AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ 8 ಚೀತಾಗಳೇನೋ ಬಂದವು, ಆದರೆ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳು ಏಕೆ ಬರಲಿಲ್ಲ: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಚೀತಾ ಸಂರಕ್ಷಣೆ ಯೋಜನೆಯನ್ನು ನಿರುದ್ಯೋಗಕ್ಕೆ ತಳಕು ಹಾಕಿ ಹಿಂದಿಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಭಾರತಕ್ಕೆ 8 ಚೀತಾಗಳೇನೋ ಬಂದವು, ಆದರೆ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳು ಏಕೆ ಬರಲಿಲ್ಲ: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ
TV9 Web
| Edited By: |

Updated on:Sep 18, 2022 | 8:51 AM

Share

ದೆಹಲಿ: ಭಾರತಕ್ಕೆ ಎಂಟು ಚೀತಾಗಳೇನೋ (Cheetah) ಬಂದವು. ಆಧರೆ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳು ಏಕೆ ಸೃಷ್ಟಿಯಾಗಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿ ಶನಿವಾರ 72ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಎಂಟು ಚೀತಾಗಳನ್ನು ಬಿಡಲಾಯಿತು. ಭಾರತದಲ್ಲಿ ಅಳಿದುಹೋಗಿವೆ ಎಂದು ಘೋಷಿಸಿದ ಏಳು ದಶಕಗಳ ನಂತರ ಮಹತ್ವದ ಯೋಜನೆಯ ಭಾಗವಾಗಿ ಆಫ್ರಿಕಾದಿಂದ ಚೀತಾಗಳನ್ನು ತರಲಾಯಿತು. ಇದು ಪ್ರಧಾನಿ ನರೇಂದ್ರ ಮೋದಿ ಅವರ ಹಲವು ಮಹತ್ವಾಕಾಂಕ್ಷೆ ಯೋಜನೆಗಳ ಪೈಕಿ ಒಂದಾಗಿದೆ.

ಚೀತಾ ಸಂರಕ್ಷಣೆ ಯೋಜನೆಯನ್ನು ನಿರುದ್ಯೋಗಕ್ಕೆ ತಳಕು ಹಾಕಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ಎಂಟು ಚೀತಾಗಳು ಬಂದಿವೆ, ಎಂಟು ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳು ಏಕೆ ಬರಲಿಲ್ಲ ಎಂದು ಈಗ ಹೇಳಿ’ ಎಂದು ಪ್ರಶ್ನಿಸಿದ್ದಾರೆ. ‘ನಮಗೆ ಉದ್ಯೋಗ ಬೇಕು ಎಂದು ದೇಶದ ಯುವಕರು ಗೋಳಾಡುತ್ತಿದ್ದಾರೆ’ ಎಂದು ‘ರಾಷ್ಟ್ರೀಯ ಬೆರೋಜ್​ಗಾರ್ ದಿವಸ್’ (Rashtriya Berozgar Diwas) ಹ್ಯಾಷ್​ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿನ ನಿರುದ್ಯೋಗ ಪರಿಸ್ಥಿತಿಯನ್ನು ಗಮನಿಸಿ ಯುವಕರು ಪ್ರಧಾನಿಯ ಜನ್ಮದಿನವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ’ವಾಗಿ ಆಚರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಕೇಂದ್ರ ಸರ್ಕಾರವು ಈ ಮೊದಲು ಭರವಸೆ ನೀಡಿದ್ದಂತೆ ಯುವಜನರಿಗೆ ಉದ್ಯೋಗ ಒದಗಿಸಬೇಕು’ ಎಂದು ಕಾಂಗ್ರೆಸ್ ಶನಿವಾರ ಒತ್ತಾಯಿಸಿದೆ.

ವಾರ್ಷಿಕ ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಮೋದಿ ಭರವಸೆ ನೀಡಿದರು ಆದರೆ ಕಳೆದ ಎಂಟು ವರ್ಷಗಳಲ್ಲಿ ಕೇವಲ ಏಳು ಲಕ್ಷ ಜನರಿಗೆ ಮಾತ್ರ ಉದ್ಯೋಗ ನೀಡಲಾಗಿದೆ ಎಂದು ಅದು ಹೇಳಿದೆ.

Published On - 8:47 am, Sun, 18 September 22

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!