AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಾನ್‌ನಲ್ಲಿ ಮಗುಚಿದ ತೈಲ ಸಾಗಣೆ ಹಡಗು; 9 ಸಿಬ್ಬಂದಿ ಪೈಕಿ 8 ಭಾರತೀಯರ ರಕ್ಷಣೆ

ಒಮಾನ್​​ನ ಪ್ರಮುಖ ಬಂದರು ಡುಗ್ಮ್ ನಿಂದ ಹೊರಟಿದ್ದ ಪ್ರೆಸ್ಟೀಜ್ ಪಾಲ್ಕನ್ ಹಡಗು ಒಮಾನ್ ಸಾಗರ ಪ್ರದೇಶದಲ್ಲಿ ಮಗುಚಿದೆ. ಈ ಹಡಗಿನಲ್ಲಿ ಪೂರ್ವ ಕಾರ್ಮೋಸ್ ದೇಶದ ತೈಲ ಟ್ಯಾಂಕರ್ ಇತ್ತು ಎಂದು ಸಾಗರ ಭದ್ರತಾ ಕೇಂದ್ರ ಹೇಳಿದೆ. ಈ ಹಡಗು ಯೆಮನ್​​ನ ಅದೆನ್​​ಗೆ ಹೊರಟಿತ್ತು ಎಂದು ಹೇಳಲಾಗಿದೆ. ಹಡಗು ಮುಳುಗಿ ನಾಪತ್ತೆಯಾಗಿದ್ದ 16 ಮಂದಿಯಲ್ಲಿ ಒಂಬತ್ತು ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಒಮಾನ್‌ನಲ್ಲಿ ಮಗುಚಿದ ತೈಲ ಸಾಗಣೆ ಹಡಗು; 9 ಸಿಬ್ಬಂದಿ ಪೈಕಿ 8 ಭಾರತೀಯರ ರಕ್ಷಣೆ
ಮುಳುಗಿದ ಹಡಗು
Follow us
ರಶ್ಮಿ ಕಲ್ಲಕಟ್ಟ
|

Updated on:Jul 17, 2024 | 8:59 PM

ಒಮಾನ್ ಜುಲೈ 17: ಒಮಾನ್ (Oman) ಕರಾವಳಿಯಲ್ಲಿ ಹಡಗು ಮುಳುಗಿ ನಾಪತ್ತೆಯಾಗಿದ್ದ 16 ಮಂದಿಯಲ್ಲಿ ಒಂಬತ್ತು ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ಒಂಬತ್ತು ಸದಸ್ಯರಲ್ಲಿ ಎಂಟು ಮಂದಿ ಭಾರತೀಯರು ಮತ್ತು ಒಬ್ಬರು ಶ್ರೀಲಂಕಾದವರು ಎಂದು ಮೂಲಗಳು ತಿಳಿಸಿವೆ. ಒಮಾನ್​​ನ ಪ್ರಮುಖ ಬಂದರು ಡುಗ್ಮ್ ನಿಂದ(Duqm )ಹೊರಟಿದ್ದ ಪ್ರೆಸ್ಟೀಜ್ ಪಾಲ್ಕನ್ ಹಡಗು (MT Falcon Prestige) ಒಮಾನ್ ಸಾಗರ ಪ್ರದೇಶದಲ್ಲಿ ಮಗುಚಿದೆ. ಈ ಹಡಗಿನಲ್ಲಿ ಪೂರ್ವ ಕಾರ್ಮೋಸ್ ದೇಶದ ತೈಲ ಟ್ಯಾಂಕರ್ ಇತ್ತು ಎಂದು ಸಾಗರ ಭದ್ರತಾ ಕೇಂದ್ರ ಹೇಳಿದೆ. ಈ ಹಡಗು ಯೆಮನ್​​ನ ಅದೆನ್​​ಗೆ ಹೊರಟಿತ್ತು ಎಂದು ಹೇಳಲಾಗಿದೆ.

ಡುಗ್ಮ್ ಬಂದರು ಒಮಾನ್‌ನ ನೈಋತ್ಯ ಕರಾವಳಿಯಲ್ಲಿದೆ. ಇದು ಸುಲ್ತಾನೇಟ್‌ನ ಪ್ರಮುಖ ತೈಲ ಮತ್ತು ಅನಿಲ ಗಣಿಗಾರಿಕೆ ಯೋಜನೆಗಳಿಗೆ ಸಮೀಪದಲ್ಲಿದೆ. ಇದು ಡುಗ್ಮ್​​​ನ   ವಿಶಾಲವಾದ ಕೈಗಾರಿಕಾ ವಲಯದ ಭಾಗವಾಗಿರುವ ಪ್ರಮುಖ ತೈಲ ಸಂಸ್ಕರಣಾಗಾರವನ್ನು ಒಳಗೊಂಡಂತೆ, ಒಮಾನ್‌ನ ಅತಿದೊಡ್ಡ ಏಕ ಆರ್ಥಿಕ ಯೋಜನೆಯಾಗಿದೆ.

ಮುಳುಗಿದ ತೈಲ ಟ್ಯಾಂಕರ್ ಜುಲೈ 15 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಒಮಾನ್ ಕರಾವಳಿಯಲ್ಲಿ ದುರಂತದ ಕರೆಯನ್ನು ರವಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ರಾಯಭಾರ ಕಚೇರಿಯು ಒಮಾನಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಶೋಧ ಮತ್ತು ರಕ್ಷಣಾ (ಎಸ್‌ಎಆರ್) ಕಾರ್ಯಾಚರಣೆಯನ್ನು ಒಮನ್ ಸಮುದ್ರ ಭದ್ರತಾ ಕೇಂದ್ರವು ಸಮನ್ವಯಗೊಳಿಸುತ್ತಿದೆ. ಭಾರತೀಯ ನೌಕಾಪಡೆಯು ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಯೋಗಿ ಆದಿತ್ಯನಾಥ್- ಕೇಶವ್ ಮೌರ್ಯ ನಡುವೆ ಭಿನ್ನಾಭಿಪ್ರಾಯ?; ಪ್ರಧಾನಿ ಮೋದಿ ಭೇಟಿ ಮಾಡಿದ ಯುಪಿ ಬಿಜೆಪಿ ಮುಖ್ಯಸ್ಥ

ಭಾರತೀಯ ನೌಕಾಪಡೆಯ ಯುದ್ಧನೌಕೆ INS Teg ಅನ್ನು ಸಮುದ್ರ ಕಣ್ಗಾವಲು ವಿಮಾನ P-8I ಜೊತೆಗೆ ಒಮಾನಿ ಹಡಗುಗಳು ಮತ್ತು ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Wed, 17 July 24

ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ