AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ

ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
TV9 Web
| Edited By: |

Updated on:Aug 15, 2021 | 7:53 AM

Share

ದೆಹಲಿ: ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ(75th Indian Independence Day) ಸಂಭ್ರಮಾಚರಣೆ ಮನೆ ಮಾಡಿದೆ. ದೇಶದಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ್’(Azadi Ka Amrit Mahotsav) ಆಚರಿಸುತ್ತ ಈ ದಿನಕ್ಕೆ ಕಾರಣರಾದವರನ್ನು ನೆನೆದು ಭಕ್ತಿ, ದೇಶ ಪ್ರೇಮವನ್ನು ಮನ-ಮೈ ತುಂಬಿಕೊಳ್ಳುತ್ತಿದ್ದಾರೆ. ಸದ್ಯ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ(Narendra Modi) ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

ಈ ಬಾರಿ ಮುಖ್ಯ ಅತಿಥಿಯಾಗಿ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಆಹ್ವಾನಿಸಲಾಗಿದೆ. ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಎಲ್ಲಾ ಕ್ರೀಡಾಪಟುಗಳು, ತರಬೇತಿದಾರರು, ಸಿಬ್ಬಂದಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಜೊತೆಗೆ ಕೊರೊನಾ ವಾರಿಯರ್ಸ್‌ಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಮೋದಿ ದೇಶದ ಜನತೆಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಈ ವರ್ಷದ ‘ಆಜಾದಿ ಕಾ ಅಮೃತ್ ಮಹೋತ್ಸವ’ ದೇಶದ ಜನರಲ್ಲಿ ಹೊಸ ಶಕ್ತಿ, ನವಚೈತನ್ಯ ತುಂಬಲಿ ಎಂದು ಹಾರೈಸಿದ್ದಾರೆ.

ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ದೆಹಲಿಯ ಕೆಂಪುಕೋಟೆಯಲ್ಲಿಂದು ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕಾರ್ಯಕ್ರಮ ಇರುವುದರಿಂದ ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5,000 ಸಿಬ್ಬಂದಿ ನಿಯೋಜನೆ, NSG ಸ್ನೈಪರ್‌ಗಳು, ಕಮಾಂಡೋಗಳು, ಎತ್ತರದ ಕಟ್ಟಡಗಳ ಮೇಲೆ ಶಾರ್ಪ್‌ಶೂಟರ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಪ್ರಮುಖ ಸ್ಥಳಗಳಲ್ಲಿ ಭದ್ರತಾ ತುಕಡಿ ನಿಯೋಜಿಸಲಾಗಿದೆ. ದೆಹಲಿ ಕೆಂಪುಕೋಟೆಯ ಸುತ್ತ ಖಾಕಿ ಸರ್ಪಗಾವಲು ಹಾಕಲಾಗಿದೆ. 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಡಿಟೆಕ್ಟರ್ ರಾಡಾರ್, ಕೆಂಪುಕೋಟೆ ಸುತ್ತ 350ಕ್ಕೂ ಹೆಚ್ಚು ಸಿಸಿ ಕ್ಯಾಮರಾ, ಹಾಗೂ ಸಿಸಿ ಕ್ಯಾಮರಾ ದೃಶ್ಯ ನಿಗಾವಹಿಸಲು ಕೆಂಪುಕೋಟೆ ಬಳಿಯೇ 2 ಕಂಟ್ರೋಲ್ ರೂಂ ಓಪನ್, ಕೆಂಪುಕೋಟೆಯ ಮುಖ್ಯದ್ವಾರದಲ್ಲಿ ಕೆಂಪುಕೋಟೆ ಆವರಣ ಕಾಣದಂತೆ ಬೃಹತ್ ಕಂಟೇನರ್ ಗೋಡೆ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’

Published On - 7:44 am, Sun, 15 August 21

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ