AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ

ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
TV9 Web
| Edited By: |

Updated on:Aug 15, 2021 | 7:53 AM

Share

ದೆಹಲಿ: ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ(75th Indian Independence Day) ಸಂಭ್ರಮಾಚರಣೆ ಮನೆ ಮಾಡಿದೆ. ದೇಶದಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ್’(Azadi Ka Amrit Mahotsav) ಆಚರಿಸುತ್ತ ಈ ದಿನಕ್ಕೆ ಕಾರಣರಾದವರನ್ನು ನೆನೆದು ಭಕ್ತಿ, ದೇಶ ಪ್ರೇಮವನ್ನು ಮನ-ಮೈ ತುಂಬಿಕೊಳ್ಳುತ್ತಿದ್ದಾರೆ. ಸದ್ಯ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ(Narendra Modi) ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

ಈ ಬಾರಿ ಮುಖ್ಯ ಅತಿಥಿಯಾಗಿ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಆಹ್ವಾನಿಸಲಾಗಿದೆ. ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಎಲ್ಲಾ ಕ್ರೀಡಾಪಟುಗಳು, ತರಬೇತಿದಾರರು, ಸಿಬ್ಬಂದಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಜೊತೆಗೆ ಕೊರೊನಾ ವಾರಿಯರ್ಸ್‌ಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಮೋದಿ ದೇಶದ ಜನತೆಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಈ ವರ್ಷದ ‘ಆಜಾದಿ ಕಾ ಅಮೃತ್ ಮಹೋತ್ಸವ’ ದೇಶದ ಜನರಲ್ಲಿ ಹೊಸ ಶಕ್ತಿ, ನವಚೈತನ್ಯ ತುಂಬಲಿ ಎಂದು ಹಾರೈಸಿದ್ದಾರೆ.

ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ದೆಹಲಿಯ ಕೆಂಪುಕೋಟೆಯಲ್ಲಿಂದು ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕಾರ್ಯಕ್ರಮ ಇರುವುದರಿಂದ ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5,000 ಸಿಬ್ಬಂದಿ ನಿಯೋಜನೆ, NSG ಸ್ನೈಪರ್‌ಗಳು, ಕಮಾಂಡೋಗಳು, ಎತ್ತರದ ಕಟ್ಟಡಗಳ ಮೇಲೆ ಶಾರ್ಪ್‌ಶೂಟರ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಪ್ರಮುಖ ಸ್ಥಳಗಳಲ್ಲಿ ಭದ್ರತಾ ತುಕಡಿ ನಿಯೋಜಿಸಲಾಗಿದೆ. ದೆಹಲಿ ಕೆಂಪುಕೋಟೆಯ ಸುತ್ತ ಖಾಕಿ ಸರ್ಪಗಾವಲು ಹಾಕಲಾಗಿದೆ. 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಡಿಟೆಕ್ಟರ್ ರಾಡಾರ್, ಕೆಂಪುಕೋಟೆ ಸುತ್ತ 350ಕ್ಕೂ ಹೆಚ್ಚು ಸಿಸಿ ಕ್ಯಾಮರಾ, ಹಾಗೂ ಸಿಸಿ ಕ್ಯಾಮರಾ ದೃಶ್ಯ ನಿಗಾವಹಿಸಲು ಕೆಂಪುಕೋಟೆ ಬಳಿಯೇ 2 ಕಂಟ್ರೋಲ್ ರೂಂ ಓಪನ್, ಕೆಂಪುಕೋಟೆಯ ಮುಖ್ಯದ್ವಾರದಲ್ಲಿ ಕೆಂಪುಕೋಟೆ ಆವರಣ ಕಾಣದಂತೆ ಬೃಹತ್ ಕಂಟೇನರ್ ಗೋಡೆ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’

Published On - 7:44 am, Sun, 15 August 21

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ