AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ; ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ ಬೆನ್ನಲ್ಲೇ, 8 ಜನರ ಸಜೀವ ದಹನ

ಭಡು ಶೇಖ್​ ಹತ್ಯೆಯಾಗಿದ್ದು ಯಾವುದೇ ರಾಜಕೀಯ ಬಣಗಳ ನಡುವಿನ ದ್ವೇಷಕ್ಕಲ್ಲ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್​ ಘೋಶ್​ ಟ್ವೀಟ್ ಮಾಡಿದ್ದಾರೆ.  ಈಗ ಉಂಟಾಗುತ್ತಿರುವ ಹಿಂಸಾಚಾರ ವಿಷಾದನೀಯ. ಆದರೆ ಈ ಘಟನೆಗಳಿಗೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ; ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ ಬೆನ್ನಲ್ಲೇ, 8 ಜನರ ಸಜೀವ ದಹನ
ಮನೆಗಳಿಗೆ ಬೆಂಕಿ ಇಟ್ಟಿರುವುದು
TV9 Web
| Updated By: Lakshmi Hegde|

Updated on: Mar 22, 2022 | 2:53 PM

Share

ಪಶ್ಚಿಮ ಬಂಗಾಳ (West Bengal)ದ ಬಿರ್ಬುಮ್​ ಜಿಲ್ಲೆಯ ರಾಂಪುರಹತ್​ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ಇಲ್ಲಿನ ಬರೋಸಾಲ್ ಗ್ರಾಮ​ ಪಂಚಾಯತ್​ ಉಪ ಪ್ರಧಾನ್​​ ಭಡು ಶೇಖ್​​ ಎಂಬುವರ ಹತ್ಯೆಯ ಬೆನ್ನಲ್ಲೇ ಈ ಹಿಂಸಾಚಾರ ಭುಗಿಲೆದ್ದಿದೆ. ಆಕ್ರೋಶಿತರ ಗುಂಪೊಂದು ಗಲಭೆ ನಡೆಸುತ್ತಿದೆ. ಮನೆಮನೆಗೆ ನುಗ್ಗಿ ದಾಂಧಲೆ ಎಬ್ಬಿಸುವುದಲ್ಲದೆ, ಸಿಕ್ಕಸಿಕ್ಕ ಮನೆ, ಅಂಗಡಿಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಈ ಹಿಂಸಾಚಾರದಲ್ಲಿ ಈಗಾಗಲೇ 8 ಜನರು ಸಜೀವ ದಹನಗೊಂಡಿದ್ದಾರೆ ಎಂದು ಬಿರ್ಬುಮ್ ಎಸ್​​ಪಿ ನಾಗೇಂದ್ರ ತ್ರಿಪಾಠಿ ತಿಳಿಸಿದ್ದಾರೆ.

ಭಡು ಶೇಖ್​ ತೃಣಮೂಲ ಕಾಂಗ್ರೆಸ್​​ನವರಾಗಿದ್ದು, ಭಗುಟಿ ಗ್ರಾಮ ನಿವಾಸಿ. ರಾಷ್ಟ್ರೀಯ ಹೆದ್ದಾರಿ 60ರಲ್ಲಿ ಅಂಗಡಿಯೊಂದರಲ್ಲಿ ನಿಂತಿದ್ದ ವೇಳೆ, ಬೈಕ್​​ನಲ್ಲಿ ನಾಲ್ವರು ಮುಖವನ್ನು ಮುಚ್ಚಿಕೊಂಡು ಬಂದು ಬಾಂಬ್​ ಹಾಕಿ ಭಡು ಅವರನ್ನು ಕೊಂದಿದ್ದರು.  ಹತ್ಯೆಯ ಬೆನ್ನಲ್ಲೇ ಭಡು ಶೇಖ್​ ಬೆಂಬಲಿಗರು ಭಗುಟಿ ಗ್ರಾಮದಲ್ಲಿ ದಾಂಧಲೆ ಎಬ್ಬಿಸಿದ್ದಾರೆ. ಪ್ರತಿಪಕ್ಷಗಳ ಕೆಲವು ಮುಖಂಡರು, ಕಾರ್ಯಕರ್ತರ ಮನೆಗೆ ಬೆಂಕಿ ಇಡುತ್ತಿದ್ದಾರೆ. ಸೋಮವಾರ ರಾತ್ರಿ 12ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಇಡಲಾಗಿದೆ. ಬೆಂಕಿ ನಿಯಂತ್ರಿಸಲು ನಾವು ಮಧ್ಯರಾತ್ರಿ ಬಂದರೂ, ನಮಗೆ ಗ್ರಾಮದ ಒಳಗೆ ಹೊಕ್ಕಲು ತುಂಬ ಹೊತ್ತು ಸಾಧ್ಯವಾಗಲಿಲ್ಲ ಎಂದು ಅಗ್ನಿಶಾಮಕ ದಳದವರು ತಿಳಿಸಿದ್ದಾರೆ. ಭಡು ಶೇಖ್ ಹತ್ಯೆ ಸಂಬಂಧ ಇದುವರೆಗೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಭುಗಿಲೆದ್ದ ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುವುದೇ ಕಷ್ಟವಾಗುತ್ತಿದೆ. ಸಜೀವ ದಹನಗೊಂಡವರ ಗುರುತು ಸಿಗುತ್ತಿಲ್ಲ. ಎಂಟು ಜನ ಬೆಂಕಿಗೆ ಆಹುತಿಯಾಗಿದ್ದು, ಇದುವರೆಗೆ ಏಳು ಶವಗಳನ್ನು ಹೊರತೆಗೆಯಲಾಗಿದೆ ಎಂದೂ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ರಾಜಕೀಯ ಕಾರಣಕ್ಕಲ್ಲ 

ಭಡು ಶೇಖ್​ ಹತ್ಯೆಯಾಗಿದ್ದು ಯಾವುದೇ ರಾಜಕೀಯ ಬಣಗಳ ನಡುವಿನ ದ್ವೇಷಕ್ಕಲ್ಲ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್​ ಘೋಶ್​ ಟ್ವೀಟ್ ಮಾಡಿದ್ದಾರೆ.  ಈಗ ಉಂಟಾಗುತ್ತಿರುವ ಹಿಂಸಾಚಾರ ವಿಷಾದನೀಯ. ಆದರೆ ಈ ಘಟನೆಗಳಿಗೂ ರಾಜಕೀಯಕ್ಕೂ ಸಂಬಂಧವಿಲ್ಲ. ಪಂಚಾಯತ್​​ನ ಉಪ ಮುಖ್ಯಸ್ಥನಾಗಿದ್ದ ಭಡು ಶೇಖ್ ಸ್ಥಳೀಯವಾಗಿ ಪ್ರಬಲ ನಾಯಕನಾಗಿದ್ದರು. ಅವರಿಗೆ ಹಲವು ಬೆಂಬಲಿಗರು ಇದ್ದಾರೆ. ಹೀಗಾಗಿ ಅವರ ಸಾವಿನ ನಂತರ ಅನುಯಾಯಿಗಳು ಸಿಟ್ಟಿಗೆದ್ದು ಗಲಭೆ, ಹಿಂಸಾಚಾರದಲ್ಲಿ ತೊಡಗಿದ್ದಾರೆ.  ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಯಾರು ಅಧಿಕಾರಕ್ಕೆ ತಂದರೋ ಗೊತ್ತಿಲ್ಲ: ಬೆಲೆ ಏರಿಕೆ ವಿರುದ್ಧ ಜಯಾ ಬಚ್ಚನ್ ವಾಗ್ದಾಳಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ