AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ; ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ ಬೆನ್ನಲ್ಲೇ, 8 ಜನರ ಸಜೀವ ದಹನ

ಭಡು ಶೇಖ್​ ಹತ್ಯೆಯಾಗಿದ್ದು ಯಾವುದೇ ರಾಜಕೀಯ ಬಣಗಳ ನಡುವಿನ ದ್ವೇಷಕ್ಕಲ್ಲ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್​ ಘೋಶ್​ ಟ್ವೀಟ್ ಮಾಡಿದ್ದಾರೆ.  ಈಗ ಉಂಟಾಗುತ್ತಿರುವ ಹಿಂಸಾಚಾರ ವಿಷಾದನೀಯ. ಆದರೆ ಈ ಘಟನೆಗಳಿಗೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ; ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ ಬೆನ್ನಲ್ಲೇ, 8 ಜನರ ಸಜೀವ ದಹನ
ಮನೆಗಳಿಗೆ ಬೆಂಕಿ ಇಟ್ಟಿರುವುದು
TV9 Web
| Edited By: |

Updated on: Mar 22, 2022 | 2:53 PM

Share

ಪಶ್ಚಿಮ ಬಂಗಾಳ (West Bengal)ದ ಬಿರ್ಬುಮ್​ ಜಿಲ್ಲೆಯ ರಾಂಪುರಹತ್​ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ಇಲ್ಲಿನ ಬರೋಸಾಲ್ ಗ್ರಾಮ​ ಪಂಚಾಯತ್​ ಉಪ ಪ್ರಧಾನ್​​ ಭಡು ಶೇಖ್​​ ಎಂಬುವರ ಹತ್ಯೆಯ ಬೆನ್ನಲ್ಲೇ ಈ ಹಿಂಸಾಚಾರ ಭುಗಿಲೆದ್ದಿದೆ. ಆಕ್ರೋಶಿತರ ಗುಂಪೊಂದು ಗಲಭೆ ನಡೆಸುತ್ತಿದೆ. ಮನೆಮನೆಗೆ ನುಗ್ಗಿ ದಾಂಧಲೆ ಎಬ್ಬಿಸುವುದಲ್ಲದೆ, ಸಿಕ್ಕಸಿಕ್ಕ ಮನೆ, ಅಂಗಡಿಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಈ ಹಿಂಸಾಚಾರದಲ್ಲಿ ಈಗಾಗಲೇ 8 ಜನರು ಸಜೀವ ದಹನಗೊಂಡಿದ್ದಾರೆ ಎಂದು ಬಿರ್ಬುಮ್ ಎಸ್​​ಪಿ ನಾಗೇಂದ್ರ ತ್ರಿಪಾಠಿ ತಿಳಿಸಿದ್ದಾರೆ.

ಭಡು ಶೇಖ್​ ತೃಣಮೂಲ ಕಾಂಗ್ರೆಸ್​​ನವರಾಗಿದ್ದು, ಭಗುಟಿ ಗ್ರಾಮ ನಿವಾಸಿ. ರಾಷ್ಟ್ರೀಯ ಹೆದ್ದಾರಿ 60ರಲ್ಲಿ ಅಂಗಡಿಯೊಂದರಲ್ಲಿ ನಿಂತಿದ್ದ ವೇಳೆ, ಬೈಕ್​​ನಲ್ಲಿ ನಾಲ್ವರು ಮುಖವನ್ನು ಮುಚ್ಚಿಕೊಂಡು ಬಂದು ಬಾಂಬ್​ ಹಾಕಿ ಭಡು ಅವರನ್ನು ಕೊಂದಿದ್ದರು.  ಹತ್ಯೆಯ ಬೆನ್ನಲ್ಲೇ ಭಡು ಶೇಖ್​ ಬೆಂಬಲಿಗರು ಭಗುಟಿ ಗ್ರಾಮದಲ್ಲಿ ದಾಂಧಲೆ ಎಬ್ಬಿಸಿದ್ದಾರೆ. ಪ್ರತಿಪಕ್ಷಗಳ ಕೆಲವು ಮುಖಂಡರು, ಕಾರ್ಯಕರ್ತರ ಮನೆಗೆ ಬೆಂಕಿ ಇಡುತ್ತಿದ್ದಾರೆ. ಸೋಮವಾರ ರಾತ್ರಿ 12ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಇಡಲಾಗಿದೆ. ಬೆಂಕಿ ನಿಯಂತ್ರಿಸಲು ನಾವು ಮಧ್ಯರಾತ್ರಿ ಬಂದರೂ, ನಮಗೆ ಗ್ರಾಮದ ಒಳಗೆ ಹೊಕ್ಕಲು ತುಂಬ ಹೊತ್ತು ಸಾಧ್ಯವಾಗಲಿಲ್ಲ ಎಂದು ಅಗ್ನಿಶಾಮಕ ದಳದವರು ತಿಳಿಸಿದ್ದಾರೆ. ಭಡು ಶೇಖ್ ಹತ್ಯೆ ಸಂಬಂಧ ಇದುವರೆಗೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಭುಗಿಲೆದ್ದ ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುವುದೇ ಕಷ್ಟವಾಗುತ್ತಿದೆ. ಸಜೀವ ದಹನಗೊಂಡವರ ಗುರುತು ಸಿಗುತ್ತಿಲ್ಲ. ಎಂಟು ಜನ ಬೆಂಕಿಗೆ ಆಹುತಿಯಾಗಿದ್ದು, ಇದುವರೆಗೆ ಏಳು ಶವಗಳನ್ನು ಹೊರತೆಗೆಯಲಾಗಿದೆ ಎಂದೂ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ರಾಜಕೀಯ ಕಾರಣಕ್ಕಲ್ಲ 

ಭಡು ಶೇಖ್​ ಹತ್ಯೆಯಾಗಿದ್ದು ಯಾವುದೇ ರಾಜಕೀಯ ಬಣಗಳ ನಡುವಿನ ದ್ವೇಷಕ್ಕಲ್ಲ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್​ ಘೋಶ್​ ಟ್ವೀಟ್ ಮಾಡಿದ್ದಾರೆ.  ಈಗ ಉಂಟಾಗುತ್ತಿರುವ ಹಿಂಸಾಚಾರ ವಿಷಾದನೀಯ. ಆದರೆ ಈ ಘಟನೆಗಳಿಗೂ ರಾಜಕೀಯಕ್ಕೂ ಸಂಬಂಧವಿಲ್ಲ. ಪಂಚಾಯತ್​​ನ ಉಪ ಮುಖ್ಯಸ್ಥನಾಗಿದ್ದ ಭಡು ಶೇಖ್ ಸ್ಥಳೀಯವಾಗಿ ಪ್ರಬಲ ನಾಯಕನಾಗಿದ್ದರು. ಅವರಿಗೆ ಹಲವು ಬೆಂಬಲಿಗರು ಇದ್ದಾರೆ. ಹೀಗಾಗಿ ಅವರ ಸಾವಿನ ನಂತರ ಅನುಯಾಯಿಗಳು ಸಿಟ್ಟಿಗೆದ್ದು ಗಲಭೆ, ಹಿಂಸಾಚಾರದಲ್ಲಿ ತೊಡಗಿದ್ದಾರೆ.  ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಯಾರು ಅಧಿಕಾರಕ್ಕೆ ತಂದರೋ ಗೊತ್ತಿಲ್ಲ: ಬೆಲೆ ಏರಿಕೆ ವಿರುದ್ಧ ಜಯಾ ಬಚ್ಚನ್ ವಾಗ್ದಾಳಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ