AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಶೇ.75ಕ್ಕೂ ಹೆಚ್ಚು ವಯಸ್ಕರು ಕೊವಿಡ್​ 19 ಲಸಿಕೆ ಸಂಪೂರ್ಣ ಡೋಸ್​ ಪಡೆದವರು; ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಭಾರತದಲ್ಲಿ ಶೇ.75ರಷ್ಟು ವಯಸ್ಕರಿಗೆ ಎರಡೂ ಡೋಸ್​ ಲಸಿಕೆ ನೀಡಿಕೆಯಾಗಿದೆ.  ಸಬ್​ ಕಾ ಸಾಥ್, ಸಬ್​ ಕಾ ಪ್ರಯಾಸ್​ ಮಂತ್ರದಡಿ ಈ ಸಾಧನೆ ಸಾಧ್ಯವಾಗಿದೆ. ಕೊರೊನಾ ವೈರಸ್​ ವಿರುದ್ಧ ಹೋರಾಟದಲ್ಲಿ ನಾವು ಇನ್ನಷ್ಟು ಪ್ರಬಲರಾಗಿದ್ದೇವೆ ಎಂದು ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಶೇ.75ಕ್ಕೂ ಹೆಚ್ಚು ವಯಸ್ಕರು ಕೊವಿಡ್​ 19 ಲಸಿಕೆ ಸಂಪೂರ್ಣ ಡೋಸ್​ ಪಡೆದವರು; ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 30, 2022 | 12:03 PM

Share

ಭಾರತದಲ್ಲಿ ಶೇ.75ರಷ್ಟು ವಯಸ್ಕರು ಪೂರ್ಣಪ್ರಮಾಣದ ಲಸಿಕೆ ಪಡೆದಿದ್ದಾರೆ (ಎರಡೂ ಡೋಸ್​) ಎಂದು ಇಂದು ಕೇಂದ್ರ ಆರೋಗ್ಯ ಇಲಾಖೆ ಸಚಿವ ಮನ್​ಸುಖ್​ ಮಾಂಡವಿಯಾ ತಿಳಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಟ್ವೀಟ್ ಮಾಡಿ ದೇಶದ ಜನರಿಗೆ ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ದೇಶದಲ್ಲಿ ಶೇ.75ರಷ್ಟು ವಯಸ್ಕರು ಕೊರೊನಾ ವೈರಸ್​ ಲಸಿಕೆ(Corona Vaccination)ಯನ್ನು ಸಂಪೂರ್ಣವಾಗಿ ಪಡೆದಿದ್ದಾರೆ. ಇಂಥ ಒಂದು ಮಹತ್ವದ ಮೈಲಿಗಲ್ಲು ಸಾಧಿಸಲು ಸಹಾಯ ಮಾಡಿದ ಎಲ್ಲ ನಾಗರಿಕರಿಗೂ ಧನ್ಯವಾದಗಳು. ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗಲು ಪ್ರಯತ್ನಿಸಿದ ಎಲ್ಲರಿಗೂ ಇದು ಹೆಮ್ಮೆಯ ವಿಚಾರ ಎಂದು ಪ್ರಧಾನಿ ಮೋದಿ ಟ್ವೀಟ್​ (PM Modi Tweet) ಮಾಡಿದ್ದಾರೆ. 

ಭಾರತದಲ್ಲಿ ಶೇ.75ರಷ್ಟು ವಯಸ್ಕರಿಗೆ ಎರಡೂ ಡೋಸ್​ ಲಸಿಕೆ ನೀಡಿಕೆಯಾಗಿದೆ.  ಸಬ್​ ಕಾ ಸಾಥ್, ಸಬ್​ ಕಾ ಪ್ರಯಾಸ್​ ಮಂತ್ರದಡಿ ಈ ಸಾಧನೆ ಸಾಧ್ಯವಾಗಿದೆ. ಕೊರೊನಾ ವೈರಸ್​ ವಿರುದ್ಧ ಹೋರಾಟದಲ್ಲಿ ನಾವು ಇನ್ನಷ್ಟು ಪ್ರಬಲರಾಗಿದ್ದೇವೆ. ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಪಟ್ಟ ಎಲ್ಲ ನಿಯಮಗಳನ್ನೂ ಪಾಲಿಸುವ ಜತೆ, ಕೊರೊನಾ ಲಸಿಕೆ ಅಭಿಯಾನವನ್ನು ಇನ್ನಷ್ಟು ವೇಗಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಇಂದು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದರು. ಅದನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ, ದೇಶದ ಜನತೆಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ,  ಕಳೆದ 24ಗಂಟೆಯಲ್ಲಿ 62 ಸಾವಿರಕ್ಕೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಒಟ್ಟಾರೆಯಾಗಿ 165.70 ಕೋಟಿ ಡೋಸ್​​​ ಲಸಿಕೆಯನ್ನು ಇದುವರೆಗೆ ನೀಡಲಾಗಿದೆ ಎಂದು ಹೇಳಿದೆ. ಕೊರೊನಾ ವಿರುದ್ಧ ಲಸಿಕೆ ನೀಡಿಕೆ 2021ರ ಜನವರಿ 16ರಂದು ಪ್ರಾರಂಭವಾಗಿದೆ. ಹಾಗೇ, ಈ ಬಾರಿ ಜನವರಿ 3ರಿಂದ 15-18ವರ್ಷದವರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇನ್ನೊಂದೆಡೆ ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರಿಗೆ ಮತ್ತು 60ವರ್ಷ ಮೇಲ್ಪಟ್ಟು ಇತರ ರೋಗಗಳಿಂದ ಬಳಲುತ್ತಿರುವವರಿಗೆ ಕೊರೊನಾ ಲಸಿಕೆ ಬೂಸ್ಟರ್​ ಡೋಸ್​ ನೀಡಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ; ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ಮಾಡಿದ ಸಿಎಂ ಬೊಮ್ಮಾಯಿ

Published On - 11:56 am, Sun, 30 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ