AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ

ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
TV9 Web
| Edited By: ಆಯೇಷಾ ಬಾನು|

Updated on:Aug 15, 2021 | 7:53 AM

Share

ದೆಹಲಿ: ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ(75th Indian Independence Day) ಸಂಭ್ರಮಾಚರಣೆ ಮನೆ ಮಾಡಿದೆ. ದೇಶದಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ್’(Azadi Ka Amrit Mahotsav) ಆಚರಿಸುತ್ತ ಈ ದಿನಕ್ಕೆ ಕಾರಣರಾದವರನ್ನು ನೆನೆದು ಭಕ್ತಿ, ದೇಶ ಪ್ರೇಮವನ್ನು ಮನ-ಮೈ ತುಂಬಿಕೊಳ್ಳುತ್ತಿದ್ದಾರೆ. ಸದ್ಯ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ(Narendra Modi) ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

ಈ ಬಾರಿ ಮುಖ್ಯ ಅತಿಥಿಯಾಗಿ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಆಹ್ವಾನಿಸಲಾಗಿದೆ. ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಎಲ್ಲಾ ಕ್ರೀಡಾಪಟುಗಳು, ತರಬೇತಿದಾರರು, ಸಿಬ್ಬಂದಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಜೊತೆಗೆ ಕೊರೊನಾ ವಾರಿಯರ್ಸ್‌ಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಮೋದಿ ದೇಶದ ಜನತೆಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಈ ವರ್ಷದ ‘ಆಜಾದಿ ಕಾ ಅಮೃತ್ ಮಹೋತ್ಸವ’ ದೇಶದ ಜನರಲ್ಲಿ ಹೊಸ ಶಕ್ತಿ, ನವಚೈತನ್ಯ ತುಂಬಲಿ ಎಂದು ಹಾರೈಸಿದ್ದಾರೆ.

ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ದೆಹಲಿಯ ಕೆಂಪುಕೋಟೆಯಲ್ಲಿಂದು ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕಾರ್ಯಕ್ರಮ ಇರುವುದರಿಂದ ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5,000 ಸಿಬ್ಬಂದಿ ನಿಯೋಜನೆ, NSG ಸ್ನೈಪರ್‌ಗಳು, ಕಮಾಂಡೋಗಳು, ಎತ್ತರದ ಕಟ್ಟಡಗಳ ಮೇಲೆ ಶಾರ್ಪ್‌ಶೂಟರ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಪ್ರಮುಖ ಸ್ಥಳಗಳಲ್ಲಿ ಭದ್ರತಾ ತುಕಡಿ ನಿಯೋಜಿಸಲಾಗಿದೆ. ದೆಹಲಿ ಕೆಂಪುಕೋಟೆಯ ಸುತ್ತ ಖಾಕಿ ಸರ್ಪಗಾವಲು ಹಾಕಲಾಗಿದೆ. 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಡಿಟೆಕ್ಟರ್ ರಾಡಾರ್, ಕೆಂಪುಕೋಟೆ ಸುತ್ತ 350ಕ್ಕೂ ಹೆಚ್ಚು ಸಿಸಿ ಕ್ಯಾಮರಾ, ಹಾಗೂ ಸಿಸಿ ಕ್ಯಾಮರಾ ದೃಶ್ಯ ನಿಗಾವಹಿಸಲು ಕೆಂಪುಕೋಟೆ ಬಳಿಯೇ 2 ಕಂಟ್ರೋಲ್ ರೂಂ ಓಪನ್, ಕೆಂಪುಕೋಟೆಯ ಮುಖ್ಯದ್ವಾರದಲ್ಲಿ ಕೆಂಪುಕೋಟೆ ಆವರಣ ಕಾಣದಂತೆ ಬೃಹತ್ ಕಂಟೇನರ್ ಗೋಡೆ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’

Published On - 7:44 am, Sun, 15 August 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ