AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಇಂದು 7ನೇ ಸುತ್ತಿನ ಸಭೆ; ಫಲಿತಾಂಶಕ್ಕೆ ಕಾದು ಕುಳಿತಿದೆ ಇಡೀ ದೇಶ

ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ ಇಂದು 7ನೇ ಸುತ್ತಿನ ಸಭೆ ನಡೆಯಲಿದೆ. ಇಂದಿನ ಮಾತುಕತೆಯಲ್ಲಿ ಹೊರ ಹೊಮ್ಮುವ ನಿರ್ಧಾರವನ್ನು ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿದೆ.

Delhi Chalo: ಇಂದು 7ನೇ ಸುತ್ತಿನ ಸಭೆ; ಫಲಿತಾಂಶಕ್ಕೆ ಕಾದು ಕುಳಿತಿದೆ ಇಡೀ ದೇಶ
ರೈತ ಮುಖಂಡರ ಜೊತೆ ಸಭೆ ನಡೆಸಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (ಸಂಗ್ರಹ ಚಿತ್ರ)
guruganesh bhat
|

Updated on:Jan 04, 2021 | 11:39 AM

Share

ಚಂಡಿಗಢ: ಹರಿಯಾಣದ ರೇವಾರಿ-ಅಲ್ವಾರಿ ಗಡಿಯಲ್ಲಿ ಚಳುವಳಿಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಭಾನುವಾರ ಹರಿಯಾಣದಿಂದ ದೆಹಲಿಯತ್ತ ಹೊರಟ ಸಾವಿರಾರು ರೈತರನ್ನು ತಡೆಯಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಜೊತೆಗೆ, ಮೆರವಣಿಗೆಯಲ್ಲಿ ವಾಹನವೊಂದಕ್ಕೆ ಬೆಂಕಿ ತಗುಲಿದೆ. ಇವೆರಡೂ ಘಟನೆಗಳು ಚಳುವಳಿಯಲ್ಲಿ ಭಾಗಿಯಾಗಲು ಹೊರಟ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಪಂಜಾಬ್​ನ ಪೊಲೀಸರೂ ನಿನ್ನೆ ರೈತ ಚಳುವಳಿಕಾರರ ವಿರುದ್ಧ ಲಾಠಿ ಬೀಸಿದ್ದಾರೆ. ಪಂಜಾಬ್ ಬಿಜೆಪಿ ರಾಜ್ಯಾಧ್ಯಕ್ಷ ಅಶ್ವಿನಿ ಕುಮಾರ್ ಶರ್ಮಾ ನಡೆಸುತ್ತಿದ್ದ ಪಕ್ಷದ ಆಂತರಿಕ ಸಭೆಯತ್ತ ನುಗ್ಗಲೆತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಾಠಿ ಕೈಗೆತ್ತಿಕೊಂಡರು.

ಈ ಮಧ್ಯೆ.. ಇಂದಿನ ಕೇಂದ್ರ ಸರ್ಕಾರದ ಜೊತೆಗಿನ ಸಭೆಯಲ್ಲಿ ಏನಾಗಬಹುದೆಂಬ ಆತಂಕ, ಗೊಂದಲವಂತೂ ಎಲ್ಲರಲ್ಲೂ ಎದ್ದು ಕಾಣುತ್ತಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದೆ ತಮ್ಮ ಪಟ್ಟು ಬಿಡುವುದಿಲ್ಲವೆಂದು ರೈತರು ಈಗಾಗಲೇ ಘೋಷಿಸಿದ್ದಾರೆ.

ರೈತರ ಬೇಡಿಕೆಗಳೇನು? ರೈತರ 4 ಬೇಡಿಕೆಗಳಲ್ಲಿ 2 ಬೇಡಿಕೆಗಳಿಗೆ ಈಗಾಗಲೇ ಒಮ್ಮತಕ್ಕೆ ಬರಲಾಗಿದೆ. ಇನ್ನುಳಿದ 2 ಪ್ರಮುಖ ಬೇಡಿಕೆಗಳಾಗಿವೆ.

1. ಕನಿಷ್ಠ  ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಖಚಿತಪಡಿಸಬೇಕು. 2. ನೂತನ ಕೃಷಿ ಕಾಯ್ದೆಗಳನ್ನು ಸಂಪೂರ್ಣ ರದ್ದುಗೊಳಿಸಬೇಕು. ಈ ಎರಡೂ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸಮ್ಮತಿಸದೆ ಯಾವುದೇ ಕಾರಣಕ್ಕೂ ಚಳುವಳಿ ಹಿಂಪಡೆಯುವುದಿಲ್ಲ ಎಂದು ರೈತ ಒಕ್ಕೂಟಗಳು ಖಚಿತಪಡಿಸಿವೆ.

ಆದರೆ, ಕೇಂದ್ರ ಸರ್ಕಾರದ ಈವರೆಗಿನ ನಿಲುವಿನ ಪ್ರಕಾರ ಯಾವ ಕಾರಣಕ್ಕೂ ಕೃಷಿ  ಕಾಯ್ದೆಗಳನ್ನು ಹಿಂಪಡೆಯುವುದಿಲ್ಲ. ರೈತರು ಸೂಚಿಸಿದ ಬದಲಾವಣೆಗಳನ್ನು ಮಾಡಲು ಸಿದ್ಧ. ಜೊತೆಗೆ, ಕನಿಷ್ಠ ಬೆಂಬಲ ಬೆಲೆಯಲ್ಲಿ ಯಾವ ವ್ಯತ್ಯಾಸವೂ ಆಗುವುದಿಲ್ಲ ಎಂದಿದೆ. ಹೀಗಾಗಿ, ಇಂದು ನಡೆಯಲಿರುವ 7ನೇ ಸುತ್ತಿನ ಸಭೆ ಕುತೂಹಲ ಮೂಡಿಸಿದೆ.

Fact Check | ರೈತರ ಪ್ರತಿಭಟನಾ ಸ್ಥಳದಲ್ಲಿ ಇದ್ದದ್ದು ಜೀಪ್, ₹1.5 ಕೋಟಿ ಮೌಲ್ಯದ ಬೆಂಜ್ ಕಾರು ಅಲ್ಲ

Published On - 11:25 am, Mon, 4 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ