AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daku Haseena: 10 ರೂ. ಜ್ಯೂಸ್​​ ಆಸೆಗೆ ಪೊಲೀಸರ ಬಲೆಗೆ ಬಿದ್ದ ಕಳ್ಳ ದಂಪತಿಗಳು, ಇವರು ದರೋಡೆ ಮಾಡಿ ಮೊತ್ತ ಎಷ್ಟು ಗೊತ್ತಾ?

ಜೂನ್ 10ರಂದು ಲೂಧಿಯಾನದಲ್ಲಿ ನಡೆದ 8 ಕೋಟಿ 49 ಲಕ್ಷ ರೂಪಾಯಿ ದರೋಡೆಗೆ ಸಂಬಂಧಿಸಿದಂತೆ 'ಡಾಕು ಹಸೀನಾ' ಎಂದು ಕರೆಯಲ್ಪಡುವ ಮಂದೀಪ್ ಕೌರ್ ದಂಪತಿಗಳನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

Daku Haseena: 10 ರೂ. ಜ್ಯೂಸ್​​ ಆಸೆಗೆ ಪೊಲೀಸರ ಬಲೆಗೆ ಬಿದ್ದ ಕಳ್ಳ ದಂಪತಿಗಳು, ಇವರು ದರೋಡೆ ಮಾಡಿ ಮೊತ್ತ ಎಷ್ಟು ಗೊತ್ತಾ?
ಅಕ್ಷಯ್​ ಪಲ್ಲಮಜಲು​​
|

Updated on: Jun 19, 2023 | 12:13 PM

Share

ದೆಹಲಿ: ಜೂನ್ 10ರಂದು ಲೂಧಿಯಾನದಲ್ಲಿ ನಡೆದ 8 ಕೋಟಿ 49 ಲಕ್ಷ ರೂಪಾಯಿ ದರೋಡೆಗೆ ಸಂಬಂಧಿಸಿದಂತೆ ‘ಡಾಕು ಹಸೀನಾ’ ಎಂದು ಕರೆಯಲ್ಪಡುವ ಮಂದೀಪ್ ಕೌರ್ ದಂಪತಿಗಳನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಇವರನ್ನು ಪತ್ತೆ ಮಾಡಲು ಸಹಾಯವಾಗಿದ್ದು 10 ರೂ, ಜ್ಯೂಸ್. ಮಂದೀಪ್ ಕೌರ್ ಮತ್ತು ಆಕೆಯ ಪತಿ ಜಸ್ವಿಂದರ್ ಸಿಂಗ್ ಅವರನ್ನು ಉತ್ತರಾಖಂಡದ ಚಮೋಲಿಯ ಹೇಮಕುಂಡ್ ಸಾಹಿಬ್‌ನಲ್ಲಿ ಬಂಧಿಸಲಾಗಿದೆ. ಈ ಪ್ರಕರಣವನ್ನು ಭೇದಿಸಲು ಪ್ರಮುಖವಾಗಿ ಸಹಾಯವಾಗಿದ್ದು ಅವರು ಸಿಖ್ ದೇಗುಲಕ್ಕೆ ಭೇಟಿ ನೀಡುತ್ತಿದ್ದು. ದಂಪತಿಯ ಹೊರತಾಗಿ, ಪಂಜಾಬ್‌ನ ಗಿಡ್ಡರ್‌ಬಾಹಾದಿಂದ ಮತ್ತೊಬ್ಬ ಆರೋಪಿ ಗೌರವ್ ಎಂಬಾತನನ್ನೂ ಪೊಲೀಸರು ಹಿಡಿದಿದ್ದಾರೆ. ಇದುವರೆಗೆ ಪ್ರಕರಣದ ಆರೋಪಿಗಳಾಗಿರುವ 12 ಜನರ ಪೈಕಿ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಹಾಕಿದ 10 ರೂ. ಜ್ಯೂಸ್​​ ಆಮಿಷಕ್ಕೆ ಬಿದ್ದ ದಂಪತಿಯಿಂದ 21 ಲಕ್ಷ ರೂ. ವಶವಡಿಸಿಕೊಳ್ಳಲಾಗಿದೆ.

ಪೊಲೀಸರಿಗೆ  ಸಹಾಯ ಮಾಡಿದ ಉಚಿತ ಪಾನೀಯ

ಮಂದೀಪ್ ಕೌರ್ ಮತ್ತು ಆಕೆಯ ಪತಿ ಜಸ್ವಿಂದರ್ ಸಿಂಗ್ ನೇಪಾಳಕ್ಕೆ ಪಲಾಯನ ಮಾಡಲು ಯೋಜನೆ ಹಾಕಿದ್ದರು ಎಂದು ಪಂಜಾಬ್ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಆದರೆ ಅದಕ್ಕೂ ಮೊದಲು ಅವರು ಹರಿದ್ವಾರ, ಕೇದಾರನಾಥ ಮತ್ತು ಹೇಮಕುಂಟ್ ಸಾಹಿಬ್ ಸೇರಿದಂತೆ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವ ಯೋಜನೆಯನ್ನು ಹಾಕಿದ್ದರು.

ಉತ್ತರಾಖಂಡದ ಸಿಖ್ ದೇಗುಲಕ್ಕೆ ಭೇಟಿ ನೀಡುತ್ತಿದ್ದ ಅಪಾರ ಸಂಖ್ಯೆಯ ಭಕ್ತರು ನಡುವೆ ಅವರಿಬ್ಬರನ್ನು ಗುರುತಿಸುವುದು ಕಷ್ಟವಾಗಿತ್ತು. ಹಾಗಾಗಿ ಯಾತ್ರಾರ್ಥಿಗಳಿಗೆ ಉಚಿತ ಪಾನೀಯ ಸೇವೆಯನ್ನು ಹಮ್ಮಿಕೊಳ್ಳಲು ಪೊಲೀಸರು ಮುಂದಾಗಿದ್ದರು.

ಈ ವೇಳೆ ಆರೋಪಿ ದಂಪತಿ ಡ್ರಿಂಕ್ ಸ್ಟಾಲ್ ಬಳಿ ಬಂದಿದ್ದಾರೆ. ಈ ಸಮಯದಲ್ಲಿ ಯಾರು ನಮ್ಮನ್ನು ಗುರುತಿಸಬಾರದು ಎಂದು ಮುಖಗಳನ್ನು ಮುಚ್ಚಿಕೊಂಡಿದ್ದರು, ಆದರೆ ಜ್ಯೂಸ್​ ಕುಡಿಯಲು ತಮ್ಮ ಬಟ್ಟೆಯನ್ನು ಸರಿಸಲೇಬೇಕಿತ್ತು. ಈ ವೇಳೆ ಪೊಲೀಸರು ಅವರನ್ನು ಗುರುತಿಸಿದ್ದಾರೆ.

ದಂಪತಿಯನ್ನು ಬೆನ್ನಟ್ಟಿದ ಪೊಲೀಸರು

ಮಂದೀಪ್ ಕೌರ್ ಮತ್ತು ಜಸ್ವಿಂದರ್ ಸಿಂಗ್ ಅವರ ಗುರುತಿನ ಹೊರತಾಗಿಯೂ ಅವರನ್ನು ತಕ್ಷಣವೇ ಬಂಧಿಸಲಾಗಿಲ್ಲ. ಪೊಲೀಸರು ಅವರಿಗೆ ಹೇಮಕುಂಡ್ ಸಾಹಿಬ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಮಾಡಿಕೊಟ್ಟರು. ಆ ನಂತರವೇ ದಂಪತಿಯನ್ನು ಪೊಲೀಸರು ಸ್ವಲ್ಪ ದೂರದವರೆಗೆ ಬೆನ್ನಟ್ಟಿದ್ದಾರೆ.

ಅರನ್ನು ಹಿಡಿಯಲು ಒಂದು ಕಾರ್ಯಚರಣೆ ಹೆಸರು ಇಟ್ಟಿದ್ದರು. ‘ರಾಣಿ ಜೇನುನೊಣ ಹಿಡಿಯೋಣ’ ಎಂದು. ಲುಧಿಯಾನ ಪೊಲೀಸ್ ಕಮಿಷನರ್ ಮನ್ದೀಪ್ ಸಿಂಗ್ ಸಿಧು ಅವರ ಪ್ರಕಾರ, ಮನ್ದೀಪ್ ಕೌರ್ ಅವರ ದ್ವಿಚಕ್ರ ವಾಹನದಿಂದ 12 ಲಕ್ಷ ರೂ. ಮತ್ತು ಆಕೆಯ ಪತಿ ಜಸ್ವಿಂದರ್ ಸಿಂಗ್ ಅವರ ಬರ್ನಾಲಾ ಮನೆಯಿಂದ 9 ಲಕ್ಷ ರೂ. ದರೋಡೆ ಮಾಡಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: Bengaluru News: ದರೋಡೆಗೆ ಸಂಚು ರೂಪಿಸಿದ್ದ ರೌಡಿಶೀಟರ್​ನ ಐವರು ಸಹಚರರ ಸೆರೆ

ಮಂದೀಪ್ ಕೌರ್ ಅಕಾ ‘ಡಾಕು ಹಸೀನಾ’ ಯಾರು?

8.49 ಕೋಟಿ ಲೂಧಿಯಾನ ದರೋಡೆಯ ಹಿಂದಿನ ಆರೋಪಿ ಡಾಕು ಹಸೀನಾ ಎಂದು ಕರೆಯಲ್ಪಡುವ ಮಂದೀಪ್ ಕೌರ್. ಅವರು ಜೂನ್ 10ರಂದು ನ್ಯೂ ರಾಜಗುರು ನಗರ ಪ್ರದೇಶದ ಕಚೇರಿಯಲ್ಲಿ ಸಿಎಂಎಸ್ ಸೆಕ್ಯುರಿಟೀಸ್ ಕಂಪನಿಯ ಐವರು ಉದ್ಯೋಗಿಯಾಗಿದ್ದರು. ತನಿಖೆಯ ಪ್ರಕಾರ ಅವರು ತಕ್ಷಣ ಶ್ರೀಮಂತರಾಗಬೇಕು ಎಂಬ ಕಾರಣಕ್ಕೆ ಈ ಕಾರ್ಯವನ್ನು ಮಾಡಿದ್ದಾರೆ ಎಂದು ಹೇಳಲಾಗಿದೆ. ಮೊದಲು ವಿಮಾ ಏಜೆಂಟ್ ಮತ್ತು ವಕೀಲರ ಸಹಾಯಕರಾಗಿ ಕೆಲಸ ಮಾಡಿದರು. ನಂತರ 2023 ಫೆಬ್ರವರಿಯಲ್ಲಿ ಜಸ್ವಿಂದರ್ ಸಿಂಗ್ ಅವರನ್ನು ವಿವಾಹವಾದರು ಎಂದು ಪ್ರಾರ್ಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ