Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಇಂದು 7ನೇ ಸುತ್ತಿನ ಸಭೆ; ಫಲಿತಾಂಶಕ್ಕೆ ಕಾದು ಕುಳಿತಿದೆ ಇಡೀ ದೇಶ

ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ ಇಂದು 7ನೇ ಸುತ್ತಿನ ಸಭೆ ನಡೆಯಲಿದೆ. ಇಂದಿನ ಮಾತುಕತೆಯಲ್ಲಿ ಹೊರ ಹೊಮ್ಮುವ ನಿರ್ಧಾರವನ್ನು ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿದೆ.

Delhi Chalo: ಇಂದು 7ನೇ ಸುತ್ತಿನ ಸಭೆ; ಫಲಿತಾಂಶಕ್ಕೆ ಕಾದು ಕುಳಿತಿದೆ ಇಡೀ ದೇಶ
ರೈತ ಮುಖಂಡರ ಜೊತೆ ಸಭೆ ನಡೆಸಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (ಸಂಗ್ರಹ ಚಿತ್ರ)
Follow us
guruganesh bhat
|

Updated on:Jan 04, 2021 | 11:39 AM

ಚಂಡಿಗಢ: ಹರಿಯಾಣದ ರೇವಾರಿ-ಅಲ್ವಾರಿ ಗಡಿಯಲ್ಲಿ ಚಳುವಳಿಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಭಾನುವಾರ ಹರಿಯಾಣದಿಂದ ದೆಹಲಿಯತ್ತ ಹೊರಟ ಸಾವಿರಾರು ರೈತರನ್ನು ತಡೆಯಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಜೊತೆಗೆ, ಮೆರವಣಿಗೆಯಲ್ಲಿ ವಾಹನವೊಂದಕ್ಕೆ ಬೆಂಕಿ ತಗುಲಿದೆ. ಇವೆರಡೂ ಘಟನೆಗಳು ಚಳುವಳಿಯಲ್ಲಿ ಭಾಗಿಯಾಗಲು ಹೊರಟ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಪಂಜಾಬ್​ನ ಪೊಲೀಸರೂ ನಿನ್ನೆ ರೈತ ಚಳುವಳಿಕಾರರ ವಿರುದ್ಧ ಲಾಠಿ ಬೀಸಿದ್ದಾರೆ. ಪಂಜಾಬ್ ಬಿಜೆಪಿ ರಾಜ್ಯಾಧ್ಯಕ್ಷ ಅಶ್ವಿನಿ ಕುಮಾರ್ ಶರ್ಮಾ ನಡೆಸುತ್ತಿದ್ದ ಪಕ್ಷದ ಆಂತರಿಕ ಸಭೆಯತ್ತ ನುಗ್ಗಲೆತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಾಠಿ ಕೈಗೆತ್ತಿಕೊಂಡರು.

ಈ ಮಧ್ಯೆ.. ಇಂದಿನ ಕೇಂದ್ರ ಸರ್ಕಾರದ ಜೊತೆಗಿನ ಸಭೆಯಲ್ಲಿ ಏನಾಗಬಹುದೆಂಬ ಆತಂಕ, ಗೊಂದಲವಂತೂ ಎಲ್ಲರಲ್ಲೂ ಎದ್ದು ಕಾಣುತ್ತಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದೆ ತಮ್ಮ ಪಟ್ಟು ಬಿಡುವುದಿಲ್ಲವೆಂದು ರೈತರು ಈಗಾಗಲೇ ಘೋಷಿಸಿದ್ದಾರೆ.

ರೈತರ ಬೇಡಿಕೆಗಳೇನು? ರೈತರ 4 ಬೇಡಿಕೆಗಳಲ್ಲಿ 2 ಬೇಡಿಕೆಗಳಿಗೆ ಈಗಾಗಲೇ ಒಮ್ಮತಕ್ಕೆ ಬರಲಾಗಿದೆ. ಇನ್ನುಳಿದ 2 ಪ್ರಮುಖ ಬೇಡಿಕೆಗಳಾಗಿವೆ.

1. ಕನಿಷ್ಠ  ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಖಚಿತಪಡಿಸಬೇಕು. 2. ನೂತನ ಕೃಷಿ ಕಾಯ್ದೆಗಳನ್ನು ಸಂಪೂರ್ಣ ರದ್ದುಗೊಳಿಸಬೇಕು. ಈ ಎರಡೂ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸಮ್ಮತಿಸದೆ ಯಾವುದೇ ಕಾರಣಕ್ಕೂ ಚಳುವಳಿ ಹಿಂಪಡೆಯುವುದಿಲ್ಲ ಎಂದು ರೈತ ಒಕ್ಕೂಟಗಳು ಖಚಿತಪಡಿಸಿವೆ.

ಆದರೆ, ಕೇಂದ್ರ ಸರ್ಕಾರದ ಈವರೆಗಿನ ನಿಲುವಿನ ಪ್ರಕಾರ ಯಾವ ಕಾರಣಕ್ಕೂ ಕೃಷಿ  ಕಾಯ್ದೆಗಳನ್ನು ಹಿಂಪಡೆಯುವುದಿಲ್ಲ. ರೈತರು ಸೂಚಿಸಿದ ಬದಲಾವಣೆಗಳನ್ನು ಮಾಡಲು ಸಿದ್ಧ. ಜೊತೆಗೆ, ಕನಿಷ್ಠ ಬೆಂಬಲ ಬೆಲೆಯಲ್ಲಿ ಯಾವ ವ್ಯತ್ಯಾಸವೂ ಆಗುವುದಿಲ್ಲ ಎಂದಿದೆ. ಹೀಗಾಗಿ, ಇಂದು ನಡೆಯಲಿರುವ 7ನೇ ಸುತ್ತಿನ ಸಭೆ ಕುತೂಹಲ ಮೂಡಿಸಿದೆ.

Fact Check | ರೈತರ ಪ್ರತಿಭಟನಾ ಸ್ಥಳದಲ್ಲಿ ಇದ್ದದ್ದು ಜೀಪ್, ₹1.5 ಕೋಟಿ ಮೌಲ್ಯದ ಬೆಂಜ್ ಕಾರು ಅಲ್ಲ

Published On - 11:25 am, Mon, 4 January 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ