75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ

ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
Follow us
| Updated By: ಆಯೇಷಾ ಬಾನು

Updated on:Aug 15, 2021 | 7:53 AM

ದೆಹಲಿ: ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ(75th Indian Independence Day) ಸಂಭ್ರಮಾಚರಣೆ ಮನೆ ಮಾಡಿದೆ. ದೇಶದಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ್’(Azadi Ka Amrit Mahotsav) ಆಚರಿಸುತ್ತ ಈ ದಿನಕ್ಕೆ ಕಾರಣರಾದವರನ್ನು ನೆನೆದು ಭಕ್ತಿ, ದೇಶ ಪ್ರೇಮವನ್ನು ಮನ-ಮೈ ತುಂಬಿಕೊಳ್ಳುತ್ತಿದ್ದಾರೆ. ಸದ್ಯ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ(Narendra Modi) ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

ಈ ಬಾರಿ ಮುಖ್ಯ ಅತಿಥಿಯಾಗಿ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಆಹ್ವಾನಿಸಲಾಗಿದೆ. ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಎಲ್ಲಾ ಕ್ರೀಡಾಪಟುಗಳು, ತರಬೇತಿದಾರರು, ಸಿಬ್ಬಂದಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಜೊತೆಗೆ ಕೊರೊನಾ ವಾರಿಯರ್ಸ್‌ಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಮೋದಿ ದೇಶದ ಜನತೆಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಈ ವರ್ಷದ ‘ಆಜಾದಿ ಕಾ ಅಮೃತ್ ಮಹೋತ್ಸವ’ ದೇಶದ ಜನರಲ್ಲಿ ಹೊಸ ಶಕ್ತಿ, ನವಚೈತನ್ಯ ತುಂಬಲಿ ಎಂದು ಹಾರೈಸಿದ್ದಾರೆ.

ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ದೆಹಲಿಯ ಕೆಂಪುಕೋಟೆಯಲ್ಲಿಂದು ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕಾರ್ಯಕ್ರಮ ಇರುವುದರಿಂದ ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5,000 ಸಿಬ್ಬಂದಿ ನಿಯೋಜನೆ, NSG ಸ್ನೈಪರ್‌ಗಳು, ಕಮಾಂಡೋಗಳು, ಎತ್ತರದ ಕಟ್ಟಡಗಳ ಮೇಲೆ ಶಾರ್ಪ್‌ಶೂಟರ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಪ್ರಮುಖ ಸ್ಥಳಗಳಲ್ಲಿ ಭದ್ರತಾ ತುಕಡಿ ನಿಯೋಜಿಸಲಾಗಿದೆ. ದೆಹಲಿ ಕೆಂಪುಕೋಟೆಯ ಸುತ್ತ ಖಾಕಿ ಸರ್ಪಗಾವಲು ಹಾಕಲಾಗಿದೆ. 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಡಿಟೆಕ್ಟರ್ ರಾಡಾರ್, ಕೆಂಪುಕೋಟೆ ಸುತ್ತ 350ಕ್ಕೂ ಹೆಚ್ಚು ಸಿಸಿ ಕ್ಯಾಮರಾ, ಹಾಗೂ ಸಿಸಿ ಕ್ಯಾಮರಾ ದೃಶ್ಯ ನಿಗಾವಹಿಸಲು ಕೆಂಪುಕೋಟೆ ಬಳಿಯೇ 2 ಕಂಟ್ರೋಲ್ ರೂಂ ಓಪನ್, ಕೆಂಪುಕೋಟೆಯ ಮುಖ್ಯದ್ವಾರದಲ್ಲಿ ಕೆಂಪುಕೋಟೆ ಆವರಣ ಕಾಣದಂತೆ ಬೃಹತ್ ಕಂಟೇನರ್ ಗೋಡೆ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’

Published On - 7:44 am, Sun, 15 August 21

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ