ಪ್ರವಾಸದ ವೇಳೆ.. ಮದ್ಯ ಸಿಗದಿದ್ದಕ್ಕೆ ಸ್ಯಾನಿಟೈಸರ್‌ ಕುಡಿದು 10 ಮಂದಿ ಸಾವು, ಎಲ್ಲಿ?

ಆಂಧ್ರ ಪ್ರದೇಶ: ಕುಡಿಯಲು ಮಧ್ಯ ಸಿಗದಿದ್ದಕ್ಕೆ , ಸ್ಯಾನಿಟೈಸರ್ ಕುಡಿದು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡುನಲ್ಲಿ ಈ ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಪ್ರವಾಸಿ ತಂಡದವರು ಎನ್ನಲಾಗಿದೆ. ಕುಡಿಯಲು ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದಿದ್ದಾರೆ ಎನ್ನಲಾದ 10 ಜನರಲ್ಲಿ 3 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಉಳಿದ 7 ಜನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಪ್ರಕಾಶಂ ಜಿಲ್ಲಾ ಪೊಲೀಸರು ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ […]

ಪ್ರವಾಸದ ವೇಳೆ.. ಮದ್ಯ ಸಿಗದಿದ್ದಕ್ಕೆ ಸ್ಯಾನಿಟೈಸರ್‌ ಕುಡಿದು 10 ಮಂದಿ ಸಾವು, ಎಲ್ಲಿ?
ಸಾಧು ಶ್ರೀನಾಥ್​

Updated on: Jul 31, 2020 | 12:06 PM

ಆಂಧ್ರ ಪ್ರದೇಶ: ಕುಡಿಯಲು ಮಧ್ಯ ಸಿಗದಿದ್ದಕ್ಕೆ , ಸ್ಯಾನಿಟೈಸರ್ ಕುಡಿದು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡುನಲ್ಲಿ ಈ ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಪ್ರವಾಸಿ ತಂಡದವರು ಎನ್ನಲಾಗಿದೆ. ಕುಡಿಯಲು ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದಿದ್ದಾರೆ ಎನ್ನಲಾದ 10 ಜನರಲ್ಲಿ 3 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಉಳಿದ 7 ಜನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಈ ಘಟನೆಯ ಬಗ್ಗೆ ಪ್ರಕಾಶಂ ಜಿಲ್ಲಾ ಪೊಲೀಸರು ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಈ 10 ಜನ ಕಳಪೆ ನಾಟಿ ಸಾರಾಯಿ ಸೇವಿಸಿ ಸಾವನ್ನಪ್ಪಿದಾರೆಂಬುದು ಪೊಲೀಸರ ಅಭಿಪ್ರಾಯವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಪ್ರಕಾಶಂ‌ ಜಿಲ್ಲಾ‌ ಪೊಲೀಸರು ತಿಳಿಸಿದ್ದಾರೆ.

Published On - 10:42 am, Fri, 31 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us