AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿದ್ವಾರ ಧಾರ್ಮಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪ; ಮಧ್ಯ ಪ್ರವೇಶಿಸುವಂತೆ ಸಿಜೆಐ ರಮಣಗೆ ಪತ್ರ ಬರೆದ 76 ವಕೀಲರು

ಹರಿದ್ವಾರದಲ್ಲಿ ಡಿ.17ರಿಂದ 20ರವರೆಗೆ ಧರ್ಮ ಸಂಸದ್​ ಸಮಾರಂಭ ನಡೆದಿತ್ತು. ಅದರಲ್ಲಿ ಭಾಗವಹಿಸಿದ್ದ ಹಲವು ಧಾರ್ಮಿಕ ಮುಖಂಡರು ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿದ್ದರು

ಹರಿದ್ವಾರ ಧಾರ್ಮಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪ; ಮಧ್ಯ ಪ್ರವೇಶಿಸುವಂತೆ ಸಿಜೆಐ ರಮಣಗೆ ಪತ್ರ ಬರೆದ 76 ವಕೀಲರು
ಸುಪ್ರೀಂಕೋರ್ಟ್​
TV9 Web
| Updated By: Lakshmi Hegde|

Updated on: Dec 27, 2021 | 12:51 PM

Share

ಇತ್ತೀಚೆಗೆ ಹರಿದ್ವಾರ ಮತ್ತು ದೆಹಲಿಯಲ್ಲಿ ನಡೆದ ಎರಡು ಧಾರ್ಮಿಕ ಕಾರ್ಯಕ್ರಮಗಳು ವಿವಾದ ಸೃಷ್ಟಿಸಿವೆ.  ಅದರ ಬೆನ್ನಲ್ಲೇ ಸುಪ್ರೀಂಕೋರ್ಟ್(Supreme Court)​ನ 76 ಮಂದಿ ವಕೀಲರು ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ (CJI N V Ramana) ಅವರಿಗೆ ಪತ್ರ ಬರೆದಿದ್ದು, ಈ ಎರಡೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ, ಧಾರ್ಮಿಕ ಮುಖಂಡರು ಜನಾಂಗೀಯ ಶುದ್ಧೀಕರಣಕ್ಕೆ ಕರೆ ನೀಡಿದ್ದಾರೆ ಹಾಗೂ ದ್ವೇಷ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಸುಮೊಟೊ ಆಗಿ ತೆಗೆದುಕೊಳ್ಳಬೇಕು. ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ತುರ್ತಾಗಿ ನ್ಯಾಯಾಂಗದ ಹಸ್ತಕ್ಷೇಪವಾಗಲೇಬೇಕು. ಈ ಮೂಲಕ ಇಂಥ ಭಾಷಣಗಳು ಮತ್ತೆ ಮರುಕಳಿಸದಂತೆ ತಡೆಯಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ದ್ವೇಷ ಭಾಷಣ ಮಾಡಿದವರ ಹೆಸರನ್ನು ವಕೀಲರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹಾಗೇ, ಸಹಿ ಮಾಡಿದ 72 ಮಂದಿ ವಕೀಲರ ಹೆಸರನ್ನೂ ಇಲ್ಲಿ ನಮೂದಿಸಲಾಗಿದೆ. 

ಈ ಪತ್ರಕ್ಕೆ ದೇಶದ ಪ್ರಮುಖ ವಕೀಲರಾದ ದುಶ್ಯಂತ ದಾವೆ, ಪ್ರಶಾಂತ್ ಭೂಷಣ್​, ವೃಂದಾ ಗ್ರೋವರ್​, ಸಲ್ಮಾನ್ ಖುರ್ಷಿದ್​, ಪಾಟ್ನಾ ಹೈಕೋರ್ಟ್​​ನ ಮಾಜಿ ಜಡ್ಜ್​ ಅಂಜನಾ ಪ್ರಕಾಶ್​ ಕೂಡ ಸಹಿ ಮಾಡಿದ್ದಾರೆ. ಹರಿದ್ವಾರ ಮತ್ತು ದೆಹಲಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ, ಮುಸ್ಲಿಂ ಜನಾಂಗದವರ ಸಾಮೂಹಿಕ ಹತ್ಯೆಗೆ ಕರೆ ನೀಡಲಾಗಿದೆ. ಇದು ನಮ್ಮ ದೇಶದ ಏಕತೆ ಮತ್ತು ಸಮಗ್ರತೆಗೆ ಅತಿದೊಡ್ಡ ಅಪಾಯವನ್ನುಂಟು ಮಾಡುವ ನಡೆ. ಅಷ್ಟೇ ಅಲ್ಲ, ಮುಸ್ಲಿಂ ಸಮುದಾಯದ ಲಕ್ಷಾಂತರ ಜನರ ಜೀವಕ್ಕೆ ಅಪಾಯ ತರುವ ಕರೆ ಎಂದು ವಕೀಲರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹರಿದ್ವಾರದಲ್ಲಿ ಏನಾಯಿತು? ಹರಿದ್ವಾರದಲ್ಲಿ ಡಿ.17ರಿಂದ 20ರವರೆಗೆ ಧರ್ಮ ಸಂಸದ್​ ಸಮಾರಂಭ ನಡೆದಿತ್ತು. ಅದರಲ್ಲಿ ಭಾಗವಹಿಸಿದ್ದ ಹಲವು ಧಾರ್ಮಿಕ ಮುಖಂಡರು ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿದ್ದರು. ಮುಸ್ಲಿಂರಿಂದ ಎದುರಾಗುತ್ತಿರುವ ಅಪಾಯವನ್ನು ಎದುರಿಸಲು ಹಿಂದು ಕಾರ್ಯಕರ್ತರು ಶಸ್ತ್ರಾಸ್ತ್ರಗಳನ್ನು ಹೊಂದುವುದೇ ಪರಿಹಾರ ಎಂಬ ಮಾತುಗಳನ್ನು ಯತಿ ನರಸಿಂಗಾನಂದ್​ ಅವರು ಆಡಿದ್ದರು. ಬರೀ ಅವರಷ್ಟೇ ಅಲ್ಲ, ಅಲ್ಲಿ ಪಾಲ್ಗೊಂಡಿದ್ದವರೆಲ್ಲ ದ್ವೇಷ ಭಾಷಣವನ್ನೇ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.  ಅಂದಹಾಗೇ ಈ ಕಾರ್ಯಕ್ರಮದಲ್ಲಿ, ಇತ್ತೀಚೆಗಷ್ಟೇ ಇಸ್ಲಾಂನಿಂದ ಹಿಂದು ಧರ್ಮಕ್ಕೆ ಮತಾಂತರಗೊಂಡ ಜಿತೇಂದ್ರ ನಾರಾಯಣ ತ್ಯಾಗಿ (ವಾಸಿಂ ರಿಜ್ವಿ) ಕೂಡ ಪಾಲ್ಗೊಂಡಿದ್ದರು.  ಹರಿದ್ವಾರದಲ್ಲಿ ದ್ವೇಷಭಾಷಣದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಉತ್ತರಾಖಂಡ ಪೊಲೀಸರು ಜಿತೇಂದ್ರ ನಾರಾಯಣ ತ್ಯಾಗಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ನಾಯಕರ ವಿರುದ್ಧ ಟಿಎಂಸಿ ವಕ್ತಾರ ಸಾಕೇತ್​ ಗೋಖಲೆ ಕೂಡ ದೂರು ನೀಡಿದ್ದಾರೆ.

ಇದನ್ನೂ ಓದಿ: Salman Khan: ‘ಪವನ ಪುತ್ರ ಭಾಯಿಜಾನ್​’; ಸಲ್ಮಾನ್​ ಖಾನ್ ಹೊಸ ಸಿನಿಮಾದ ಶೀರ್ಷಿಕೆ ಬಹಿರಂಗ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ