AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಾನ್‌ನಲ್ಲಿ ಮಗುಚಿದ ತೈಲ ಸಾಗಣೆ ಹಡಗು; 9 ಸಿಬ್ಬಂದಿ ಪೈಕಿ 8 ಭಾರತೀಯರ ರಕ್ಷಣೆ

ಒಮಾನ್​​ನ ಪ್ರಮುಖ ಬಂದರು ಡುಗ್ಮ್ ನಿಂದ ಹೊರಟಿದ್ದ ಪ್ರೆಸ್ಟೀಜ್ ಪಾಲ್ಕನ್ ಹಡಗು ಒಮಾನ್ ಸಾಗರ ಪ್ರದೇಶದಲ್ಲಿ ಮಗುಚಿದೆ. ಈ ಹಡಗಿನಲ್ಲಿ ಪೂರ್ವ ಕಾರ್ಮೋಸ್ ದೇಶದ ತೈಲ ಟ್ಯಾಂಕರ್ ಇತ್ತು ಎಂದು ಸಾಗರ ಭದ್ರತಾ ಕೇಂದ್ರ ಹೇಳಿದೆ. ಈ ಹಡಗು ಯೆಮನ್​​ನ ಅದೆನ್​​ಗೆ ಹೊರಟಿತ್ತು ಎಂದು ಹೇಳಲಾಗಿದೆ. ಹಡಗು ಮುಳುಗಿ ನಾಪತ್ತೆಯಾಗಿದ್ದ 16 ಮಂದಿಯಲ್ಲಿ ಒಂಬತ್ತು ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಒಮಾನ್‌ನಲ್ಲಿ ಮಗುಚಿದ ತೈಲ ಸಾಗಣೆ ಹಡಗು; 9 ಸಿಬ್ಬಂದಿ ಪೈಕಿ 8 ಭಾರತೀಯರ ರಕ್ಷಣೆ
ಮುಳುಗಿದ ಹಡಗು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 17, 2024 | 8:59 PM

Share

ಒಮಾನ್ ಜುಲೈ 17: ಒಮಾನ್ (Oman) ಕರಾವಳಿಯಲ್ಲಿ ಹಡಗು ಮುಳುಗಿ ನಾಪತ್ತೆಯಾಗಿದ್ದ 16 ಮಂದಿಯಲ್ಲಿ ಒಂಬತ್ತು ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ಒಂಬತ್ತು ಸದಸ್ಯರಲ್ಲಿ ಎಂಟು ಮಂದಿ ಭಾರತೀಯರು ಮತ್ತು ಒಬ್ಬರು ಶ್ರೀಲಂಕಾದವರು ಎಂದು ಮೂಲಗಳು ತಿಳಿಸಿವೆ. ಒಮಾನ್​​ನ ಪ್ರಮುಖ ಬಂದರು ಡುಗ್ಮ್ ನಿಂದ(Duqm )ಹೊರಟಿದ್ದ ಪ್ರೆಸ್ಟೀಜ್ ಪಾಲ್ಕನ್ ಹಡಗು (MT Falcon Prestige) ಒಮಾನ್ ಸಾಗರ ಪ್ರದೇಶದಲ್ಲಿ ಮಗುಚಿದೆ. ಈ ಹಡಗಿನಲ್ಲಿ ಪೂರ್ವ ಕಾರ್ಮೋಸ್ ದೇಶದ ತೈಲ ಟ್ಯಾಂಕರ್ ಇತ್ತು ಎಂದು ಸಾಗರ ಭದ್ರತಾ ಕೇಂದ್ರ ಹೇಳಿದೆ. ಈ ಹಡಗು ಯೆಮನ್​​ನ ಅದೆನ್​​ಗೆ ಹೊರಟಿತ್ತು ಎಂದು ಹೇಳಲಾಗಿದೆ.

ಡುಗ್ಮ್ ಬಂದರು ಒಮಾನ್‌ನ ನೈಋತ್ಯ ಕರಾವಳಿಯಲ್ಲಿದೆ. ಇದು ಸುಲ್ತಾನೇಟ್‌ನ ಪ್ರಮುಖ ತೈಲ ಮತ್ತು ಅನಿಲ ಗಣಿಗಾರಿಕೆ ಯೋಜನೆಗಳಿಗೆ ಸಮೀಪದಲ್ಲಿದೆ. ಇದು ಡುಗ್ಮ್​​​ನ   ವಿಶಾಲವಾದ ಕೈಗಾರಿಕಾ ವಲಯದ ಭಾಗವಾಗಿರುವ ಪ್ರಮುಖ ತೈಲ ಸಂಸ್ಕರಣಾಗಾರವನ್ನು ಒಳಗೊಂಡಂತೆ, ಒಮಾನ್‌ನ ಅತಿದೊಡ್ಡ ಏಕ ಆರ್ಥಿಕ ಯೋಜನೆಯಾಗಿದೆ.

ಮುಳುಗಿದ ತೈಲ ಟ್ಯಾಂಕರ್ ಜುಲೈ 15 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಒಮಾನ್ ಕರಾವಳಿಯಲ್ಲಿ ದುರಂತದ ಕರೆಯನ್ನು ರವಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ರಾಯಭಾರ ಕಚೇರಿಯು ಒಮಾನಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಶೋಧ ಮತ್ತು ರಕ್ಷಣಾ (ಎಸ್‌ಎಆರ್) ಕಾರ್ಯಾಚರಣೆಯನ್ನು ಒಮನ್ ಸಮುದ್ರ ಭದ್ರತಾ ಕೇಂದ್ರವು ಸಮನ್ವಯಗೊಳಿಸುತ್ತಿದೆ. ಭಾರತೀಯ ನೌಕಾಪಡೆಯು ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಯೋಗಿ ಆದಿತ್ಯನಾಥ್- ಕೇಶವ್ ಮೌರ್ಯ ನಡುವೆ ಭಿನ್ನಾಭಿಪ್ರಾಯ?; ಪ್ರಧಾನಿ ಮೋದಿ ಭೇಟಿ ಮಾಡಿದ ಯುಪಿ ಬಿಜೆಪಿ ಮುಖ್ಯಸ್ಥ

ಭಾರತೀಯ ನೌಕಾಪಡೆಯ ಯುದ್ಧನೌಕೆ INS Teg ಅನ್ನು ಸಮುದ್ರ ಕಣ್ಗಾವಲು ವಿಮಾನ P-8I ಜೊತೆಗೆ ಒಮಾನಿ ಹಡಗುಗಳು ಮತ್ತು ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Wed, 17 July 24

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ