AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಶೇ.75ಕ್ಕೂ ಹೆಚ್ಚು ವಯಸ್ಕರು ಕೊವಿಡ್​ 19 ಲಸಿಕೆ ಸಂಪೂರ್ಣ ಡೋಸ್​ ಪಡೆದವರು; ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಭಾರತದಲ್ಲಿ ಶೇ.75ರಷ್ಟು ವಯಸ್ಕರಿಗೆ ಎರಡೂ ಡೋಸ್​ ಲಸಿಕೆ ನೀಡಿಕೆಯಾಗಿದೆ.  ಸಬ್​ ಕಾ ಸಾಥ್, ಸಬ್​ ಕಾ ಪ್ರಯಾಸ್​ ಮಂತ್ರದಡಿ ಈ ಸಾಧನೆ ಸಾಧ್ಯವಾಗಿದೆ. ಕೊರೊನಾ ವೈರಸ್​ ವಿರುದ್ಧ ಹೋರಾಟದಲ್ಲಿ ನಾವು ಇನ್ನಷ್ಟು ಪ್ರಬಲರಾಗಿದ್ದೇವೆ ಎಂದು ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಶೇ.75ಕ್ಕೂ ಹೆಚ್ಚು ವಯಸ್ಕರು ಕೊವಿಡ್​ 19 ಲಸಿಕೆ ಸಂಪೂರ್ಣ ಡೋಸ್​ ಪಡೆದವರು; ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 30, 2022 | 12:03 PM

Share

ಭಾರತದಲ್ಲಿ ಶೇ.75ರಷ್ಟು ವಯಸ್ಕರು ಪೂರ್ಣಪ್ರಮಾಣದ ಲಸಿಕೆ ಪಡೆದಿದ್ದಾರೆ (ಎರಡೂ ಡೋಸ್​) ಎಂದು ಇಂದು ಕೇಂದ್ರ ಆರೋಗ್ಯ ಇಲಾಖೆ ಸಚಿವ ಮನ್​ಸುಖ್​ ಮಾಂಡವಿಯಾ ತಿಳಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಟ್ವೀಟ್ ಮಾಡಿ ದೇಶದ ಜನರಿಗೆ ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ದೇಶದಲ್ಲಿ ಶೇ.75ರಷ್ಟು ವಯಸ್ಕರು ಕೊರೊನಾ ವೈರಸ್​ ಲಸಿಕೆ(Corona Vaccination)ಯನ್ನು ಸಂಪೂರ್ಣವಾಗಿ ಪಡೆದಿದ್ದಾರೆ. ಇಂಥ ಒಂದು ಮಹತ್ವದ ಮೈಲಿಗಲ್ಲು ಸಾಧಿಸಲು ಸಹಾಯ ಮಾಡಿದ ಎಲ್ಲ ನಾಗರಿಕರಿಗೂ ಧನ್ಯವಾದಗಳು. ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗಲು ಪ್ರಯತ್ನಿಸಿದ ಎಲ್ಲರಿಗೂ ಇದು ಹೆಮ್ಮೆಯ ವಿಚಾರ ಎಂದು ಪ್ರಧಾನಿ ಮೋದಿ ಟ್ವೀಟ್​ (PM Modi Tweet) ಮಾಡಿದ್ದಾರೆ. 

ಭಾರತದಲ್ಲಿ ಶೇ.75ರಷ್ಟು ವಯಸ್ಕರಿಗೆ ಎರಡೂ ಡೋಸ್​ ಲಸಿಕೆ ನೀಡಿಕೆಯಾಗಿದೆ.  ಸಬ್​ ಕಾ ಸಾಥ್, ಸಬ್​ ಕಾ ಪ್ರಯಾಸ್​ ಮಂತ್ರದಡಿ ಈ ಸಾಧನೆ ಸಾಧ್ಯವಾಗಿದೆ. ಕೊರೊನಾ ವೈರಸ್​ ವಿರುದ್ಧ ಹೋರಾಟದಲ್ಲಿ ನಾವು ಇನ್ನಷ್ಟು ಪ್ರಬಲರಾಗಿದ್ದೇವೆ. ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಪಟ್ಟ ಎಲ್ಲ ನಿಯಮಗಳನ್ನೂ ಪಾಲಿಸುವ ಜತೆ, ಕೊರೊನಾ ಲಸಿಕೆ ಅಭಿಯಾನವನ್ನು ಇನ್ನಷ್ಟು ವೇಗಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಇಂದು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದರು. ಅದನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ, ದೇಶದ ಜನತೆಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ,  ಕಳೆದ 24ಗಂಟೆಯಲ್ಲಿ 62 ಸಾವಿರಕ್ಕೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಒಟ್ಟಾರೆಯಾಗಿ 165.70 ಕೋಟಿ ಡೋಸ್​​​ ಲಸಿಕೆಯನ್ನು ಇದುವರೆಗೆ ನೀಡಲಾಗಿದೆ ಎಂದು ಹೇಳಿದೆ. ಕೊರೊನಾ ವಿರುದ್ಧ ಲಸಿಕೆ ನೀಡಿಕೆ 2021ರ ಜನವರಿ 16ರಂದು ಪ್ರಾರಂಭವಾಗಿದೆ. ಹಾಗೇ, ಈ ಬಾರಿ ಜನವರಿ 3ರಿಂದ 15-18ವರ್ಷದವರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇನ್ನೊಂದೆಡೆ ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರಿಗೆ ಮತ್ತು 60ವರ್ಷ ಮೇಲ್ಪಟ್ಟು ಇತರ ರೋಗಗಳಿಂದ ಬಳಲುತ್ತಿರುವವರಿಗೆ ಕೊರೊನಾ ಲಸಿಕೆ ಬೂಸ್ಟರ್​ ಡೋಸ್​ ನೀಡಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ; ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ಮಾಡಿದ ಸಿಎಂ ಬೊಮ್ಮಾಯಿ

Published On - 11:56 am, Sun, 30 January 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ