AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ 8 ಚೀತಾಗಳೇನೋ ಬಂದವು, ಆದರೆ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳು ಏಕೆ ಬರಲಿಲ್ಲ: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಚೀತಾ ಸಂರಕ್ಷಣೆ ಯೋಜನೆಯನ್ನು ನಿರುದ್ಯೋಗಕ್ಕೆ ತಳಕು ಹಾಕಿ ಹಿಂದಿಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಭಾರತಕ್ಕೆ 8 ಚೀತಾಗಳೇನೋ ಬಂದವು, ಆದರೆ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳು ಏಕೆ ಬರಲಿಲ್ಲ: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ
TV9 Web
| Edited By: |

Updated on:Sep 18, 2022 | 8:51 AM

Share

ದೆಹಲಿ: ಭಾರತಕ್ಕೆ ಎಂಟು ಚೀತಾಗಳೇನೋ (Cheetah) ಬಂದವು. ಆಧರೆ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳು ಏಕೆ ಸೃಷ್ಟಿಯಾಗಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ ಶನಿವಾರ 72ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಎಂಟು ಚೀತಾಗಳನ್ನು ಬಿಡಲಾಯಿತು. ಭಾರತದಲ್ಲಿ ಅಳಿದುಹೋಗಿವೆ ಎಂದು ಘೋಷಿಸಿದ ಏಳು ದಶಕಗಳ ನಂತರ ಮಹತ್ವದ ಯೋಜನೆಯ ಭಾಗವಾಗಿ ಆಫ್ರಿಕಾದಿಂದ ಚೀತಾಗಳನ್ನು ತರಲಾಯಿತು. ಇದು ಪ್ರಧಾನಿ ನರೇಂದ್ರ ಮೋದಿ ಅವರ ಹಲವು ಮಹತ್ವಾಕಾಂಕ್ಷೆ ಯೋಜನೆಗಳ ಪೈಕಿ ಒಂದಾಗಿದೆ.

ಚೀತಾ ಸಂರಕ್ಷಣೆ ಯೋಜನೆಯನ್ನು ನಿರುದ್ಯೋಗಕ್ಕೆ ತಳಕು ಹಾಕಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ಎಂಟು ಚೀತಾಗಳು ಬಂದಿವೆ, ಎಂಟು ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳು ಏಕೆ ಬರಲಿಲ್ಲ ಎಂದು ಈಗ ಹೇಳಿ’ ಎಂದು ಪ್ರಶ್ನಿಸಿದ್ದಾರೆ. ‘ನಮಗೆ ಉದ್ಯೋಗ ಬೇಕು ಎಂದು ದೇಶದ ಯುವಕರು ಗೋಳಾಡುತ್ತಿದ್ದಾರೆ’ ಎಂದು ‘ರಾಷ್ಟ್ರೀಯ ಬೆರೋಜ್​ಗಾರ್ ದಿವಸ್’ (Rashtriya Berozgar Diwas) ಹ್ಯಾಷ್​ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿನ ನಿರುದ್ಯೋಗ ಪರಿಸ್ಥಿತಿಯನ್ನು ಗಮನಿಸಿ ಯುವಕರು ಪ್ರಧಾನಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ವಾಗಿ ಆಚರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಕೇಂದ್ರ ಸರ್ಕಾರವು ಈ ಮೊದಲು ಭರವಸೆ ನೀಡಿದ್ದಂತೆ ಯುವಜನರಿಗೆ ಉದ್ಯೋಗ ಒದಗಿಸಬೇಕು’ ಎಂದು ಕಾಂಗ್ರೆಸ್ ಶನಿವಾರ ಒತ್ತಾಯಿಸಿದೆ.

ವಾರ್ಷಿಕ ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಮೋದಿ ಭರವಸೆ ನೀಡಿದರು ಆದರೆ ಕಳೆದ ಎಂಟು ವರ್ಷಗಳಲ್ಲಿ ಕೇವಲ ಏಳು ಲಕ್ಷ ಜನರಿಗೆ ಮಾತ್ರ ಉದ್ಯೋಗ ನೀಡಲಾಗಿದೆ ಎಂದು ಅದು ಹೇಳಿದೆ.

Published On - 8:47 am, Sun, 18 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ