AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಪ್ರವಾಸಿ ಬಸ್ ಪ್ರಪಾತಕ್ಕೆ ಬಿದ್ದು 8 ಜನ ಸಾವು

ತಮಿಳುನಾಡಿನ ನೀಲಗಿರಿ ಜಿಲ್ಲೆ ಕೂನೂರು ಬಳಿ ಪ್ರಪಾತಕ್ಕೆ ಪ್ರವಾಸಿ ಬಸ್​ ಬಿದ್ದು 8 ಜನ ಮೃತಪಟ್ಟಿದ್ದಾರೆ. 35 ಜನರಿಗೆ ಗಾಯಗಳಾಗಿದ್ದು, ಕೂನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡಿನಲ್ಲಿ ಪ್ರವಾಸಿ ಬಸ್ ಪ್ರಪಾತಕ್ಕೆ ಬಿದ್ದು 8 ಜನ ಸಾವು
ಪ್ರಪಾತಕ್ಕೆ ಬಿದ್ದ ಬಸ್​
TV9 Web
| Edited By: ವಿವೇಕ ಬಿರಾದಾರ|

Updated on:Oct 01, 2023 | 7:22 AM

Share

ಚೆನ್ನೈ ಅ.01: ತಮಿಳುನಾಡಿನ (Tamilanadu) ನೀಲಗಿರಿ ಜಿಲ್ಲೆಯ ಕೂನೂರು ಬಳಿಯ ಮರಪಾಲಂನಲ್ಲಿ ಪ್ರಪಾತಕ್ಕೆ ಪ್ರವಾಸಿ ಬಸ್​ (Tourist Bus) ಬಿದ್ದು 8 ಜನ ಮೃತಪಟ್ಟಿದ್ದಾರೆ. 35 ಜನರಿಗೆ ಗಾಯಗಳಾಗಿದ್ದು, ಕೂನೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವಾಸಿ ಬಸ್​ನಲ್ಲಿ ಒಟ್ಟು 55 ಜನ ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದೆ. ಮೃತರಿಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಗೆ ತಲಾ 50 ಸಾವಿರ ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿ ಸೂಚಿಸಿದ್ದಾರೆ.

ಪೊಲೀಸರ ಪ್ರಕಾರ, ಪ್ರವಾಸಿ ಬಸ್ ಕೊಯಮತ್ತೂರು ಜಿಲ್ಲೆಯ ಊಟಿಯಿಂದ ಮೆಟ್ಟುಪಾಳ್ಯಂಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕುನ್ನೂರು ಬಳಿಯ ಮರಪಾಲಂ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ 100 ಅಡಿ ಆಳದ ಕಂದಕಕ್ಕೆ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಮತ್ತೊಂದು ಭೀಕರ ಅಪಘಾತ, ಕಾರಿನಲ್ಲಿದ್ದ ನಾಲ್ವರು ದುರ್ಮರಣ

ಪೊಲೀಸರಿಂದ ಬಂದಿರುವ ಮಾಹಿತಿ ಪ್ರಕಾರ ನಾಲ್ವರು ಮಹಿಳೆಯರು ಹಾಗೂ ಓರ್ವ ಅಪ್ರಾಪ್ತ ಮೃತಪಟ್ಟಿದ್ದಾನೆ. ನಿಧನರಾದವರು ತೆಂಕಶಿ ಜಿಲ್ಲೆಯ ಕಡಯಂ ನಿವಾಸಿಯವರು ಎಂಬುವುದು ತಿಳಿದುಬಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Sun, 1 October 23

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ