವಿಸಿದ ನೋವನ್ನು ಇದು ನಿವಾರಿಸುತ್ತದೆ. ಕೃಷಿ ತ್ಯಾಜ್ಯ ರೈತರಿಗೆ ಹೊರೆಯಾಗಿತ್ತು, ಇದು ತೊಂದರೆಗೆ ಕಾರಣವಾಯಿತು. ಆದರೆ ಇದು ಅವರಿಗೆ ಹೆಚ್ಚುವರಿ ಆದಾಯದ ಸಾಧನವಾಗಲಿ ಎಂದು ಹೇಳಿದರು.

2014 ರ ವೇಳೆಗೆ ಭಾರತವು ಶೇಕಡಾ 1.4 ರಷ್ಟು ಎಥೆನಾಲ್ ಮಿಶ್ರಣವನ್ನು ತಲುಪಿದೆ  ಕಳೆದ ಎಂಟು ವರ್ಷಗಳಲ್ಲಿ ಎಥೆನಾಲ್ ಮಿಶ್ರಣವು ಶೇಕಡಾ 10. 16 ಕ್ಕೆ ಏರಿದೆ ಎಂದು ಪ್ರಧಾನಿ ಹೇಳಿದರು.

“ಪಾಣಿಪತ್‌ನಲ್ಲಿ ಸ್ಥಾಪಿಸಲಾದ ಸ್ಥಾವರವು ಪ್ರಾರಂಭವಾಗಿದೆ. ಇದು ದೆಹಲಿ, ಎನ್‌ಸಿಆರ್ ಮತ್ತು ಹರಿಯಾಣದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ” ಎಂದು ಪ್ರಧಾನಿ ಹೇಳಿದರು.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ